ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ವಿಶ್ವಾಸ ಮತಯಾಚನೆ ಮಧ್ಯಾಹ್ನದವರೆಗಿನ ಕಲಾಪದಲ್ಲಿ ನಡೆಯಲಿಲ್ಲ. ಸದನ ಕಲಾಪವನ್ನು 3 ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ಮುಂದೂಡಿದರು. ಬೆಳಗ್ಗಿನಿಂದಲೇ ಸದನದಲ್ಲಿ ಸುದೀರ್ಘ ಚರ್ಚೆ ಸದನದಲ್ಲಿ ನಡೆಯಿತು.
ವಿಶ್ವಾಸಮತ ಯಾಚನೆ ಬಗ್ಗೆ ಮಾತನಾಡಿದ ಮಾಜಿ ಸೀಎಂ ಸಿದ್ಧರಾಮಯ್ಯ, ವಿಶ್ವಾಸಮತ ಯಾಚನೆ ಬಗ್ಗೆ ಕ್ರಿಯಾಲೋಪ ಉಂಟಾಗಿದೆ ಎಂದು ಚರ್ಚೆ ಆರಂಭಿಸಿ ಇದು ಬಗೆಹರಿಯುವವರೆಗೆ ವಿಶ್ವಾಸಮತ ಯಾಚನೆ ಬೇಡ ಎಂದು ವಾದಿಸಿದರು. ಅತೃಪ್ತ ಶಾಸಕರ ಪ್ರಕರಣ ಪ್ರಸ್ತುತ ಇನ್ನೂ ಸುಪ್ರೀಂ ಕೋರ್ಟ್ನಲ್ಲಿದೆ. ಸುಪ್ರೀಂ ಕೋರ್ಟ್ ಆದೇಶವು ಅವರ ವರ್ತನೆ ಮೇಲೆ ಪ್ರಭಾವ ಬೀರುತ್ತದೆ, ಈ ಸಮಯದಲ್ಲಿ ವಿಶ್ವಾಸಮತ ತೆಗೆದುಕೊಳ್ಳುವುದು ಸಂವಿಧಾನದ ವಿರೋಧಿ ನಡೆ ಆಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಈ ಬಗ್ಗೆ ಸ್ಪಷ್ಟತೆ ಬರುವವರೆಗೆ ವಿಶ್ವಾಸಮತಯಾಚನೆ ಬೇಡ ಎಂದರು. ಈ ನಡುವೆ ಅಧಿವೇಶನದಲ್ಲಿ ಭೋಜನ ವಿರಾಮ ತೆಗೆದುಕೊಳ್ಳಲಾಯಿತು. ಮಧ್ಯಾಹ್ನ ಮೂರು ಗಂಟೆಗೆ ಕಲಾಪ ನಡೆಯಲಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…