Advertisement
ರಾಷ್ಟ್ರೀಯ

ವಿಶ್ವಕಪ್ ಕ್ರಿಕೆಟ್- ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

Share

ಮ್ಯಾಂಚೆಸ್ಟರ್​: ತೀವ್ರ ಕುತೂಹಲ ಕೆರಳಿದ್ದ ಹೈವೋಲ್ಟೇಜ್​ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ 89 ರನ್​ಗಳಿಂದ ಭರ್ಜರಿ ಜಯಗಳಿಸಿದೆ. ಈ ಮೂಲಕ ವಿಶ್ವಕಪ್​ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ತನ್ನ ಅಜೇಯ ಓಟವನ್ನು ಮುಂದುವರಿಸಿದೆ.

ಮಳೆಯಿಂದ ಅಡ್ಡಿಯುಂಟಾದ ಪಂದ್ಯದಲ್ಲಿ ಡಕ್ ವರ್ತ್ ಲೂಯಿಸ್​ ನಿಯಮದ ಪ್ರಕಾರ ಪಾಕಿಸ್ತಾನಕ್ಕೆ 40 ಓವರ್​ಗಳಲ್ಲಿ 302 ರನ್​ ಗಳಿಸುವ ಗುರಿ ನೀಡಲಾಯಿತು. ಮಳೆಯಿಂದ ಪಂದ್ಯಕ್ಕೆ ಅಡ್ಡಿಯಾಗುವ ಮುನ್ನ 35 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 166 ರನ್​ ಗಳಿಸಿದ್ದ ಪಾಕಿಸ್ತಾನ ಅಂತಿಮವಾಗಿ 40 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 212 ರನ್​ ಗಳಿಸಿ ಸೋಲನ್ನೊಪ್ಪಿಕೊಂಡಿತು.

ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ್ದ ಭಾರತ ತಂಡ 50 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 336 ರನ್​ ಗಳಿಸಿತ್ತು.  ರೋಹಿತ್ ಶರ್ಮಾ ಆಕರ್ಷಕ ಶತಕ ಹಾಗೂ ಬೌಲರ್‌ಗಳ ಸಂಘಟಿತ ದಾಳಿಯ ನೆರವಿನಿಂದ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಮತ್ತೊಂದು ವಿಶ್ವಕಪ್ ಪಂದ್ಯವನ್ನು ಗೆದ್ದುಕೊಂಡಿತು.

 

ಗೆಲ್ಲಲು 337 ರನ್ ಕಠಿಣ ಸವಾಲು ಪಡೆದ ಪಾಕಿಸ್ತಾನ ತಂಡ 35 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿದ್ದಾಗ ಜೋರಾಗಿ ಮಳೆ ಸುರಿಯಿತು. ಪಂದ್ಯ ಮತ್ತೆ ಆರಂಭವಾದಾಗ ಪಾಕ್‌ಗೆ 40 ಓವರ್‌ಗಳಲ್ಲಿ 302 ರನ್ ಪರಿಷ್ಕೃತ ಗುರಿ ನೀಡಲಾಗಿದ್ದು 5 ಓವರ್‌ಗಳಲ್ಲಿ 136 ರನ್ ಗಳಿಸಬೇಕಾದ ಕಠಿಣ ಸವಾಲು ಪಡೆಯಿತು. ಪಾಕ್ ಅಂತಿಮವಾಗಿ 40 ಓವರ್‌ಗಳಲ್ಲಿ 6 ವಿಕಟ್‌ಗೆ 212 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಪಾಕ್ 5ನೇ ಓವರ್‌ನಲ್ಲಿ ಇಮಾಮ್‌ವುಲ್ ಹಕ್(7) ವಿಕೆಟನ್ನು ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು. ಆಗ 2ನೇ ವಿಕೆಟ್‌ಗೆ 104 ರನ್ ಜೊತೆಯಾಟ ನಡೆಸಿದ ಫಕಾರ್ ಝಮಾನ್(62, 75 ಎಸೆತ, 7 ಬೌಂಡರಿ, 1 ಸಿಕ್ಸರ್) ಹಾಗೂ ಬಾಬರ್ ಆಝಂ(48, 57 ಎಸೆತ, 3 ಬೌಂಡರಿ, 1 ಸಿಕ್ಸರ್)ತಂಡವನ್ನು ಆಧರಿಸಲು ಯತ್ನಿಸಿದರು. ಬಾಬರ್ ಆಝಂ(48) ವಿಕೆಟನ್ನು ಉರುಳಿಸಿದ ಕುಲದೀಪ ಯಾದವ್ ಈ ಜೋಡಿಯನ್ನು ಬೇರ್ಪಡಿಸಿದರು.

ಝಮಾನ್ 62 ರನ್‌ಗೆ ಯಾದವ್‌ಗೆ ಎರಡನೇ ಬಲಿಯಾದರು.ಝಮಾನ್-ಆಝಂ ಹೋರಾಟದ ಬಳಿಕ ಪಾಕ್ ಕುಸಿತದ ಹಾದಿ ಹಿಡಿಯಿತು. ಮುಹಮ್ಮದ್ ಹಫೀಝ್(9),ಶುಐಬ್ ಮಲಿಕ್(0), ಹಾಗೂ ಸರ್ಫರಾಝ್ ಅಹ್ಮದ್(12) ಪೆವಿಲಿಯನ್‌ಗೆ ಪರೇಡ್ ನಡೆಸಿದರು. ಇಮಾದ್ ವಸೀಂ(ಔಟಾಗದೆ 22) ಹಾಗೂ ಶಾದಾಬ್ ಖಾನ್ (1)ಕ್ರೀಸ್ ಕಾಯ್ದುಕೊಂಡಿದ್ದರು.

ಭಾರತದ ಪರ ವಿಜಯ ಶಂಕರ್(2-22), ಹಾರ್ದಿಕ್ ಪಾಂಡ್ಯ(2-40) ಹಾಗೂ ಕುಲದೀಪ್ ಯಾದವ್(2-32) ತಲಾ ಎರಡು ವಿಕೆಟ್ ಪಡೆದರು.

ಭಾರತ 336/5: ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರ ಭರ್ಜರಿ ಶತಕ(140 ರನ್, 113 ಎಸೆತ), ನಾಯಕ ವಿರಾಟ್ ಕೊಹ್ಲಿ(77, 65 ಎಸೆತ) ಹಾಗೂ ಕೆಎಲ್ ರಾಹುಲ್(57,78 ಎಸೆತ)ಅರ್ಧಶತಕಗಳ ಕೊಡುಗೆ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 336 ರನ್ ಗಳಿಸಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

3 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

11 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

18 hours ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

19 hours ago

ಕೃಷಿಯ ನಿಜವಾದ ಶಕ್ತಿ ಮಹಿಳೆಯರು : ಭಾರತದಲ್ಲಿ ಮೌನ ಕ್ರಾಂತಿ ಶುರುವಾಗಿದೆ..!

ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…

1 day ago

ಹೊಸರುಚಿ | ಮನೆಲ್ಲೇ ಸುಲಭವಾಗಿ ಮಾಡುವ “ಉಪ್ಪು ಸೊಳೆ ಬೋಳು ಬೆಂದಿ”

ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…

2 days ago