ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ವಿಶ್ವಾಸ ಮತಯಾಚನೆ ಮಧ್ಯಾಹ್ನದವರೆಗಿನ ಕಲಾಪದಲ್ಲಿ ನಡೆಯಲಿಲ್ಲ. ಸದನ ಕಲಾಪವನ್ನು 3 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ಮುಂದೂಡಿದರು. ಬೆಳಗ್ಗಿನಿಂದಲೇ ಸದನದಲ್ಲಿ ಸುದೀರ್ಘ ಚರ್ಚೆ ಸದನದಲ್ಲಿ ನಡೆಯಿತು.
ವಿಶ್ವಾಸಮತ ಯಾಚನೆ ಬಗ್ಗೆ ಮಾತನಾಡಿದ ಮಾಜಿ ಸೀಎಂ ಸಿದ್ಧರಾಮಯ್ಯ, ವಿಶ್ವಾಸಮತ ಯಾಚನೆ ಬಗ್ಗೆ ಕ್ರಿಯಾಲೋಪ ಉಂಟಾಗಿದೆ ಎಂದು ಚರ್ಚೆ ಆರಂಭಿಸಿ ಇದು ಬಗೆಹರಿಯುವವರೆಗೆ ವಿಶ್ವಾಸಮತ ಯಾಚನೆ ಬೇಡ ಎಂದು ವಾದಿಸಿದರು. ಅತೃಪ್ತ ಶಾಸಕರ ಪ್ರಕರಣ ಪ್ರಸ್ತುತ ಇನ್ನೂ ಸುಪ್ರೀಂ ಕೋರ್ಟ್ನಲ್ಲಿದೆ. ಸುಪ್ರೀಂ ಕೋರ್ಟ್ ಆದೇಶವು ಅವರ ವರ್ತನೆ ಮೇಲೆ ಪ್ರಭಾವ ಬೀರುತ್ತದೆ, ಈ ಸಮಯದಲ್ಲಿ ವಿಶ್ವಾಸಮತ ತೆಗೆದುಕೊಳ್ಳುವುದು ಸಂವಿಧಾನದ ವಿರೋಧಿ ನಡೆ ಆಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಸ್ಪಷ್ಟತೆ ಬರುವವರೆಗೆ ವಿಶ್ವಾಸಮತಯಾಚನೆ ಬೇಡ ಎಂದರು. ಈ ನಡುವೆ ಅಧಿವೇಶನದಲ್ಲಿ ಭೋಜನ ವಿರಾಮ ತೆಗೆದುಕೊಳ್ಳಲಾಯಿತು. ಮಧ್ಯಾಹ್ನ ಮೂರು ಗಂಟೆಗೆ ಕಲಾಪ ನಡೆಯಲಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…