Advertisement
ರಾಷ್ಟ್ರೀಯ

ವಿಶ್ವಕಪ್: ಸಿಂಹಳೀಯರಿಗೆ ರೋಚಕ ಜಯ

Share

ಚೆಸ್ಟರ್-ಲೀ-ಸ್ಟ್ರೀಟ್: ಮಧ್ಯಮ ಕ್ರಮಾಂಕದ ದಾಂಡಿಗ ನಿಕೊಲಸ್ ಪೂರನ್ ಸಿಡಿಸಿದ ಚೊಚ್ಚಲ ಶತಕದ(118, 103 ಎಸೆತ, 11 ಬೌಂಡರಿ, 4 ಸಿಕ್ಸರ್) ಹೊರತಾಗಿಯೂ ವಿಶ್ವಕಪ್‌ನ 39ನೇ ಪಂದ್ಯದಲ್ಲಿ ಶ್ರೀಲಂಕಾ ತಂಡ ವೆಸ್ಟ್ ಇಂಡೀಸ್ ತಂಡವನ್ನು 23 ರನ್‌ಗಳಿಂದ ರೋಚಕವಾಗಿ ಮಣಿಸಿದೆ. ಗೆಲ್ಲಲು 339 ರನ್ ಗುರಿ ಪಡೆದ ವೆಸ್ಟ್‌ಇಂಡೀಸ್ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 315 ರನ್ ಗಳಿಸಿ ವೀರೋಚಿತ ಸೋಲುಂಡಿತು.

ವಿಂಡೀಸ್ ಪರ ಸಿನ್ನರ್ ಅಲ್ಲೆನ್ ಮಿಂಚಿನ ಅರ್ಧಶತಕ(51, 32 ಎಸೆತ, 7 ಬೌಂಡರಿ, 1 ಸಿಕ್ಸರ್)ಸಿಡಿಸಿ ಗಮನ ಸೆಳೆದರು. ಆರಂಭಿಕ ಆಟಗಾರ ಕ್ರಿಸ್ ಗೇಲ್(32),ಹೆಟ್ಮೆಯರ್ (29) ಹಾಗೂ ಹೋಲ್ಡರ್(26) ಎರಡಂಕೆಯ ಸ್ಕೋರ್ ಗಳಿಸಿದರು.

ಶ್ರೀಲಂಕಾದ ಪರ ಲಸಿತ್ ಮಾಲಿಂಗ(3-55) ಯಶಸ್ವಿ ಬೌಲರ್ ಎನಿಸಿಕೊಂಡರು.

ಇದಕ್ಕೂ ಮೊದಲು ಶ್ರೀಲಂಕಾ ಅಗ್ರ ಕ್ರಮಾಂಕದ ದಾಂಡಿಗ ಅವಿಷ್ಕಾ ಫೆರ್ನಾಂಡೊ ಚೊಚ್ಚಲ ಶತಕದ ನೆರವಿನಿಂದ ವೆಸ್ಟ್‌ಇಂಡೀಸ್ ವಿರುದ್ಧ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 338 ರನ್ ಗಳಿಸಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago