Advertisement
ಮಾಹಿತಿ

ವಿಷ್ಣುಗುಪ್ತ ವಿಶ್ವವಿದ್ಯಾಪೀಠ: ಅಧ್ಯಯನಕ್ಕೆ ಅರ್ಜಿ ಆಹ್ವಾನ

Share

ಬೆಂಗಳೂರು: ಆಧುನಿಕ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ತಕ್ಷಶಿಲೆ ವಿವಿ ಮಾದರಿಯಲ್ಲಿ ಸಮಗ್ರ ಭಾರತೀಯ ಶಿಕ್ಷಣ ಹಾಗೂ ಕಲೆಗಳನ್ನು ಒಂದೇ ಸೂರಿನಡಿ ಕಲಿಸುವ ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಲೋಕಾರ್ಪಣೆ ಏಪ್ರಿಲ್ 26ರಂದು ನಡೆಯಲಿದ್ದು, ಮೊದಲ ಬ್ಯಾಚ್‍ಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಮೇ 15 ಕೊನೆಯ ದಿನ.

ಮೊದಲ ವರ್ಷ ಮೂಲಾಧಾರ ಎಂಬ ಎರಡು ವರ್ಷದ ಕೋರ್ಸ್ ಆರಂಭಿಸಲಾಗುತ್ತದೆ. ಆದರೆ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಒಂದು ವರ್ಷದ ಬಾಲ ತರಗತಿ ಇರುತ್ತದೆ ಎಂದು ವಿವಿವಿ ಪ್ರಕಟಣೆ ಹೇಳಿದೆ.

ಮೂಲಾಧಾರ ಕೋರ್ಸ್ ಪಠ್ಯವಿಷಯದಲ್ಲಿ ವೇದಪಥ (ವೇದಮೂಲವಾದ ಭಾರತೀಯ ವಿದ್ಯೆ- ಕಲೆಗಳ ಸಮಗ್ರ ಪರಿಚಯ), ರಾಮಾಯಣ, ಮಹಾಭಾರತ, ಸಂಸ್ಕೃತ ವ್ಯಾಕರಣ, ಆಯುರ್ವೇದ, ಯೋಗ, ಸಂಗೀತ, ಮಹಾಪುರುಷ ಚರಿತ್ರೆ, ಇಂಗ್ಲಿಷ್, ಕಂಪ್ಯೂಟರ್, ವಿಜ್ಞಾನ, ಸಂಪರ್ಕ ಸಂವಾದ ಕೌಶಲ, ಭಾರತದ ಸಂವಿಧಾನ, ಲೋಕಜ್ಞಾನ ಮತ್ತಿತರ ವಿಷಯಗಳು ಸೇರಿವೆ. ಭಾರತೀಯ ವಿದ್ಯೆ, ಕಲೆಗಳ ಅಧ್ಯಯನಕ್ಕೆ ಬೇಕಾದ ಅರ್ಹತೆ, ಸಾಮಥ್ರ್ಯ ಮತ್ತು ಮನೋಭೂಮಿಕೆ ರೂಪಿಸುವುದು, ಪದವಿ ತರಗತಿಯಲ್ಲಿ ವಿಷಯದ ಆಯ್ಕೆಗೆ ಬೇಕಾದ ಸಮಗ್ರ ಭಾರತೀಯ ವಿದ್ಯೆ- ಕಲೆಗಳ ಸಾಮಾನ್ಯ ಜ್ಞಾನ ಪ್ರಾಪ್ತಿ, ವಿಶೇಷ ಕಲಿಕೆಗೆ ಬೇಕಾಗುವ ಭಾಷಾನೈಪುಣ್ಯ ಕರಗತ ಮಾಡಿಕೊಳ್ಳುವುದು ಹಾಗೂ ಸಮಗ್ರ ಭಾರತ- ಭಾರತೀಯ ಸಂಸ್ಕೃತಿಯ ಪರಿಚಯವನ್ನು ಈ ಎರಡು ವರ್ಷಗಳ ಕೋರ್ಸ್‍ನಲ್ಲಿ ಪಡೆಯಬಹುದಾಗಿದೆ.

ಪೂರ್ವಾಂಕುರ (8-16 ವಯಸ್ಸು), ಉತ್ತರಾಂಕುರ (16 ರಿಂದ 24 ವರ್ಷ) ಹಾಗೂ ಫಲಿತ ಹೀಗೆ ಮೂರು ವಿಭಾಗಗಳಲ್ಲಿ ಕಲಿಕೆಗೆ ಅವಕಾಶವಿದ್ದು, ಜಾತಿ, ಮತ, ಲಿಂಗ, ಭಾಷಾಭೇದವಿಲ್ಲದೇ ಹಿರಿಯ ನಾಗರಿಕರು ಕೂಡಾ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ ನಡೆಸುವ ದ್ವಾರಪರೀಕ್ಷೆಯೇ ಅರ್ಹತಾ ಮಾನದಂಡವಾಗಿರುತ್ತದೆ. ಕಲಿಕಾರ್ಥಿಗಳಿಗೆ ಸೂಕ್ತ ವಸತಿ ಮತ್ತು ಆಹಾರ ವ್ಯವಸ್ಥೆ ಇರುತ್ತದೆ.

ಗೋಕರ್ಣ ಸಮೀಪದ ಅಶೋಕೆಯಲ್ಲಿರುವ ವಿವಿವಿ ಕಾರ್ಯಾಲಯ, ಗೋಕರ್ಣ ಮಹಾಬಲೇಶ್ವರ ದೇವಾಲಯ, ಬೆಂಗಳೂರು ಗಿರಿನಗರದ ಶ್ರೀರಾಮಾಶ್ರಮ, ಹೊಸನಗರದ ರಾಮಚಂದ್ರಾಪುರ ಮಠ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಮಾಣಿಯಲ್ಲಿರುವ ಶ್ರೀರಾಮಚಂದ್ರಾಪುರ ಮಠದಲ್ಲಿ ಅರ್ಜಿ ನಮೂನೆಗಳು ಲಭ್ಯವಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬೇಕಾದ ವಿಳಾಸ: ವ್ಯವಸ್ಥಾಪಕರು, ವಿಷ್ಣುಗುಪ್ತ ವಿಶ್ವವಿದ್ಯಾಪೀಠ, ಅಶೋಕೆ, ಗೋಕರ್ಣ ಅಂಚೆ, ಕುಮಟಾ ತಾಲೂಕು, ಉತ್ತರ ಕನ್ನಡ ಜಿಲ್ಲೆ, ಕರ್ನಾಟಕ- 5581326. ದೂರವಾಣಿ: 9449595248, 9449595288.
ಆನ್‍ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು www.srisamsthana.org/vvvನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!

ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…

1 hour ago

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್

ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…

7 hours ago

ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ

ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…

14 hours ago

ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ

ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…

15 hours ago

ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ

ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ

ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…

2 days ago