ಪುತ್ತೂರು: ವಿಷ ರಹಿತ ಆಹಾರಕ್ಕೆ ಇಂದು ಬೇಡಿಕೆ ಹೆಚ್ಚಾಗಿದೆ. ವಿಷ ರಹಿತ ಊಟ ಮಾಡುವ ದಿನಕ್ಕಾಗಿ ದೇಶದ ಜನ ಕಾಯುತ್ತಿದ್ದಾರೆ. ಈ ಬೇಡಿಕೆ ಪೂರೈಕೆಗೆ ಕೃಷಿಕರು ಸಜ್ಜಾಗಬೇಕು ಎಂದು ಸಾವಯವ ಕೃಷಿ ಮಿಶನ್ ಅಧ್ಯಕ್ಷ ಆ ಶ್ರೀ ಆನಂದ ಹೇಳಿದರು.
ಅವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನವಚೇತನ ಸ್ನೇಹಸಂಗಮ, ಜೇಸಿಐ ಪುತ್ತೂರು ವತಿಯಿಂದ ನಡೆಯುವ 2 ದಿನಗಳ ಸಾವಯವ ಹಬ್ಬ ಉದ್ಘಾಟಿಸಿ ಮಾತನಾಡಿದರು. ಇಂದು ಕಾಯಿಲೆ ಹೊತ್ತ ಮನೆಗಳ ಸಂಖ್ಯೆ ಹೆಚ್ಚಾಗುವುದು ಏಕೆ ? ಕಾಯಿಲೆಗಳು ಬರುವುದೇಕೆ ?
ಊಟದ ಬಟ್ಟಲು ವಿಷವಾಗಲು ಕಾರಣ ವಿಷ ಸಿಂಪಡಣೆ ಕಾರಣವಾಗಿದೆ. ಇದರ ಬದಲಾವಣೆಗೆ
ಸರಕಾರ, ಸಂಘಸಂಸ್ಥೆಗಳಿಂದಲೇ ಸಾಧ್ಯವಿಲ್ಲ, ಕೃಷಿಕರಿಂದ ಮಾತ್ರಾ ಸಾಧ್ಯ ಎಂದರು.ಈ ಬಗ್ಗೆ
ಗಂಭೀರ ಯೋಚನೆ ಅಗತ್ಯ ಎಂದರು.
ಶಾಸಕ ಸಂಜೀವ ಮಠಂದೂರು ಮಾತನಾಡಿ ದೇಶ ಜನರ ಆರೋಗ್ಯ ಕಾಪಾಡುವಲ್ಲಿ ಕೃಷಿಕರ ಪಾತ್ರ ಬಹುಮುಖ್ಯವಾಗಿದೆ.ಸಾವಯವ ಕೃಷಿ ಹಾಗೂ ಸ್ವಾವಲಂಬನೆಯ ಹಾದಿಯಲ್ಲಿ ಸಾಗಬೇಕಾಗಿದೆ ಎಂದರು.
ಈ ಸಂದರ್ಭ ನಾ.ಕಾರಂತ ಪೆರಾಜೆ ಅವರ ಜೀವಧಾನ್ಯ ಕೃತಿ ಲೋಕಾರ್ಪಣೆ ಮಾಡಲಾಯಿತು.
ಇದೇ ವೇಳೆ ನವತೇಜ ಟ್ರಸ್ಟ್ ಗೆ ಚಾಲನೆ ನೀಡಲಾಯಿತು. ಭತ್ತದ ಕೃಷಿಕ ದಂಪತಿಗಳಾದ ಉಷಾ ಮೆಹಂದಳೆ ಮತ್ತು ಸೀತಾರಾಮ ಮೆಹಂದಳೆ ಅವರನ್ನು ಸನ್ಮಾನಿಸಲಾಯಿತು.
ಜೇಸಿಐ ವಲಯ ಸಂಯೋಜಕರಾದ ಬಾದ್ ಶಾ ಸಂಬಾರತೋಟ,ಕೃಷಿಕರಾದ ಉಷಾ ಮೆಹಂದಳೆ ಮಾತನಾಡಿದರು.
ನವಚೇತನ ಸ್ನೇಹ ಸಂಗಮ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಟ್ರಸ್ಟ್ ಬಗ್ಗೆ ಮಾತನಾಡಿದರು.
ಸುದಾನ ಶಿಕ್ಷಣ ಸಂಸ್ಥೆ ಸಂಚಾಲಕ ವಿಜಯ ಹಾರ್ವಿನ್ ಸಭಾಧ್ಯಕ್ಷತೆ ವಹಿಸಿದ್ದರು.
ನವಚೇತನ ಸ್ನೇಹ ಸಂಗಮ ಕಾರ್ಯದರ್ಶಿ ಸುಹಾಸ ಮರಿಕೆ ಸ್ವಾಗತಿಸಿದರು. ಕೃತಿಯ ಬಗ್ಗೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಮಾತನಾಡಿದರು. ಪತ್ರಕರ್ತ ನಾ.ಕಾರಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿದರು.ಜೇಸಿಐ ಉಪಾಧ್ಯಕ್ಷ ನವೀನ್ ಕೊಯಿಲ ವಂದಿಸಿದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…