Advertisement
ಕೃಷಿ

ವಿಷಮುಕ್ತ ತರಕಾರಿ ಸೇವನೆಗೆ ಕೈತೋಟ ಮತ್ತು ತಾರಸಿ ತೋಟ ಸಹಕಾರಿ

Share

ಮಂಗಳೂರು: ನಗರದಲ್ಲಿದ್ದರೂ, ಗ್ರಾಮೀಣದಲ್ಲಿದ್ದರೂ ತರಕಾರಿ ಹಾಗೂ ಆಹಾರವನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ. ಇವುಗಳಿಗೆ ಮೂಲ ಆಧಾರವಾಗಿರುವುದು ಕೃಷಿ. ಇತ್ತೀಚಿನ ದಿನಗಳಲ್ಲಿ ಕೃಷಿ ಭೂಮಿಯು ಮಾಯವಾಗಿ ನಗರದ ವಿಸ್ತೀರ್ಣ ಹೆಚ್ಚಾಗಿರುವಂತೆಯೇ ಉತ್ತಮ ಜೀವನ ಮಟ್ಟವನ್ನು ನಿರೀಕ್ಷಿಸಿ ಯುವ ರೈತರು ನಗರಗಳಿಗೆ ವಲಸೆ ಹೋಗುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ತರಕಾರಿಗೆ ಹೆಚ್ಚಿನ ಬೇಡಿಕೆ, ಉತ್ತಮ ಬೆಲೆ ಸಿಗುವುದರಿಂದ ರೈತರು ಹೆಚ್ಚು ಇಳುವರಿ ನೀಡುವ ಸುಧಾರಿತ ಮತ್ತು ಹೈಬ್ರಿಡ್ ತಳಿಗಳನ್ನು ಬೆಳೆಸುತ್ತಿದ್ದಾರೆ. ಈ ತಳಿಗಳು ಶೀಘ್ರವಾಗಿ ಕೀಟ-ರೋಗಕ್ಕೆ ತುತ್ತಾಗುವುದರಿಂದ ನಿವಾರಣೆಗೆ ಅಧಿಕ ಪ್ರಮಾಣದಲ್ಲಿ ಹಾನಿಕಾರಕ ರಾಸಾಯನಿಕಗಳನ್ನು ಸಿಂಪಡಣೆ ಮಾಡಲಾಗುತ್ತಿದೆ. ಇದರಿಂದ ಜನರು ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ನಗರವಾಸಿಗಳು ಸ್ವಯಂಪ್ರೇರಿತವಾಗಿ ಸಾಧ್ಯವಾದ ಎಲ್ಲಾ ರೀತಿಯ ತರಕಾರಿ ಮತ್ತು ಇತರೆ ಬೆಳೆಗಳನ್ನು ಬೆಳೆಯುವುದೇ ಇದಕ್ಕೆಲ್ಲಾ ಇರುವ ಪರಿಹಾರ.
ಒಂದು ಕುಟುಂಬಕ್ಕೆ ಬೇಕಾಗುವ ತಾಜಾ ತರಕಾರಿ ಮತ್ತು ಹಣ್ಣುಗಳನ್ನು ಪಡೆಯಲು ತಮ್ಮ ಮನೆಯ ಆವರಣ-ಹಿತ್ತಲಲ್ಲಿ ಬೆಳೆಸುವ ತೋಟವನ್ನು ಕೈತೋಟ ಎಂದು ಕರೆಯುತ್ತೇವೆ.

ಕೈತೋಟ ಮಾಡಲು ಸ್ಥಳ ಇಲ್ಲದೇ ಇರುವ ಪಕ್ಷದಲ್ಲಿ ಮನೆಯ ತಾರಸಿ ಮೇಲೆ ಕುಂಡಗಳಲ್ಲಿ, ಗ್ರೋಬ್ಯಾಗ್‍ಗಳಲ್ಲಿ ಸುಲಭವಾಗಿ ತರಕಾರಿ ಹಣ್ಣುಗಳನ್ನು ಬೆಳೆಯುವುದೇ ತಾರಸಿ ತೋಟ.

