Advertisement
ಮಾಹಿತಿ

ವಿಷ್ಣುಗುಪ್ತ ವಿಶ್ವವಿದ್ಯಾಪೀಠ: ಅಧ್ಯಯನಕ್ಕೆ ಅರ್ಜಿ ಆಹ್ವಾನ

Share

ಬೆಂಗಳೂರು: ಆಧುನಿಕ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ತಕ್ಷಶಿಲೆ ವಿವಿ ಮಾದರಿಯಲ್ಲಿ ಸಮಗ್ರ ಭಾರತೀಯ ಶಿಕ್ಷಣ ಹಾಗೂ ಕಲೆಗಳನ್ನು ಒಂದೇ ಸೂರಿನಡಿ ಕಲಿಸುವ ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಲೋಕಾರ್ಪಣೆ ಏಪ್ರಿಲ್ 26ರಂದು ನಡೆಯಲಿದ್ದು, ಮೊದಲ ಬ್ಯಾಚ್‍ಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಮೇ 15 ಕೊನೆಯ ದಿನ.

ಮೊದಲ ವರ್ಷ ಮೂಲಾಧಾರ ಎಂಬ ಎರಡು ವರ್ಷದ ಕೋರ್ಸ್ ಆರಂಭಿಸಲಾಗುತ್ತದೆ. ಆದರೆ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಒಂದು ವರ್ಷದ ಬಾಲ ತರಗತಿ ಇರುತ್ತದೆ ಎಂದು ವಿವಿವಿ ಪ್ರಕಟಣೆ ಹೇಳಿದೆ.

ಮೂಲಾಧಾರ ಕೋರ್ಸ್ ಪಠ್ಯವಿಷಯದಲ್ಲಿ ವೇದಪಥ (ವೇದಮೂಲವಾದ ಭಾರತೀಯ ವಿದ್ಯೆ- ಕಲೆಗಳ ಸಮಗ್ರ ಪರಿಚಯ), ರಾಮಾಯಣ, ಮಹಾಭಾರತ, ಸಂಸ್ಕೃತ ವ್ಯಾಕರಣ, ಆಯುರ್ವೇದ, ಯೋಗ, ಸಂಗೀತ, ಮಹಾಪುರುಷ ಚರಿತ್ರೆ, ಇಂಗ್ಲಿಷ್, ಕಂಪ್ಯೂಟರ್, ವಿಜ್ಞಾನ, ಸಂಪರ್ಕ ಸಂವಾದ ಕೌಶಲ, ಭಾರತದ ಸಂವಿಧಾನ, ಲೋಕಜ್ಞಾನ ಮತ್ತಿತರ ವಿಷಯಗಳು ಸೇರಿವೆ. ಭಾರತೀಯ ವಿದ್ಯೆ, ಕಲೆಗಳ ಅಧ್ಯಯನಕ್ಕೆ ಬೇಕಾದ ಅರ್ಹತೆ, ಸಾಮಥ್ರ್ಯ ಮತ್ತು ಮನೋಭೂಮಿಕೆ ರೂಪಿಸುವುದು, ಪದವಿ ತರಗತಿಯಲ್ಲಿ ವಿಷಯದ ಆಯ್ಕೆಗೆ ಬೇಕಾದ ಸಮಗ್ರ ಭಾರತೀಯ ವಿದ್ಯೆ- ಕಲೆಗಳ ಸಾಮಾನ್ಯ ಜ್ಞಾನ ಪ್ರಾಪ್ತಿ, ವಿಶೇಷ ಕಲಿಕೆಗೆ ಬೇಕಾಗುವ ಭಾಷಾನೈಪುಣ್ಯ ಕರಗತ ಮಾಡಿಕೊಳ್ಳುವುದು ಹಾಗೂ ಸಮಗ್ರ ಭಾರತ- ಭಾರತೀಯ ಸಂಸ್ಕೃತಿಯ ಪರಿಚಯವನ್ನು ಈ ಎರಡು ವರ್ಷಗಳ ಕೋರ್ಸ್‍ನಲ್ಲಿ ಪಡೆಯಬಹುದಾಗಿದೆ.

ಪೂರ್ವಾಂಕುರ (8-16 ವಯಸ್ಸು), ಉತ್ತರಾಂಕುರ (16 ರಿಂದ 24 ವರ್ಷ) ಹಾಗೂ ಫಲಿತ ಹೀಗೆ ಮೂರು ವಿಭಾಗಗಳಲ್ಲಿ ಕಲಿಕೆಗೆ ಅವಕಾಶವಿದ್ದು, ಜಾತಿ, ಮತ, ಲಿಂಗ, ಭಾಷಾಭೇದವಿಲ್ಲದೇ ಹಿರಿಯ ನಾಗರಿಕರು ಕೂಡಾ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ ನಡೆಸುವ ದ್ವಾರಪರೀಕ್ಷೆಯೇ ಅರ್ಹತಾ ಮಾನದಂಡವಾಗಿರುತ್ತದೆ. ಕಲಿಕಾರ್ಥಿಗಳಿಗೆ ಸೂಕ್ತ ವಸತಿ ಮತ್ತು ಆಹಾರ ವ್ಯವಸ್ಥೆ ಇರುತ್ತದೆ.

ಗೋಕರ್ಣ ಸಮೀಪದ ಅಶೋಕೆಯಲ್ಲಿರುವ ವಿವಿವಿ ಕಾರ್ಯಾಲಯ, ಗೋಕರ್ಣ ಮಹಾಬಲೇಶ್ವರ ದೇವಾಲಯ, ಬೆಂಗಳೂರು ಗಿರಿನಗರದ ಶ್ರೀರಾಮಾಶ್ರಮ, ಹೊಸನಗರದ ರಾಮಚಂದ್ರಾಪುರ ಮಠ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಮಾಣಿಯಲ್ಲಿರುವ ಶ್ರೀರಾಮಚಂದ್ರಾಪುರ ಮಠದಲ್ಲಿ ಅರ್ಜಿ ನಮೂನೆಗಳು ಲಭ್ಯವಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬೇಕಾದ ವಿಳಾಸ: ವ್ಯವಸ್ಥಾಪಕರು, ವಿಷ್ಣುಗುಪ್ತ ವಿಶ್ವವಿದ್ಯಾಪೀಠ, ಅಶೋಕೆ, ಗೋಕರ್ಣ ಅಂಚೆ, ಕುಮಟಾ ತಾಲೂಕು, ಉತ್ತರ ಕನ್ನಡ ಜಿಲ್ಲೆ, ಕರ್ನಾಟಕ- 5581326. ದೂರವಾಣಿ: 9449595248, 9449595288.
ಆನ್‍ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು www.srisamsthana.org/vvvನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago