Advertisement
ರಾಷ್ಟ್ರೀಯ

ವಿಶ್ವಕಪ್ ನಿಂದ ಟೀಮ್ ಇಂಡಿಯಾ ಔಟ್..!

Share
ಮ್ಯಾಂಚೆಸ್ಟರ್ : ಭಾರತ ತಂಡವು ನ್ಯೂಝಿಲ್ಯಾಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸೋಲುವ ಮೂಲಕ ವಿಶ್ವಕಪ್ ನಿಂದ ಹೊರಬಿದ್ದಿದೆ. ಈ ಮೂಲಕ 2019ರ ವಿಶ್ವಕಪ್ ಗೆಲ್ಲುವ ಫೇವರೇಟ್ ತಂಡ ಎನಿಸಿಕೊಂಡಿದ್ದ ಕೊಹ್ಲಿ ಪಡೆಯು ಸೆಮಿಫೈನಲ್ ನಲ್ಲಿ ಮುಗ್ಗರಿಸಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿತು. ಜಡೇಜ ಹಾಗೂ ಧೋನಿಯ ಸಾಹಸದಿಂದ ರೋಚಕ ಘಟ್ಟ ತಲುಪಿದ್ದ ಪಂದ್ಯವು ಕೊನೆ ಕ್ಷಣದಲ್ಲಿ 18 ರನ್ ಗಳಿಂದ ಗೆದ್ದ ನ್ಯೂಝಿಲ್ಯಾಂಡ್ ಫೈನಲ್ ಪ್ರವೇಶಿಸಿದೆ. ಗೆಲುವಿಗೆ 50 ಓವರ್ ಗಳಲ್ಲಿ 240 ರನ್ ಗಳ ಗುರಿ ಪಡೆದಿದ್ದ ಭಾರತ 221 ರನ್ ಗಳಿಗೆ ಆಲ್ ಔಟಾಗಿ 18 ರನ್ ಗಳ ಸೋಲೊಪ್ಪಿಕೊಂಡಿತು. ಭಾರತದ ಪರ ಜಡೇಜ(77) ಧೋನಿ (50) ಪಂತ್ ಹಾಗೂ ಪಾಂಡ್ಯ ತಲಾ 32 ರನ್ ಗಳಿಸಿದರು. ಭಾರತ 10 ಓವರ್‌ಗಳಲ್ಲಿ 24 ರನ್ ಗಳಿಸುವಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆಗ 5ನೇ ವಿಕೆಟ್ ಜೊತೆಯಾಟದಲ್ಲಿ 47 ರನ್ ಸೇರಿಸಿದ ಹಾರ್ದಿಕ್ ಪಾಂಡ್ಯ (32) ಹಾಗೂ ರಿಷಭ್ ಪಂತ್(32) ತಂಡವನ್ನು ಆಧರಿಸಿದರು. ಈ ಇಬ್ಬರು ಪೆವಿಲಿಯನ್‌ಗೆ ವಾಪಸಾದ ಬಳಿಕ ಮಾಜಿ ನಾಯಕ ಧೋನಿ ಹಾಗೂ ಜಡೇಜ 7ನೇ ವಿಕೆಟ್‌ಗೆ 116 ಜೊತೆಯಾಟ ನಡೆಸಿ ಗೆಲುವಿನ ವಿಶ್ವಾಸ ಮೂಡಿಸಿದರು. ಆದರೆ, ಜಡೇಜ ವಿಕೆಟನ್ನು ಉರುಳಿಸಿದ ಬೌಲ್ಟ್ ಭಾರತದ ಗೆಲುವಿನ ಆಸೆಗೆ ತಣ್ಣೀರೆರಚಿದರು. ಜಡೇಜ 59 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಿಡಿಸಿದ್ದರು. 49ನೇ ಓವರ್‌ನಲ್ಲಿ ಧೋನಿ ಅವರು ಗಪ್ಟಿಲ್‌ರಿಂದ ರನೌಟ್ ಆಗುವುದರೊಂದಿಗೆ ಭಾರತದ ಹೋರಾಟ ಬಹುತೇಕ ಅಂತ್ಯವಾಯಿತು. ಧೋನಿ 72 ಎಸೆತಗಳ ಇನಿಂಗ್ಸ್‌ನಲ್ಲಿ ತಲಾ 1 ಬೌಂಡರಿ ಹಾಗೂ ಸಿಕ್ಸರ್ ಸಿಡಿಸಿದ್ದರು. ಕಿವೀಸ್‌ನ ಪರ ಹೆನ್ರಿ(3-37), ಬೌಲ್ಟ್(2-42) ಹಾಗೂ ಸ್ಯಾಂಟ್ನರ್(2-34)7 ವಿಕೆಟ್‌ಗಳನ್ನು ಹಂಚಿಕೊಂಡರು. ಇದಕ್ಕೂ ಮೊದಲು ಮಂಗಳವಾರ ನಿಗದಿಯಾಗಿದ್ದ ಸೆಮಿಫೈನಲ್ ಪಂದ್ಯವು ನ್ಯೂಝಿಲ್ಯಾಂಡ್ ಬ್ಯಾಟಿಂಗ್ ಪೂರ್ತಿಗೊಳಿಸುವ ಮುಂಚೆಯೇ ಸುರಿದ ಮಳೆಯ ಕಾರಣದಿಂದ ಬುಧವಾರಕ್ಕೆ ಮುಂದೂಡಿಕೆಯಾಗಿತ್ತು. 46.1 ಓವರ್ ನಲ್ಲಿ 211 ಗಳಿಸಿದ್ದ ನ್ಯೂಝಿಲ್ಯಾಂಡ್ ಇಂದು ಬ್ಯಾಟಿಂಗ್ ಪೂರ್ತಿಗೊಳಿಸಿ 8 ವಿಕೆಟ್ ನಷ್ಟಕ್ಕೆ 239 ಗಳಿಸಿತ್ತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

20 minutes ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago