Advertisement
ಸುದ್ದಿಗಳು

ವಿಷ ರಹಿತ ಆಹಾರದ ಅಹವಾಲಿಗೆ ದೇಶ ಕಾಯುತ್ತಿದೆ – ಆ ಶ್ರೀ ಆನಂದ್

Share

ಪುತ್ತೂರು: ವಿಷ ರಹಿತ‌ ಆಹಾರಕ್ಕೆ ಇಂದು‌ ಬೇಡಿಕೆ ಹೆಚ್ಚಾಗಿದೆ. ವಿಷ ರಹಿತ ಊಟ ಮಾಡುವ ದಿನ‌ಕ್ಕಾಗಿ ದೇಶದ ಜನ ಕಾಯುತ್ತಿದ್ದಾರೆ. ಈ ಬೇಡಿಕೆ ಪೂರೈಕೆಗೆ ಕೃಷಿಕರು ಸಜ್ಜಾಗಬೇಕು ಎಂದು‌ ಸಾವಯವ ಕೃಷಿ ಮಿಶನ್ ಅಧ್ಯಕ್ಷ ಆ ಶ್ರೀ ಆನಂದ ಹೇಳಿದರು.

ಅವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ‌ ವೇದಿಕೆಯಲ್ಲಿ ನವಚೇತನ ಸ್ನೇಹಸಂಗಮ,‌ ಜೇಸಿಐ ಪುತ್ತೂರು ವತಿಯಿಂದ ನಡೆಯುವ 2 ದಿನಗಳ ಸಾವಯವ ಹಬ್ಬ ಉದ್ಘಾಟಿಸಿ ಮಾತನಾಡಿದರು. ಇಂದು ಕಾಯಿಲೆ ಹೊತ್ತ ಮನೆಗಳ ಸಂಖ್ಯೆ ಹೆಚ್ಚಾಗುವುದು ಏಕೆ ? ಕಾಯಿಲೆಗಳು ಬರುವುದೇಕೆ ?
ಊಟದ ಬಟ್ಟಲು ವಿಷವಾಗಲು ಕಾರಣ ವಿಷ ಸಿಂಪಡಣೆ ಕಾರಣವಾಗಿದೆ. ಇದರ‌ ಬದಲಾವಣೆಗೆ
ಸರಕಾರ, ಸಂಘಸಂಸ್ಥೆಗಳಿಂದಲೇ ಸಾಧ್ಯವಿಲ್ಲ,‌ ಕೃಷಿಕರಿಂದ ಮಾತ್ರಾ ಸಾಧ್ಯ ಎಂದರು.‌ಈ ಬಗ್ಗೆ
ಗಂಭೀರ ಯೋಚನೆ ಅಗತ್ಯ ಎಂದರು.

ಶಾಸಕ ಸಂಜೀವ ಮಠಂದೂರು ಮಾತನಾಡಿ ದೇಶ ಜನರ ಆರೋಗ್ಯ ಕಾಪಾಡುವಲ್ಲಿ ಕೃಷಿಕರ ಪಾತ್ರ ಬಹುಮುಖ್ಯವಾಗಿದೆ.‌ಸಾವಯವ ಕೃಷಿ ಹಾಗೂ ಸ್ವಾವಲಂಬನೆಯ ಹಾದಿಯಲ್ಲಿ ‌ಸಾಗಬೇಕಾಗಿದೆ ಎಂದರು.
ಈ ಸಂದರ್ಭ ನಾ.ಕಾರಂತ ಪೆರಾಜೆ‌ ಅವರ ಜೀವಧಾನ್ಯ ಕೃತಿ ಲೋಕಾರ್ಪಣೆ ಮಾಡಲಾಯಿತು.

ಇದೇ ವೇಳೆ ನವತೇಜ ಟ್ರಸ್ಟ್‌ ಗೆ ಚಾಲನೆ ನೀಡಲಾಯಿತು. ಭತ್ತದ ಕೃಷಿಕ ದಂಪತಿಗಳಾದ ಉಷಾ ಮೆಹಂದಳೆ ಮತ್ತು ಸೀತಾರಾಮ‌ ಮೆಹಂದಳೆ ಅವರನ್ನು‌ ಸನ್ಮಾನಿಸಲಾಯಿತು.

ಜೇಸಿಐ ವಲಯ ಸಂಯೋಜಕರಾದ ಬಾದ್ ಶಾ ಸಂಬಾರತೋಟ,‌ಕೃಷಿಕರಾದ ಉಷಾ ಮೆಹಂದಳೆ ಮಾತನಾಡಿದರು.

ನವಚೇತನ‌ ಸ್ನೇಹ ಸಂಗಮ ಅಧ್ಯಕ್ಷ‌ ಅನಂತ ಪ್ರಸಾದ್ ನೈತಡ್ಕ‌ ಟ್ರಸ್ಟ್‌ ಬಗ್ಗೆ ಮಾತನಾಡಿದರು.

ಸುದಾನ ಶಿಕ್ಷಣ ಸಂಸ್ಥೆ ಸಂಚಾಲಕ ವಿಜಯ ಹಾರ್ವಿನ್ ಸಭಾಧ್ಯಕ್ಷತೆ ವಹಿಸಿದ್ದರು.

ನವಚೇತನ‌ ಸ್ನೇಹ ಸಂಗಮ ಕಾರ್ಯದರ್ಶಿ ಸುಹಾಸ ಮರಿಕೆ ಸ್ವಾಗತಿಸಿದರು. ಕೃತಿಯ ಬಗ್ಗೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಮಾತನಾಡಿದರು. ‌ಪತ್ರಕರ್ತ ನಾ.ಕಾರಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿದರು.ಜೇಸಿಐ ಉಪಾಧ್ಯಕ್ಷ ನವೀನ್ ಕೊಯಿಲ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

43 seconds ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

4 minutes ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

9 minutes ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

12 minutes ago

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…

17 minutes ago

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

10 hours ago