Advertisement
ಮಾಹಿತಿ

ವಿಷ್ಣುಗುಪ್ತ ವಿಶ್ವವಿದ್ಯಾಪೀಠ: ಅಧ್ಯಯನಕ್ಕೆ ಅರ್ಜಿ ಆಹ್ವಾನ

Share

ಬೆಂಗಳೂರು: ಆಧುನಿಕ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ತಕ್ಷಶಿಲೆ ವಿವಿ ಮಾದರಿಯಲ್ಲಿ ಸಮಗ್ರ ಭಾರತೀಯ ಶಿಕ್ಷಣ ಹಾಗೂ ಕಲೆಗಳನ್ನು ಒಂದೇ ಸೂರಿನಡಿ ಕಲಿಸುವ ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಲೋಕಾರ್ಪಣೆ ಏಪ್ರಿಲ್ 26ರಂದು ನಡೆಯಲಿದ್ದು, ಮೊದಲ ಬ್ಯಾಚ್‍ಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಮೇ 15 ಕೊನೆಯ ದಿನ.

ಮೊದಲ ವರ್ಷ ಮೂಲಾಧಾರ ಎಂಬ ಎರಡು ವರ್ಷದ ಕೋರ್ಸ್ ಆರಂಭಿಸಲಾಗುತ್ತದೆ. ಆದರೆ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಒಂದು ವರ್ಷದ ಬಾಲ ತರಗತಿ ಇರುತ್ತದೆ ಎಂದು ವಿವಿವಿ ಪ್ರಕಟಣೆ ಹೇಳಿದೆ.

ಮೂಲಾಧಾರ ಕೋರ್ಸ್ ಪಠ್ಯವಿಷಯದಲ್ಲಿ ವೇದಪಥ (ವೇದಮೂಲವಾದ ಭಾರತೀಯ ವಿದ್ಯೆ- ಕಲೆಗಳ ಸಮಗ್ರ ಪರಿಚಯ), ರಾಮಾಯಣ, ಮಹಾಭಾರತ, ಸಂಸ್ಕೃತ ವ್ಯಾಕರಣ, ಆಯುರ್ವೇದ, ಯೋಗ, ಸಂಗೀತ, ಮಹಾಪುರುಷ ಚರಿತ್ರೆ, ಇಂಗ್ಲಿಷ್, ಕಂಪ್ಯೂಟರ್, ವಿಜ್ಞಾನ, ಸಂಪರ್ಕ ಸಂವಾದ ಕೌಶಲ, ಭಾರತದ ಸಂವಿಧಾನ, ಲೋಕಜ್ಞಾನ ಮತ್ತಿತರ ವಿಷಯಗಳು ಸೇರಿವೆ. ಭಾರತೀಯ ವಿದ್ಯೆ, ಕಲೆಗಳ ಅಧ್ಯಯನಕ್ಕೆ ಬೇಕಾದ ಅರ್ಹತೆ, ಸಾಮಥ್ರ್ಯ ಮತ್ತು ಮನೋಭೂಮಿಕೆ ರೂಪಿಸುವುದು, ಪದವಿ ತರಗತಿಯಲ್ಲಿ ವಿಷಯದ ಆಯ್ಕೆಗೆ ಬೇಕಾದ ಸಮಗ್ರ ಭಾರತೀಯ ವಿದ್ಯೆ- ಕಲೆಗಳ ಸಾಮಾನ್ಯ ಜ್ಞಾನ ಪ್ರಾಪ್ತಿ, ವಿಶೇಷ ಕಲಿಕೆಗೆ ಬೇಕಾಗುವ ಭಾಷಾನೈಪುಣ್ಯ ಕರಗತ ಮಾಡಿಕೊಳ್ಳುವುದು ಹಾಗೂ ಸಮಗ್ರ ಭಾರತ- ಭಾರತೀಯ ಸಂಸ್ಕೃತಿಯ ಪರಿಚಯವನ್ನು ಈ ಎರಡು ವರ್ಷಗಳ ಕೋರ್ಸ್‍ನಲ್ಲಿ ಪಡೆಯಬಹುದಾಗಿದೆ.

ಪೂರ್ವಾಂಕುರ (8-16 ವಯಸ್ಸು), ಉತ್ತರಾಂಕುರ (16 ರಿಂದ 24 ವರ್ಷ) ಹಾಗೂ ಫಲಿತ ಹೀಗೆ ಮೂರು ವಿಭಾಗಗಳಲ್ಲಿ ಕಲಿಕೆಗೆ ಅವಕಾಶವಿದ್ದು, ಜಾತಿ, ಮತ, ಲಿಂಗ, ಭಾಷಾಭೇದವಿಲ್ಲದೇ ಹಿರಿಯ ನಾಗರಿಕರು ಕೂಡಾ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ ನಡೆಸುವ ದ್ವಾರಪರೀಕ್ಷೆಯೇ ಅರ್ಹತಾ ಮಾನದಂಡವಾಗಿರುತ್ತದೆ. ಕಲಿಕಾರ್ಥಿಗಳಿಗೆ ಸೂಕ್ತ ವಸತಿ ಮತ್ತು ಆಹಾರ ವ್ಯವಸ್ಥೆ ಇರುತ್ತದೆ.

ಗೋಕರ್ಣ ಸಮೀಪದ ಅಶೋಕೆಯಲ್ಲಿರುವ ವಿವಿವಿ ಕಾರ್ಯಾಲಯ, ಗೋಕರ್ಣ ಮಹಾಬಲೇಶ್ವರ ದೇವಾಲಯ, ಬೆಂಗಳೂರು ಗಿರಿನಗರದ ಶ್ರೀರಾಮಾಶ್ರಮ, ಹೊಸನಗರದ ರಾಮಚಂದ್ರಾಪುರ ಮಠ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಮಾಣಿಯಲ್ಲಿರುವ ಶ್ರೀರಾಮಚಂದ್ರಾಪುರ ಮಠದಲ್ಲಿ ಅರ್ಜಿ ನಮೂನೆಗಳು ಲಭ್ಯವಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬೇಕಾದ ವಿಳಾಸ: ವ್ಯವಸ್ಥಾಪಕರು, ವಿಷ್ಣುಗುಪ್ತ ವಿಶ್ವವಿದ್ಯಾಪೀಠ, ಅಶೋಕೆ, ಗೋಕರ್ಣ ಅಂಚೆ, ಕುಮಟಾ ತಾಲೂಕು, ಉತ್ತರ ಕನ್ನಡ ಜಿಲ್ಲೆ, ಕರ್ನಾಟಕ- 5581326. ದೂರವಾಣಿ: 9449595248, 9449595288.
ಆನ್‍ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು www.srisamsthana.org/vvvನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

21 minutes ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

32 minutes ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

8 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

9 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

18 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

19 hours ago