ತಾರಸಿ ತೋಟದ ಕುಂಡಗಳಲ್ಲಿ-ಗ್ರೋಬ್ಯಾಗ್‍ಗಳಲ್ಲಿ ತುಂಬುವ ಮಿಶ್ರಣ ತಯಾರಿಸುವ ವಿಧಾನ ಈ ಕೆಳಕಂಡಿರುತ್ತದೆ. ಮಣ್ಣು, ಮರಳು ಅಥವಾ ಕೋಕೋಪಿಟ್ ಮತ್ತು ಕಾಂಪೋಸ್ಟ್-ಬಯೋಮಿಕ್ಸ್ ಅನ್ನು 1:1:1 ಪ್ರಮಾಣದಲ್ಲಿ ಬೆರೆಸಿ ಮಿಶ್ರಣ ಮಾಡಿಕೊಳ್ಳುವುದು. ಈ ಮಿಶ್ರಣವನ್ನು ಕುಂಡಗಳಲ್ಲಿ-ಗ್ರೋಬ್ಯಾಗ್‍ಗಳಲ್ಲಿ ತುಂಬಿಸಿ ಬೀಜಗಳನ್ನು ಅಥವಾ ಸಸಿಗಳನ್ನು ನಾಟಿ ಮಾಡಿ, ದಿನಾಲೂ ನೀರು ಹಾಕುವುದು. ಬಳ್ಳಿಗಳು ಇರುವ ತರಕಾರಿಗೆ ಚೆನ್ನಾಗಿ ಹರಡಿಕೊಳ್ಳಲು ಆಧಾರಕೋಲು ಕೊಡುವುದು.

ಕೈತೋಟ ಮತ್ತು ತಾರಸಿ ತೋಟ ಬೆಳೆಸುವಾಗ ಆರೋಗ್ಯವನ್ನು ಕಾಪಾಡಿಕೊಳ್ಳುವ ಹಿತದೃಷ್ಟಿಯಿಂದ ಶುಚಿತ್ವವನ್ನು ಕಾಪಾಡಿಕೊಳ್ಳಬೇಕಾಗುತ್ತದೆ ಹಾಗೂ ಸಾವಯವ ಕೃಷಿಗೆ ಹೆಚ್ಚಿನ ಮಹತ್ವನ್ನು ನೀಡಿ ಹಾನಿಕಾರಕ ರಾಸಾಯನಿಕಗಳನ್ನು ಬಳಸದೇ ತೋಟವನ್ನು ಮಾಡಬೇಕಾಗುವುದು.
ಮುಖ್ಯವಾಗಿ ತರಕಾರಿ ಬೆಳೆಯುವಾಗ ಗಮನದಲ್ಲಿ ಇರಬೇಕಾದ ಅಂಶಗಳೇನೆಂದರೆ ಗಿಡಗಳಿಗೆ ಅಗತ್ಯಕ್ಕಿಂತ ಜಾಸ್ತಿ ನೀರು ಕೊಡಬಾರದು, ಗಿಡಗಳಿಗೆ ಸಾಧ್ಯವಾದಷ್ಟು ಬಿಸಿಲು ಬೀಳುವಂತೆ ನೋಡಿಕೊಳ್ಳಬೇಕು, ತರಕಾರಿ ಗಿಡಗಳಲ್ಲಿ ರೋಗದ ಲಕ್ಷಣ ಪ್ರಥಮ ಬಾರಿಗೆ ಕಂಡ ಕೂಡಲೇ ಅದನ್ನು ಅಲ್ಲಿಂದ ದೂರಕ್ಕೆ ಸ್ಥಳಾಂತರಿಸಬೇಕು ಹಾಗೂ ಬೇವಿನ ಸತ್ವದ ದ್ರಾವಣವನ್ನು ಬಳಸಿ ಪೀಡೆ ನಿವಾರಣೆಗೆ ಆದ್ಯತೆ ನೀಡಬೇಕು.

ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ, ತೋಟಗಾರಿಕೆ ಉಪನಿರ್ದೇಶಕರ ಕಚೇರಿ, ಜಿಲ್ಲಾ ಪಂಚಾಯತ್ ಮಂಗಳೂರು ದೂರವಾಣಿ ಸಂಖ್ಯೆ: 8277806372 ಸಂಪರ್ಕಿಸಬೇಕು ಎಂದು ಉಪನಿರ್ದೇಶಕರು ತೋಟಗಾರಿಕೆ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

7 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

7 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

14 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

16 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

1 day ago