Advertisement
ಅನುಕ್ರಮ

ವಿಶ್ವ ಪರಿಸರ ದಿನಕ್ಕೊಂದು ನಮನ

Share

ಶಾಲಾ ಬಾಲಕನೊಬ್ಬ ಮನೆಯಿಂದ ಹೊರಡುವಾಗ ಎರಡು ಬಾಟಲ್ ನೀರು ಹಿಡಿದುಕೊಂಡು ಹೊರಡುತ್ತಿದ್ದ. ಅಮ್ಮನಿಗೆ ಕುತೂಹಲ. ಮಗ ಯಾಕೆ ಎರಡು ಬಾಟಲ್ ಗಳನ್ನು ಹಿಡಿದುಕೊಂಡು  ಹೋಗುತ್ತಾನೆ ? ಅಮ್ಮ ಹಿಂಬಾಲಿಸಿ ಹೋದಳು. ಶಾಲೆಯ ದಾರಿಯ ಪಕ್ಕದಲ್ಲಿ ಒಂದು ಗಿಡಕ್ಕೆ ತನ್ನ ಒಂದು ಬಾಟಲಿಯ ನೀರುಣಿಸುವುದನ್ನು  ಅಮ್ಮ  ಕಂಡಳು. ಅಮ್ಮನಿಗೆ ಎಲ್ಲಾ ಅರ್ಥವಾಯಿತು. ಮಗನ ಬಗ್ಗೆ ಹೆಮ್ಮೆಯೆನಿಸಿತು. 

ಈ ಘಟನೆಯನ್ನು ನಮ್ಮ ಪತ್ರಿಕೋದ್ಯಮ ವಿಭಾಗದ ಪ್ರಥಮ ತರಗತಿಯಲ್ಲಿ ಉಪನ್ಯಾಸಕರಾದ ಭಾಸ್ಕರ ಹೆಗಡೆಯವರು ಹೇಳಿದರು. ಹುಡುಗನ ಈ ವರ್ತನೆ ಯನ್ನು ದಿನನಿತ್ಯ ಅವರು ಗಮನಿಸುತ್ತಿದ್ದರು. ನೀರು ಹಾಕುವುದು ಮಾತ್ರವಲ್ಲದೆ ಗಿಡದ ಸುತ್ತಲಿನ ಕಸ ಕಡ್ಡಿಗಳನ್ನು ತೆಗೆದು ಸ್ವಚ್ಛವಾಗಿರುವಂತೆ ಕಾಳಜಿ ವಹಿಸುತ್ತಿದ್ದ ಹುಡುಗನ ವರ್ತನೆ ಅನುಕರಣೀಯ. ಹುಡುಗನ ಈ ಗುಣವನ್ನು, ಪ್ರತಿಯೊಂದು ತರಗತಿ ಯಲ್ಲಿಯೂ ಹೇಳಿ ಮಕ್ಕಳ ಮನಪರಿವರ್ತನೆಗೆ ಪ್ರಯತ್ನಿಸುತ್ತಿದ್ದರು.
ಶಾಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಗುರುಗಳು ಏನು ಹೇಳುತ್ತಾರೋ ಅದನ್ನೇ ಪಾಲಿಸುತ್ತಾರೆ. ಅಲ್ಲಿ ಹೇಳುವ  ವಿಷಯವನ್ನೇ ಮಕ್ಕಳು ನಂಬುವುದು,      ಒಪ್ಪುವುದು. ಮನೆಯ ಹಿರಿಯರು ಹೇಳಿದ ಎಷ್ಟೋ ವಿಷಯಗಳನ್ನು ರೂಡಿಸಿ ಕೊಳ್ಳದ ಮಕ್ಕಳು ಗುರು ಗಳು ಹೇಳಿದ ಕೂಡಲೇ ಮಾಡಿಬಿಡುತ್ತಾರೆ.  ಪರಿಸರದ  ಕುರಿತು ಬಾಲ್ಯದಲ್ಲಿ ಕೇಳಿದ ಮಾತುಗಳು ನೋಡಿದ ಚಿತ್ರಗಳು ಗಾಢವಾದ ಪರಿಣಾಮ ಬೀರುತ್ತವೆ. ಹಾಗಾಗಿ  ಒಳ್ಳೆಯ ಅಧ್ಯಾಪಕರು ಶಾಲೆಗಳಲ್ಲಿ ಇದ್ದರೆ ಅದೇ ಮಕ್ಕಳ ,ಪೋಷಕರ ಪುಣ್ಯ.
ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಕಾರ್ಯ ಕ್ರಮಗಳು ಎಲ್ಲೆಡೆಯೂ ನಡೆಯುತ್ತಿದೆ.ಈ ಸಂಬಂಧ ಹೆಚ್ಚಿನ ಕಾಳಜಿ ಜನರಲ್ಲಿ  ಮೂಡುವ ಅಗತ್ಯವಿದೆ. ಪರಿಸರ ಚೆನ್ನಾಗಿ ಇದ್ದರೆ  ನಾವು ಆರೋಗ್ಯವಾಗಿರ ಬಹುದು.  ಪರಿಸರ ಬೇರೆಯಲ್ಲ, ನಾವು ಬೇರೆಯಲ್ಲ ಎಂಬ ಸೂಕ್ಷ್ಮ ವಿಷಯ ಜನರಿಗೆ ಅರ್ಥವಾದ ದಿನವೇ ನಿಜವಾದ  ಪರಿಸರ ದಿನ . ಆಗಲೇ ವಿಶ್ವ ಪರಿಸರ ದಿನದ ಆಚರಣೆಗೊಂದು ಮಹತ್ವ. ದೊರೆಯುವುದು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago