Advertisement
ಅನುಕ್ರಮ

ವಿಶ್ವ ಪರಿಸರ ದಿನಕ್ಕೊಂದು ನಮನ

Share

ಶಾಲಾ ಬಾಲಕನೊಬ್ಬ ಮನೆಯಿಂದ ಹೊರಡುವಾಗ ಎರಡು ಬಾಟಲ್ ನೀರು ಹಿಡಿದುಕೊಂಡು ಹೊರಡುತ್ತಿದ್ದ. ಅಮ್ಮನಿಗೆ ಕುತೂಹಲ. ಮಗ ಯಾಕೆ ಎರಡು ಬಾಟಲ್ ಗಳನ್ನು ಹಿಡಿದುಕೊಂಡು  ಹೋಗುತ್ತಾನೆ ? ಅಮ್ಮ ಹಿಂಬಾಲಿಸಿ ಹೋದಳು. ಶಾಲೆಯ ದಾರಿಯ ಪಕ್ಕದಲ್ಲಿ ಒಂದು ಗಿಡಕ್ಕೆ ತನ್ನ ಒಂದು ಬಾಟಲಿಯ ನೀರುಣಿಸುವುದನ್ನು  ಅಮ್ಮ  ಕಂಡಳು. ಅಮ್ಮನಿಗೆ ಎಲ್ಲಾ ಅರ್ಥವಾಯಿತು. ಮಗನ ಬಗ್ಗೆ ಹೆಮ್ಮೆಯೆನಿಸಿತು. 

ಈ ಘಟನೆಯನ್ನು ನಮ್ಮ ಪತ್ರಿಕೋದ್ಯಮ ವಿಭಾಗದ ಪ್ರಥಮ ತರಗತಿಯಲ್ಲಿ ಉಪನ್ಯಾಸಕರಾದ ಭಾಸ್ಕರ ಹೆಗಡೆಯವರು ಹೇಳಿದರು. ಹುಡುಗನ ಈ ವರ್ತನೆ ಯನ್ನು ದಿನನಿತ್ಯ ಅವರು ಗಮನಿಸುತ್ತಿದ್ದರು. ನೀರು ಹಾಕುವುದು ಮಾತ್ರವಲ್ಲದೆ ಗಿಡದ ಸುತ್ತಲಿನ ಕಸ ಕಡ್ಡಿಗಳನ್ನು ತೆಗೆದು ಸ್ವಚ್ಛವಾಗಿರುವಂತೆ ಕಾಳಜಿ ವಹಿಸುತ್ತಿದ್ದ ಹುಡುಗನ ವರ್ತನೆ ಅನುಕರಣೀಯ. ಹುಡುಗನ ಈ ಗುಣವನ್ನು, ಪ್ರತಿಯೊಂದು ತರಗತಿ ಯಲ್ಲಿಯೂ ಹೇಳಿ ಮಕ್ಕಳ ಮನಪರಿವರ್ತನೆಗೆ ಪ್ರಯತ್ನಿಸುತ್ತಿದ್ದರು.
ಶಾಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಗುರುಗಳು ಏನು ಹೇಳುತ್ತಾರೋ ಅದನ್ನೇ ಪಾಲಿಸುತ್ತಾರೆ. ಅಲ್ಲಿ ಹೇಳುವ  ವಿಷಯವನ್ನೇ ಮಕ್ಕಳು ನಂಬುವುದು,      ಒಪ್ಪುವುದು. ಮನೆಯ ಹಿರಿಯರು ಹೇಳಿದ ಎಷ್ಟೋ ವಿಷಯಗಳನ್ನು ರೂಡಿಸಿ ಕೊಳ್ಳದ ಮಕ್ಕಳು ಗುರು ಗಳು ಹೇಳಿದ ಕೂಡಲೇ ಮಾಡಿಬಿಡುತ್ತಾರೆ.  ಪರಿಸರದ  ಕುರಿತು ಬಾಲ್ಯದಲ್ಲಿ ಕೇಳಿದ ಮಾತುಗಳು ನೋಡಿದ ಚಿತ್ರಗಳು ಗಾಢವಾದ ಪರಿಣಾಮ ಬೀರುತ್ತವೆ. ಹಾಗಾಗಿ  ಒಳ್ಳೆಯ ಅಧ್ಯಾಪಕರು ಶಾಲೆಗಳಲ್ಲಿ ಇದ್ದರೆ ಅದೇ ಮಕ್ಕಳ ,ಪೋಷಕರ ಪುಣ್ಯ.
ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಕಾರ್ಯ ಕ್ರಮಗಳು ಎಲ್ಲೆಡೆಯೂ ನಡೆಯುತ್ತಿದೆ.ಈ ಸಂಬಂಧ ಹೆಚ್ಚಿನ ಕಾಳಜಿ ಜನರಲ್ಲಿ  ಮೂಡುವ ಅಗತ್ಯವಿದೆ. ಪರಿಸರ ಚೆನ್ನಾಗಿ ಇದ್ದರೆ  ನಾವು ಆರೋಗ್ಯವಾಗಿರ ಬಹುದು.  ಪರಿಸರ ಬೇರೆಯಲ್ಲ, ನಾವು ಬೇರೆಯಲ್ಲ ಎಂಬ ಸೂಕ್ಷ್ಮ ವಿಷಯ ಜನರಿಗೆ ಅರ್ಥವಾದ ದಿನವೇ ನಿಜವಾದ  ಪರಿಸರ ದಿನ . ಆಗಲೇ ವಿಶ್ವ ಪರಿಸರ ದಿನದ ಆಚರಣೆಗೊಂದು ಮಹತ್ವ. ದೊರೆಯುವುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

17 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

17 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

17 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

18 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

18 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago