ಅನುಕ್ರಮ

ವಿಶ್ವ ಪರಿಸರ ದಿನಕ್ಕೊಂದು ನಮನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶಾಲಾ ಬಾಲಕನೊಬ್ಬ ಮನೆಯಿಂದ ಹೊರಡುವಾಗ ಎರಡು ಬಾಟಲ್ ನೀರು ಹಿಡಿದುಕೊಂಡು ಹೊರಡುತ್ತಿದ್ದ. ಅಮ್ಮನಿಗೆ ಕುತೂಹಲ. ಮಗ ಯಾಕೆ ಎರಡು ಬಾಟಲ್ ಗಳನ್ನು ಹಿಡಿದುಕೊಂಡು  ಹೋಗುತ್ತಾನೆ ? ಅಮ್ಮ ಹಿಂಬಾಲಿಸಿ ಹೋದಳು. ಶಾಲೆಯ ದಾರಿಯ ಪಕ್ಕದಲ್ಲಿ ಒಂದು ಗಿಡಕ್ಕೆ ತನ್ನ ಒಂದು ಬಾಟಲಿಯ ನೀರುಣಿಸುವುದನ್ನು  ಅಮ್ಮ  ಕಂಡಳು. ಅಮ್ಮನಿಗೆ ಎಲ್ಲಾ ಅರ್ಥವಾಯಿತು. ಮಗನ ಬಗ್ಗೆ ಹೆಮ್ಮೆಯೆನಿಸಿತು. 

Advertisement
ಈ ಘಟನೆಯನ್ನು ನಮ್ಮ ಪತ್ರಿಕೋದ್ಯಮ ವಿಭಾಗದ ಪ್ರಥಮ ತರಗತಿಯಲ್ಲಿ ಉಪನ್ಯಾಸಕರಾದ ಭಾಸ್ಕರ ಹೆಗಡೆಯವರು ಹೇಳಿದರು. ಹುಡುಗನ ಈ ವರ್ತನೆ ಯನ್ನು ದಿನನಿತ್ಯ ಅವರು ಗಮನಿಸುತ್ತಿದ್ದರು. ನೀರು ಹಾಕುವುದು ಮಾತ್ರವಲ್ಲದೆ ಗಿಡದ ಸುತ್ತಲಿನ ಕಸ ಕಡ್ಡಿಗಳನ್ನು ತೆಗೆದು ಸ್ವಚ್ಛವಾಗಿರುವಂತೆ ಕಾಳಜಿ ವಹಿಸುತ್ತಿದ್ದ ಹುಡುಗನ ವರ್ತನೆ ಅನುಕರಣೀಯ. ಹುಡುಗನ ಈ ಗುಣವನ್ನು, ಪ್ರತಿಯೊಂದು ತರಗತಿ ಯಲ್ಲಿಯೂ ಹೇಳಿ ಮಕ್ಕಳ ಮನಪರಿವರ್ತನೆಗೆ ಪ್ರಯತ್ನಿಸುತ್ತಿದ್ದರು.
ಶಾಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಗುರುಗಳು ಏನು ಹೇಳುತ್ತಾರೋ ಅದನ್ನೇ ಪಾಲಿಸುತ್ತಾರೆ. ಅಲ್ಲಿ ಹೇಳುವ  ವಿಷಯವನ್ನೇ ಮಕ್ಕಳು ನಂಬುವುದು,      ಒಪ್ಪುವುದು. ಮನೆಯ ಹಿರಿಯರು ಹೇಳಿದ ಎಷ್ಟೋ ವಿಷಯಗಳನ್ನು ರೂಡಿಸಿ ಕೊಳ್ಳದ ಮಕ್ಕಳು ಗುರು ಗಳು ಹೇಳಿದ ಕೂಡಲೇ ಮಾಡಿಬಿಡುತ್ತಾರೆ.  ಪರಿಸರದ  ಕುರಿತು ಬಾಲ್ಯದಲ್ಲಿ ಕೇಳಿದ ಮಾತುಗಳು ನೋಡಿದ ಚಿತ್ರಗಳು ಗಾಢವಾದ ಪರಿಣಾಮ ಬೀರುತ್ತವೆ. ಹಾಗಾಗಿ  ಒಳ್ಳೆಯ ಅಧ್ಯಾಪಕರು ಶಾಲೆಗಳಲ್ಲಿ ಇದ್ದರೆ ಅದೇ ಮಕ್ಕಳ ,ಪೋಷಕರ ಪುಣ್ಯ.
ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಕಾರ್ಯ ಕ್ರಮಗಳು ಎಲ್ಲೆಡೆಯೂ ನಡೆಯುತ್ತಿದೆ.ಈ ಸಂಬಂಧ ಹೆಚ್ಚಿನ ಕಾಳಜಿ ಜನರಲ್ಲಿ  ಮೂಡುವ ಅಗತ್ಯವಿದೆ. ಪರಿಸರ ಚೆನ್ನಾಗಿ ಇದ್ದರೆ  ನಾವು ಆರೋಗ್ಯವಾಗಿರ ಬಹುದು.  ಪರಿಸರ ಬೇರೆಯಲ್ಲ, ನಾವು ಬೇರೆಯಲ್ಲ ಎಂಬ ಸೂಕ್ಷ್ಮ ವಿಷಯ ಜನರಿಗೆ ಅರ್ಥವಾದ ದಿನವೇ ನಿಜವಾದ  ಪರಿಸರ ದಿನ . ಆಗಲೇ ವಿಶ್ವ ಪರಿಸರ ದಿನದ ಆಚರಣೆಗೊಂದು ಮಹತ್ವ. ದೊರೆಯುವುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

14 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

14 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

15 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

15 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

15 hours ago