ಪುತ್ತೂರು: ವಿಷ ರಹಿತ ಆಹಾರಕ್ಕೆ ಇಂದು ಬೇಡಿಕೆ ಹೆಚ್ಚಾಗಿದೆ. ವಿಷ ರಹಿತ ಊಟ ಮಾಡುವ ದಿನಕ್ಕಾಗಿ ದೇಶದ ಜನ ಕಾಯುತ್ತಿದ್ದಾರೆ. ಈ ಬೇಡಿಕೆ ಪೂರೈಕೆಗೆ ಕೃಷಿಕರು ಸಜ್ಜಾಗಬೇಕು ಎಂದು ಸಾವಯವ ಕೃಷಿ ಮಿಶನ್ ಅಧ್ಯಕ್ಷ ಆ ಶ್ರೀ ಆನಂದ ಹೇಳಿದರು.
ಅವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನವಚೇತನ ಸ್ನೇಹಸಂಗಮ, ಜೇಸಿಐ ಪುತ್ತೂರು ವತಿಯಿಂದ ನಡೆಯುವ 2 ದಿನಗಳ ಸಾವಯವ ಹಬ್ಬ ಉದ್ಘಾಟಿಸಿ ಮಾತನಾಡಿದರು. ಇಂದು ಕಾಯಿಲೆ ಹೊತ್ತ ಮನೆಗಳ ಸಂಖ್ಯೆ ಹೆಚ್ಚಾಗುವುದು ಏಕೆ ? ಕಾಯಿಲೆಗಳು ಬರುವುದೇಕೆ ?
ಊಟದ ಬಟ್ಟಲು ವಿಷವಾಗಲು ಕಾರಣ ವಿಷ ಸಿಂಪಡಣೆ ಕಾರಣವಾಗಿದೆ. ಇದರ ಬದಲಾವಣೆಗೆ
ಸರಕಾರ, ಸಂಘಸಂಸ್ಥೆಗಳಿಂದಲೇ ಸಾಧ್ಯವಿಲ್ಲ, ಕೃಷಿಕರಿಂದ ಮಾತ್ರಾ ಸಾಧ್ಯ ಎಂದರು.ಈ ಬಗ್ಗೆ
ಗಂಭೀರ ಯೋಚನೆ ಅಗತ್ಯ ಎಂದರು.
ಶಾಸಕ ಸಂಜೀವ ಮಠಂದೂರು ಮಾತನಾಡಿ ದೇಶ ಜನರ ಆರೋಗ್ಯ ಕಾಪಾಡುವಲ್ಲಿ ಕೃಷಿಕರ ಪಾತ್ರ ಬಹುಮುಖ್ಯವಾಗಿದೆ.ಸಾವಯವ ಕೃಷಿ ಹಾಗೂ ಸ್ವಾವಲಂಬನೆಯ ಹಾದಿಯಲ್ಲಿ ಸಾಗಬೇಕಾಗಿದೆ ಎಂದರು.
ಈ ಸಂದರ್ಭ ನಾ.ಕಾರಂತ ಪೆರಾಜೆ ಅವರ ಜೀವಧಾನ್ಯ ಕೃತಿ ಲೋಕಾರ್ಪಣೆ ಮಾಡಲಾಯಿತು.
ಇದೇ ವೇಳೆ ನವತೇಜ ಟ್ರಸ್ಟ್ ಗೆ ಚಾಲನೆ ನೀಡಲಾಯಿತು. ಭತ್ತದ ಕೃಷಿಕ ದಂಪತಿಗಳಾದ ಉಷಾ ಮೆಹಂದಳೆ ಮತ್ತು ಸೀತಾರಾಮ ಮೆಹಂದಳೆ ಅವರನ್ನು ಸನ್ಮಾನಿಸಲಾಯಿತು.
ಜೇಸಿಐ ವಲಯ ಸಂಯೋಜಕರಾದ ಬಾದ್ ಶಾ ಸಂಬಾರತೋಟ,ಕೃಷಿಕರಾದ ಉಷಾ ಮೆಹಂದಳೆ ಮಾತನಾಡಿದರು.
ನವಚೇತನ ಸ್ನೇಹ ಸಂಗಮ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಟ್ರಸ್ಟ್ ಬಗ್ಗೆ ಮಾತನಾಡಿದರು.
ಸುದಾನ ಶಿಕ್ಷಣ ಸಂಸ್ಥೆ ಸಂಚಾಲಕ ವಿಜಯ ಹಾರ್ವಿನ್ ಸಭಾಧ್ಯಕ್ಷತೆ ವಹಿಸಿದ್ದರು.
ನವಚೇತನ ಸ್ನೇಹ ಸಂಗಮ ಕಾರ್ಯದರ್ಶಿ ಸುಹಾಸ ಮರಿಕೆ ಸ್ವಾಗತಿಸಿದರು. ಕೃತಿಯ ಬಗ್ಗೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಮಾತನಾಡಿದರು. ಪತ್ರಕರ್ತ ನಾ.ಕಾರಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿದರು.ಜೇಸಿಐ ಉಪಾಧ್ಯಕ್ಷ ನವೀನ್ ಕೊಯಿಲ ವಂದಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…