Advertisement
ರಾಷ್ಟ್ರೀಯ

ವಿಶ್ವಕಪ್ ನಿಂದ ಟೀಮ್ ಇಂಡಿಯಾ ಔಟ್..!

Share
ಮ್ಯಾಂಚೆಸ್ಟರ್ : ಭಾರತ ತಂಡವು ನ್ಯೂಝಿಲ್ಯಾಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸೋಲುವ ಮೂಲಕ ವಿಶ್ವಕಪ್ ನಿಂದ ಹೊರಬಿದ್ದಿದೆ. ಈ ಮೂಲಕ 2019ರ ವಿಶ್ವಕಪ್ ಗೆಲ್ಲುವ ಫೇವರೇಟ್ ತಂಡ ಎನಿಸಿಕೊಂಡಿದ್ದ ಕೊಹ್ಲಿ ಪಡೆಯು ಸೆಮಿಫೈನಲ್ ನಲ್ಲಿ ಮುಗ್ಗರಿಸಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿತು. ಜಡೇಜ ಹಾಗೂ ಧೋನಿಯ ಸಾಹಸದಿಂದ ರೋಚಕ ಘಟ್ಟ ತಲುಪಿದ್ದ ಪಂದ್ಯವು ಕೊನೆ ಕ್ಷಣದಲ್ಲಿ 18 ರನ್ ಗಳಿಂದ ಗೆದ್ದ ನ್ಯೂಝಿಲ್ಯಾಂಡ್ ಫೈನಲ್ ಪ್ರವೇಶಿಸಿದೆ. ಗೆಲುವಿಗೆ 50 ಓವರ್ ಗಳಲ್ಲಿ 240 ರನ್ ಗಳ ಗುರಿ ಪಡೆದಿದ್ದ ಭಾರತ 221 ರನ್ ಗಳಿಗೆ ಆಲ್ ಔಟಾಗಿ 18 ರನ್ ಗಳ ಸೋಲೊಪ್ಪಿಕೊಂಡಿತು. ಭಾರತದ ಪರ ಜಡೇಜ(77) ಧೋನಿ (50) ಪಂತ್ ಹಾಗೂ ಪಾಂಡ್ಯ ತಲಾ 32 ರನ್ ಗಳಿಸಿದರು. ಭಾರತ 10 ಓವರ್‌ಗಳಲ್ಲಿ 24 ರನ್ ಗಳಿಸುವಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆಗ 5ನೇ ವಿಕೆಟ್ ಜೊತೆಯಾಟದಲ್ಲಿ 47 ರನ್ ಸೇರಿಸಿದ ಹಾರ್ದಿಕ್ ಪಾಂಡ್ಯ (32) ಹಾಗೂ ರಿಷಭ್ ಪಂತ್(32) ತಂಡವನ್ನು ಆಧರಿಸಿದರು. ಈ ಇಬ್ಬರು ಪೆವಿಲಿಯನ್‌ಗೆ ವಾಪಸಾದ ಬಳಿಕ ಮಾಜಿ ನಾಯಕ ಧೋನಿ ಹಾಗೂ ಜಡೇಜ 7ನೇ ವಿಕೆಟ್‌ಗೆ 116 ಜೊತೆಯಾಟ ನಡೆಸಿ ಗೆಲುವಿನ ವಿಶ್ವಾಸ ಮೂಡಿಸಿದರು. ಆದರೆ, ಜಡೇಜ ವಿಕೆಟನ್ನು ಉರುಳಿಸಿದ ಬೌಲ್ಟ್ ಭಾರತದ ಗೆಲುವಿನ ಆಸೆಗೆ ತಣ್ಣೀರೆರಚಿದರು. ಜಡೇಜ 59 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಿಡಿಸಿದ್ದರು. 49ನೇ ಓವರ್‌ನಲ್ಲಿ ಧೋನಿ ಅವರು ಗಪ್ಟಿಲ್‌ರಿಂದ ರನೌಟ್ ಆಗುವುದರೊಂದಿಗೆ ಭಾರತದ ಹೋರಾಟ ಬಹುತೇಕ ಅಂತ್ಯವಾಯಿತು. ಧೋನಿ 72 ಎಸೆತಗಳ ಇನಿಂಗ್ಸ್‌ನಲ್ಲಿ ತಲಾ 1 ಬೌಂಡರಿ ಹಾಗೂ ಸಿಕ್ಸರ್ ಸಿಡಿಸಿದ್ದರು. ಕಿವೀಸ್‌ನ ಪರ ಹೆನ್ರಿ(3-37), ಬೌಲ್ಟ್(2-42) ಹಾಗೂ ಸ್ಯಾಂಟ್ನರ್(2-34)7 ವಿಕೆಟ್‌ಗಳನ್ನು ಹಂಚಿಕೊಂಡರು. ಇದಕ್ಕೂ ಮೊದಲು ಮಂಗಳವಾರ ನಿಗದಿಯಾಗಿದ್ದ ಸೆಮಿಫೈನಲ್ ಪಂದ್ಯವು ನ್ಯೂಝಿಲ್ಯಾಂಡ್ ಬ್ಯಾಟಿಂಗ್ ಪೂರ್ತಿಗೊಳಿಸುವ ಮುಂಚೆಯೇ ಸುರಿದ ಮಳೆಯ ಕಾರಣದಿಂದ ಬುಧವಾರಕ್ಕೆ ಮುಂದೂಡಿಕೆಯಾಗಿತ್ತು. 46.1 ಓವರ್ ನಲ್ಲಿ 211 ಗಳಿಸಿದ್ದ ನ್ಯೂಝಿಲ್ಯಾಂಡ್ ಇಂದು ಬ್ಯಾಟಿಂಗ್ ಪೂರ್ತಿಗೊಳಿಸಿ 8 ವಿಕೆಟ್ ನಷ್ಟಕ್ಕೆ 239 ಗಳಿಸಿತ್ತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

1 day ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

1 day ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

4 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

4 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago