Advertisement
ರಾಷ್ಟ್ರೀಯ

ವಿಶ್ವಕಪ್ ಕ್ರಿಕೆಟ್ ಭಾರತಕ್ಕೆ ಸೋಲು

Share

ಬರ್ವಿುಂಗ್​ಹ್ಯಾಂ: ಇಲ್ಲಿನ ಎಜ್​ಬಾಸ್ಟನ್​ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್​ ಕ್ರಿಕೆಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್​ ವಿರುದ್ದ ಭಾರತಕ್ಕೆ 31ರನ್ ಗಳ ಸೋಲು. ಈ ಮೂಲಕ ಟೀಂ ಇಂಡಿಯಾ ವಿಶ್ವಕಪ್​ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿತು.

ಟಾಸ್​ ಗೆದ್ದು ಬ್ಯಾಟಿಂಗ್​ಗೆ ಇಳಿದ ಆಂಗ್ಲ ಪಡೆ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್​ ನಷ್ಟಕ್ಕೆ 337 ರನ್​ ಕಲೆ ಹಾಕಿತು. ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 306 ರನ್​ ಕಲೆ ಹಾಕುವ ಮೂಲಕ 31 ರನ್​ ಅಂತರದಲ್ಲಿ ಆಂಗ್ಲ ಪಡೆಗೆ ಶರಣಾಯಿತು.

ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಕೆ.ಎಲ್​. ರಾಹುಲ್​ ಶೂನ್ಯ ಸಾಧನೆ ಮಾಡುವ ಮೂಲಕ ಆರಂಭಿಕ ಆಘಾತ ನೀಡಿದರು. ಬಳಿಕ ರೋಹಿತ್​ ಶರ್ಮಾ ಜತೆಗೂಡಿದ ನಾಯಕ ವಿರಾಟ್​ ಕೊಹ್ಲಿ 146 ರನ್​ ಜತೆಯಾಟ ನೀಡಿದರು. ಆದರೆ ಈ ವೇಳೆ 66 ರನ್​ ಗಳಿಸಿದ್ದ ಕೊಹ್ಲಿ ಫ್ಲಂಕೆಟ್​ ಓವರ್​ನಲ್ಲಿ ಕ್ಯಾಚಿತ್ತು ನಿರ್ಗಮಿಸಿದರು. ಇದಾದ ಸ್ವಲ್ಪದರಲ್ಲೇ 102 ರನ್​ ಗಳಿಸಿದ್ದ ರೋಹಿತ್​ ಶರ್ಮಾ, ಕ್ರಿಸ್​ ವೋಕ್ಸ್​ ಓವರ್​ನಲ್ಲಿ ಕ್ಯಾಚಿತ್ತರು.

ಬಳಿಕ ರಿಷಭ ಪಂತ್ ​(32) ಹಾಗೂ ಹಾರ್ದಿಕ್​ ಪಾಂಡ್ಯ (45) ವೇಗವಾಗಿ ರನ್​ ಗಳಿಸಿ ಗೆಲುವಿನ ಆಸೆ ಚಿಗುರುವಂತೆ ಮಾಡಿದರೂ ವಿಕೆಟ್​ ನೀಡಿದ್ದು ಭಾರತದ ಸೋಲಿಗೆ ಕಾರಣವಾಯಿತು. ಉಳಿದಂತೆ ಎಂ.ಎಸ್​. ಧೋನಿ (42*) ಹಾಗೂ ಕೇದರ್​ ಜಾಧವ್​ (12*) ರನ್​ ಗಳಿಸಿದರು. ಧೋನಿ ಮತ್ತು ಜಾಧವ್ ಗೆ ಕೊನೆಯ ಓವರ್ ಗಳಲ್ಲಿ ನಿರೀಕ್ಷಿತ ರೀತಿಯಲ್ಲಿ ರನ್ ಗಳಿಸಲು ಸಾಧ್ಯವಾಗದೆ ಇದ್ದುದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿತು.

