Advertisement
ಅನುಕ್ರಮ

ವಿಶ್ವ ಪರಿಸರ ದಿನಕ್ಕೊಂದು ನಮನ

Share

ಶಾಲಾ ಬಾಲಕನೊಬ್ಬ ಮನೆಯಿಂದ ಹೊರಡುವಾಗ ಎರಡು ಬಾಟಲ್ ನೀರು ಹಿಡಿದುಕೊಂಡು ಹೊರಡುತ್ತಿದ್ದ. ಅಮ್ಮನಿಗೆ ಕುತೂಹಲ. ಮಗ ಯಾಕೆ ಎರಡು ಬಾಟಲ್ ಗಳನ್ನು ಹಿಡಿದುಕೊಂಡು  ಹೋಗುತ್ತಾನೆ ? ಅಮ್ಮ ಹಿಂಬಾಲಿಸಿ ಹೋದಳು. ಶಾಲೆಯ ದಾರಿಯ ಪಕ್ಕದಲ್ಲಿ ಒಂದು ಗಿಡಕ್ಕೆ ತನ್ನ ಒಂದು ಬಾಟಲಿಯ ನೀರುಣಿಸುವುದನ್ನು  ಅಮ್ಮ  ಕಂಡಳು. ಅಮ್ಮನಿಗೆ ಎಲ್ಲಾ ಅರ್ಥವಾಯಿತು. ಮಗನ ಬಗ್ಗೆ ಹೆಮ್ಮೆಯೆನಿಸಿತು. 

ಈ ಘಟನೆಯನ್ನು ನಮ್ಮ ಪತ್ರಿಕೋದ್ಯಮ ವಿಭಾಗದ ಪ್ರಥಮ ತರಗತಿಯಲ್ಲಿ ಉಪನ್ಯಾಸಕರಾದ ಭಾಸ್ಕರ ಹೆಗಡೆಯವರು ಹೇಳಿದರು. ಹುಡುಗನ ಈ ವರ್ತನೆ ಯನ್ನು ದಿನನಿತ್ಯ ಅವರು ಗಮನಿಸುತ್ತಿದ್ದರು. ನೀರು ಹಾಕುವುದು ಮಾತ್ರವಲ್ಲದೆ ಗಿಡದ ಸುತ್ತಲಿನ ಕಸ ಕಡ್ಡಿಗಳನ್ನು ತೆಗೆದು ಸ್ವಚ್ಛವಾಗಿರುವಂತೆ ಕಾಳಜಿ ವಹಿಸುತ್ತಿದ್ದ ಹುಡುಗನ ವರ್ತನೆ ಅನುಕರಣೀಯ. ಹುಡುಗನ ಈ ಗುಣವನ್ನು, ಪ್ರತಿಯೊಂದು ತರಗತಿ ಯಲ್ಲಿಯೂ ಹೇಳಿ ಮಕ್ಕಳ ಮನಪರಿವರ್ತನೆಗೆ ಪ್ರಯತ್ನಿಸುತ್ತಿದ್ದರು.
ಶಾಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಗುರುಗಳು ಏನು ಹೇಳುತ್ತಾರೋ ಅದನ್ನೇ ಪಾಲಿಸುತ್ತಾರೆ. ಅಲ್ಲಿ ಹೇಳುವ  ವಿಷಯವನ್ನೇ ಮಕ್ಕಳು ನಂಬುವುದು,      ಒಪ್ಪುವುದು. ಮನೆಯ ಹಿರಿಯರು ಹೇಳಿದ ಎಷ್ಟೋ ವಿಷಯಗಳನ್ನು ರೂಡಿಸಿ ಕೊಳ್ಳದ ಮಕ್ಕಳು ಗುರು ಗಳು ಹೇಳಿದ ಕೂಡಲೇ ಮಾಡಿಬಿಡುತ್ತಾರೆ.  ಪರಿಸರದ  ಕುರಿತು ಬಾಲ್ಯದಲ್ಲಿ ಕೇಳಿದ ಮಾತುಗಳು ನೋಡಿದ ಚಿತ್ರಗಳು ಗಾಢವಾದ ಪರಿಣಾಮ ಬೀರುತ್ತವೆ. ಹಾಗಾಗಿ  ಒಳ್ಳೆಯ ಅಧ್ಯಾಪಕರು ಶಾಲೆಗಳಲ್ಲಿ ಇದ್ದರೆ ಅದೇ ಮಕ್ಕಳ ,ಪೋಷಕರ ಪುಣ್ಯ.
ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಕಾರ್ಯ ಕ್ರಮಗಳು ಎಲ್ಲೆಡೆಯೂ ನಡೆಯುತ್ತಿದೆ.ಈ ಸಂಬಂಧ ಹೆಚ್ಚಿನ ಕಾಳಜಿ ಜನರಲ್ಲಿ  ಮೂಡುವ ಅಗತ್ಯವಿದೆ. ಪರಿಸರ ಚೆನ್ನಾಗಿ ಇದ್ದರೆ  ನಾವು ಆರೋಗ್ಯವಾಗಿರ ಬಹುದು.  ಪರಿಸರ ಬೇರೆಯಲ್ಲ, ನಾವು ಬೇರೆಯಲ್ಲ ಎಂಬ ಸೂಕ್ಷ್ಮ ವಿಷಯ ಜನರಿಗೆ ಅರ್ಥವಾದ ದಿನವೇ ನಿಜವಾದ  ಪರಿಸರ ದಿನ . ಆಗಲೇ ವಿಶ್ವ ಪರಿಸರ ದಿನದ ಆಚರಣೆಗೊಂದು ಮಹತ್ವ. ದೊರೆಯುವುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

12 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

1 day ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

1 day ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

1 day ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago