Advertisement
ರಾಷ್ಟ್ರೀಯ

ವಿಶ್ವಕಪ್ ನಿಂದ ಟೀಮ್ ಇಂಡಿಯಾ ಔಟ್..!

Share
ಮ್ಯಾಂಚೆಸ್ಟರ್ : ಭಾರತ ತಂಡವು ನ್ಯೂಝಿಲ್ಯಾಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸೋಲುವ ಮೂಲಕ ವಿಶ್ವಕಪ್ ನಿಂದ ಹೊರಬಿದ್ದಿದೆ. ಈ ಮೂಲಕ 2019ರ ವಿಶ್ವಕಪ್ ಗೆಲ್ಲುವ ಫೇವರೇಟ್ ತಂಡ ಎನಿಸಿಕೊಂಡಿದ್ದ ಕೊಹ್ಲಿ ಪಡೆಯು ಸೆಮಿಫೈನಲ್ ನಲ್ಲಿ ಮುಗ್ಗರಿಸಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿತು. ಜಡೇಜ ಹಾಗೂ ಧೋನಿಯ ಸಾಹಸದಿಂದ ರೋಚಕ ಘಟ್ಟ ತಲುಪಿದ್ದ ಪಂದ್ಯವು ಕೊನೆ ಕ್ಷಣದಲ್ಲಿ 18 ರನ್ ಗಳಿಂದ ಗೆದ್ದ ನ್ಯೂಝಿಲ್ಯಾಂಡ್ ಫೈನಲ್ ಪ್ರವೇಶಿಸಿದೆ. ಗೆಲುವಿಗೆ 50 ಓವರ್ ಗಳಲ್ಲಿ 240 ರನ್ ಗಳ ಗುರಿ ಪಡೆದಿದ್ದ ಭಾರತ 221 ರನ್ ಗಳಿಗೆ ಆಲ್ ಔಟಾಗಿ 18 ರನ್ ಗಳ ಸೋಲೊಪ್ಪಿಕೊಂಡಿತು. ಭಾರತದ ಪರ ಜಡೇಜ(77) ಧೋನಿ (50) ಪಂತ್ ಹಾಗೂ ಪಾಂಡ್ಯ ತಲಾ 32 ರನ್ ಗಳಿಸಿದರು. ಭಾರತ 10 ಓವರ್‌ಗಳಲ್ಲಿ 24 ರನ್ ಗಳಿಸುವಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆಗ 5ನೇ ವಿಕೆಟ್ ಜೊತೆಯಾಟದಲ್ಲಿ 47 ರನ್ ಸೇರಿಸಿದ ಹಾರ್ದಿಕ್ ಪಾಂಡ್ಯ (32) ಹಾಗೂ ರಿಷಭ್ ಪಂತ್(32) ತಂಡವನ್ನು ಆಧರಿಸಿದರು. ಈ ಇಬ್ಬರು ಪೆವಿಲಿಯನ್‌ಗೆ ವಾಪಸಾದ ಬಳಿಕ ಮಾಜಿ ನಾಯಕ ಧೋನಿ ಹಾಗೂ ಜಡೇಜ 7ನೇ ವಿಕೆಟ್‌ಗೆ 116 ಜೊತೆಯಾಟ ನಡೆಸಿ ಗೆಲುವಿನ ವಿಶ್ವಾಸ ಮೂಡಿಸಿದರು. ಆದರೆ, ಜಡೇಜ ವಿಕೆಟನ್ನು ಉರುಳಿಸಿದ ಬೌಲ್ಟ್ ಭಾರತದ ಗೆಲುವಿನ ಆಸೆಗೆ ತಣ್ಣೀರೆರಚಿದರು. ಜಡೇಜ 59 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಿಡಿಸಿದ್ದರು. 49ನೇ ಓವರ್‌ನಲ್ಲಿ ಧೋನಿ ಅವರು ಗಪ್ಟಿಲ್‌ರಿಂದ ರನೌಟ್ ಆಗುವುದರೊಂದಿಗೆ ಭಾರತದ ಹೋರಾಟ ಬಹುತೇಕ ಅಂತ್ಯವಾಯಿತು. ಧೋನಿ 72 ಎಸೆತಗಳ ಇನಿಂಗ್ಸ್‌ನಲ್ಲಿ ತಲಾ 1 ಬೌಂಡರಿ ಹಾಗೂ ಸಿಕ್ಸರ್ ಸಿಡಿಸಿದ್ದರು. ಕಿವೀಸ್‌ನ ಪರ ಹೆನ್ರಿ(3-37), ಬೌಲ್ಟ್(2-42) ಹಾಗೂ ಸ್ಯಾಂಟ್ನರ್(2-34)7 ವಿಕೆಟ್‌ಗಳನ್ನು ಹಂಚಿಕೊಂಡರು. ಇದಕ್ಕೂ ಮೊದಲು ಮಂಗಳವಾರ ನಿಗದಿಯಾಗಿದ್ದ ಸೆಮಿಫೈನಲ್ ಪಂದ್ಯವು ನ್ಯೂಝಿಲ್ಯಾಂಡ್ ಬ್ಯಾಟಿಂಗ್ ಪೂರ್ತಿಗೊಳಿಸುವ ಮುಂಚೆಯೇ ಸುರಿದ ಮಳೆಯ ಕಾರಣದಿಂದ ಬುಧವಾರಕ್ಕೆ ಮುಂದೂಡಿಕೆಯಾಗಿತ್ತು. 46.1 ಓವರ್ ನಲ್ಲಿ 211 ಗಳಿಸಿದ್ದ ನ್ಯೂಝಿಲ್ಯಾಂಡ್ ಇಂದು ಬ್ಯಾಟಿಂಗ್ ಪೂರ್ತಿಗೊಳಿಸಿ 8 ವಿಕೆಟ್ ನಷ್ಟಕ್ಕೆ 239 ಗಳಿಸಿತ್ತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago