Advertisement
ರಾಷ್ಟ್ರೀಯ

ವಿಶ್ವಕಪ್ ನಿಂದ ಟೀಮ್ ಇಂಡಿಯಾ ಔಟ್..!

Share
ಮ್ಯಾಂಚೆಸ್ಟರ್ : ಭಾರತ ತಂಡವು ನ್ಯೂಝಿಲ್ಯಾಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸೋಲುವ ಮೂಲಕ ವಿಶ್ವಕಪ್ ನಿಂದ ಹೊರಬಿದ್ದಿದೆ. ಈ ಮೂಲಕ 2019ರ ವಿಶ್ವಕಪ್ ಗೆಲ್ಲುವ ಫೇವರೇಟ್ ತಂಡ ಎನಿಸಿಕೊಂಡಿದ್ದ ಕೊಹ್ಲಿ ಪಡೆಯು ಸೆಮಿಫೈನಲ್ ನಲ್ಲಿ ಮುಗ್ಗರಿಸಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿತು. ಜಡೇಜ ಹಾಗೂ ಧೋನಿಯ ಸಾಹಸದಿಂದ ರೋಚಕ ಘಟ್ಟ ತಲುಪಿದ್ದ ಪಂದ್ಯವು ಕೊನೆ ಕ್ಷಣದಲ್ಲಿ 18 ರನ್ ಗಳಿಂದ ಗೆದ್ದ ನ್ಯೂಝಿಲ್ಯಾಂಡ್ ಫೈನಲ್ ಪ್ರವೇಶಿಸಿದೆ. ಗೆಲುವಿಗೆ 50 ಓವರ್ ಗಳಲ್ಲಿ 240 ರನ್ ಗಳ ಗುರಿ ಪಡೆದಿದ್ದ ಭಾರತ 221 ರನ್ ಗಳಿಗೆ ಆಲ್ ಔಟಾಗಿ 18 ರನ್ ಗಳ ಸೋಲೊಪ್ಪಿಕೊಂಡಿತು. ಭಾರತದ ಪರ ಜಡೇಜ(77) ಧೋನಿ (50) ಪಂತ್ ಹಾಗೂ ಪಾಂಡ್ಯ ತಲಾ 32 ರನ್ ಗಳಿಸಿದರು. ಭಾರತ 10 ಓವರ್‌ಗಳಲ್ಲಿ 24 ರನ್ ಗಳಿಸುವಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆಗ 5ನೇ ವಿಕೆಟ್ ಜೊತೆಯಾಟದಲ್ಲಿ 47 ರನ್ ಸೇರಿಸಿದ ಹಾರ್ದಿಕ್ ಪಾಂಡ್ಯ (32) ಹಾಗೂ ರಿಷಭ್ ಪಂತ್(32) ತಂಡವನ್ನು ಆಧರಿಸಿದರು. ಈ ಇಬ್ಬರು ಪೆವಿಲಿಯನ್‌ಗೆ ವಾಪಸಾದ ಬಳಿಕ ಮಾಜಿ ನಾಯಕ ಧೋನಿ ಹಾಗೂ ಜಡೇಜ 7ನೇ ವಿಕೆಟ್‌ಗೆ 116 ಜೊತೆಯಾಟ ನಡೆಸಿ ಗೆಲುವಿನ ವಿಶ್ವಾಸ ಮೂಡಿಸಿದರು. ಆದರೆ, ಜಡೇಜ ವಿಕೆಟನ್ನು ಉರುಳಿಸಿದ ಬೌಲ್ಟ್ ಭಾರತದ ಗೆಲುವಿನ ಆಸೆಗೆ ತಣ್ಣೀರೆರಚಿದರು. ಜಡೇಜ 59 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಿಡಿಸಿದ್ದರು. 49ನೇ ಓವರ್‌ನಲ್ಲಿ ಧೋನಿ ಅವರು ಗಪ್ಟಿಲ್‌ರಿಂದ ರನೌಟ್ ಆಗುವುದರೊಂದಿಗೆ ಭಾರತದ ಹೋರಾಟ ಬಹುತೇಕ ಅಂತ್ಯವಾಯಿತು. ಧೋನಿ 72 ಎಸೆತಗಳ ಇನಿಂಗ್ಸ್‌ನಲ್ಲಿ ತಲಾ 1 ಬೌಂಡರಿ ಹಾಗೂ ಸಿಕ್ಸರ್ ಸಿಡಿಸಿದ್ದರು. ಕಿವೀಸ್‌ನ ಪರ ಹೆನ್ರಿ(3-37), ಬೌಲ್ಟ್(2-42) ಹಾಗೂ ಸ್ಯಾಂಟ್ನರ್(2-34)7 ವಿಕೆಟ್‌ಗಳನ್ನು ಹಂಚಿಕೊಂಡರು. ಇದಕ್ಕೂ ಮೊದಲು ಮಂಗಳವಾರ ನಿಗದಿಯಾಗಿದ್ದ ಸೆಮಿಫೈನಲ್ ಪಂದ್ಯವು ನ್ಯೂಝಿಲ್ಯಾಂಡ್ ಬ್ಯಾಟಿಂಗ್ ಪೂರ್ತಿಗೊಳಿಸುವ ಮುಂಚೆಯೇ ಸುರಿದ ಮಳೆಯ ಕಾರಣದಿಂದ ಬುಧವಾರಕ್ಕೆ ಮುಂದೂಡಿಕೆಯಾಗಿತ್ತು. 46.1 ಓವರ್ ನಲ್ಲಿ 211 ಗಳಿಸಿದ್ದ ನ್ಯೂಝಿಲ್ಯಾಂಡ್ ಇಂದು ಬ್ಯಾಟಿಂಗ್ ಪೂರ್ತಿಗೊಳಿಸಿ 8 ವಿಕೆಟ್ ನಷ್ಟಕ್ಕೆ 239 ಗಳಿಸಿತ್ತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

9 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

10 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

17 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

23 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

23 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago