ಪುತ್ತೂರು: ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ‘ವಿಶ್ವ ಆಹಾರ ಸುರಕ್ಷಾ ದಿನದ’ ಅಂಗವಾಗಿ ನಡೆದ ನಾಲ್ಕು ದಿನದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕ್ಯಾಂಪ್ಕೋ ಅಧ್ಯಕ್ಷರಾದ ಎಸ್.ಆರ್ ಸತೀಶ್ಚಂದ್ರ ವಹಿಸಿ “ವೈಯುಕ್ತಿಕವಾಗಿ ವ್ಯಕ್ತಿ ಬೆಳೆದಾಗ ಸಮಾಜವು ಕೂಡಾ ಬೆಳೆಯುತ್ತದೆ”,” ಕೆಲವೊಂದು ವಿಶೇಷ ಕಲೆಗಳು ಅನುವಂಶೀಯವಾಗಿ ಕೊಡುಗೆಯಾಗಿ ಬಂದಿದೆ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಅಂತಹ ವಿಶೇಷ ಶಕ್ತಿಯಿದ್ದು ಅದನ್ನು ಹೊರತರುವ ಪ್ರಯತ್ನ ನಡೆಯಬೇಕು” ಎಂದು ಹೇಳಿದರು.
ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಸುರೇಶ್ ಭಂಡಾರಿ ಮಾತಾಡಿ ” ಹೊಸತನವನ್ನು ಅಳವಡಿಸಿಕೊಳ್ಳುವ ಮೂಲಕ ಫ್ಯಾಕ್ಟರಿಯನ್ನು ಇನ್ನೂ ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯವಿದ್ದು ಎಲ್ಲರೂ ಸಮರ್ಪಣಾ ಭಾವದಿಂದ ಕೊಡುಗೆ ನೀಡಿದಾಗ ಇದು ಸಾಧ್ಯ ಎಂದರು .
ನೆಸ್ಲೆ ಘಟಕದ ಮುಖ್ಯಸ್ಥರಾದ ಪ್ರದೀಪ್ ವಲ್ಸಲಾ ,ಕ್ಯಾಂಪ್ಕೋ ಉತ್ಪದನಾ ಘಟಕದ ಎ.ಜಿ.ಮ್ ಅನೂಪ್ ,ತಾಂತ್ರಿಕ ಎ.ಜಿ.ಎಮ್ ಶ್ಯಾಮ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಕೇಶ್ ಕಾರ್ಯಕ್ರಮ ನಿರೂಪಿಸಿದರು. ರಾಧೇಶ್ ಕುಂದಲ್ಪಾಡಿ ಸ್ವಾಗತಿಸಿ, ಜೀವನದಾಸ್ ರೈ ವಂದಿಸಿದರು, ಶ್ರೀನಿವಾಸ ಕುಂಜತ್ತಾಯ ,ರಾಜೇಶ್ , ಪ್ರಶಾಂತ್ ಡಿ.ಎಸ್,ಪಿ.ಪಿ ಜೈನ್, ಪ್ರಮೋದ್ ಕೆ .ಯು ಗುಂಪು ಚಟುವಟಿಕೆಗಳನ್ನು ನಡೆಸಿಕೊಟ್ಟರು.
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…