ಇಂಗ್ಲೆಂಡ್​ ಪರ ಲಿಯಾಮ್​ ಫ್ಲಂಕೆಟ್ ಪ್ರಮುಖ​ ಮೂರು ವಿಕೆಟ್​ ಕಬಳಿಸಿ ಮಿಂಚಿದರೆ, ಕ್ರಿಸ್​ ವೋಕ್ಸ್​ ಎರಡು ವಿಕೆಟ್​ ಪಡೆಯುವ ಮೂಲಕ ಆಂಗ್ಲ ಪಡೆಗೆ ಗೆಲುವನ್ನು ತಂದುಕೊಟ್ಟರು.

ಇದಕ್ಕೂ ಮೊದಲು ಬ್ಯಾಟ್​ ಮಾಡಿದ್ದ ಆಂಗ್ಲ ಪಡೆ ಪರ ಆರಂಭಿಕರಾದ ಜಾಸನ್​ ರಾಯ್​ ಮತ್ತು ಜಾನಿ ಬೇರ್​ಸ್ಟೋ 22.1 ಓವರ್​ಗಳಲ್ಲಿ 160 ರನ್​ಗಳ ಉತ್ತಮ ಜೊತೆಯಾಟವಾಡಿ ಇಂಗ್ಲೆಂಡ್​ ತಂಡ ಬೃಹತ್​ ಮೊತ್ತ ಕಲೆ ಹಾಕಲು ಕಾರಣರಾದರು. 66 ರನ್​ ಗಳಿಸಿದ್ದ ಜಾಸನ್​ ರಾಯ್​ ಕುಲದೀಪ್​ಗೆ ಬಲಿಯಾದರು. ಇದರ ಬೆನ್ನಲ್ಲೇ 111 ರನ್​ ಗಳಿಸಿ ಆಡುತ್ತಿದ್ದ ಬೇರ್​ಸ್ಟೋ ಶಮಿ ಓವರ್​ನಲ್ಲಿ ಕ್ಯಾಚಿತ್ತರು. ಪ್ರಮುಖ ಎರಡು ವಿಕೆಟ್​ ಉರುಳಿದ ಬಳಿಕ ಆಂಗ್ಲ ಪಡೆಯ ರನ್​ ವೇಗಕ್ಕೆ ಕಡಿವಾಣ ಬಿದ್ದಿತು.

ಬೇರ್​ಸ್ಟೋ ಬಳಿಕ ಬಂದ ಜೋ ರೂಟ್​ 44 ರನ್​ ಗಳಿಸಿ ಔಟಾದರೆ, ಇದರ ಬೆನ್ನಲ್ಲೇ ನಾಯಕ ಇಯಾನ್​ ಮಾರ್ಗನ್​ ಕೇವಲ ಒಂದು ರನ್​ ಗಳಿಸಿ ಪೆವಿಲಿಯನ್​ ಸೇರಿದರು. ಆದರೆ, ಈ ಹಂತದಲ್ಲಿ ತಂಡಕ್ಕೆ ಆಸರೆಯಾದ ಬೆನ್​ ಸ್ಟೋಕ್ಸ್​ (79 ರನ್​, 54 ಎಸೆತ,6 ಬೌ, 3 ಸಿ) ರನ್​ ಗಳಿಸುವ ಮೂಲಕ ಆಂಗ್ಲ ಪಡೆ ಮುನ್ನೂರು ರನ್​ ಗಡಿ ದಾಟುವಲ್ಲಿ ನೆರವಾದರು. ಉಳಿದಂತೆ ಜಾಸ್​ ಬಟ್ಲರ್​ (20), ಕ್ರಿಸ್​ ವೋಕ್ಸ್​ (7) ರನ್​ ಗಳಿಸಿದರೆ, ಲಿಯಾಮ್​ ಫ್ಲಂಕೆಟ್ (1)​ ಜೋಫ್ರಾ ಆರ್ಚರ್​ (0) ಅಜೇಯರಾಗಿ ಉಳಿದರು.
ಟೀಂ ಇಂಡಿಯಾ ಪರ ಮಹಮ್ಮದ್​​ ಶಮಿ 5 ವಿಕೆಟ್​ ಪಡೆದು ಮಿಂಚಿದರು. ಉಳಿದಂತೆ ಜಸ್​ಪ್ರೀತ್​ ಬೂಮ್ರಾ ಹಾಗೂ ಕುಲದೀಪ್​ ಯಾದವ್​ ತಲಾ ಒಂದು ವಿಕೆಟ್​ ಪಡೆದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

1 hour ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

16 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

17 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago