Advertisement
ಕಲೆ-ಸಂಸ್ಕೃತಿ

ವಿ ಬಿ ಅರ್ತಿಕಜೆ ಅವರಿಗೆ ಬಾಳಿಲ ಪ್ರಶಸ್ತಿ ಪ್ರದಾನ

Share

ಪುತ್ತೂರು: ಕಾವು ಜನಮಂಗಲದಲ್ಲಿ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನ ವುಈಶ್ವರಮಂಗಲ ಪ್ರಾಂತ ಹವ್ಯಕ ಮಹಾಸಭಾದ ಸಹಕಾರದಲ್ಲಿ `ವಿಷು ವಿಶೇಷ ಸ್ಪರ್ಧೆಯ ಬಹುಮಾನ ವಿತರಣೆ ಮತ್ತು ಬಾಳಿಲ ಪರಮೇಶ್ವರ ಭಟ್ಟ ಸ್ಮಾರಕ ಪ್ರಶಸ್ತಿಯನ್ನು ಹಿರಿಯ ಸಾಹಿತಿ ವಿ.ಬಿ. ಅರ್ತಿಕಜೆಯವರಿಗೆ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಚಿಂತಕ ಪೂರ್ಣಾತ್ಮರಾಮ,  ದೇಹ ಮತ್ತು ಮನಸ್ಸಿನ ಸಮತೋಲನವು ಕರ್ಮಯೋಗಿಗಳಿಗೆ ಅಗತ್ಯ. ಮಲೆನಾಡ ಹಸಿರಿನ ಹಿಂದೆ ಹವ್ಯಕರ ದುಡಿಮೆಯಿದೆ, ಪರಿಸರ ಪ್ರೀತಿಯಿದೆ. ನೂಲಿಗೆ ಸೂಜಿಯ ನೇತೃತ್ವ ಬೇಕು. ಸೂಜಿ ತನ್ನ ಕೈಂಕರ್ಯವನ್ನು ಪೂರೈಸಿ ಮುಂದೆ ಸಾಗುವಂತೆ ನಾಯಕನಾದವನು ಮುಂದಿನ ಕೆಲಸ ಕಾರ್ಯವನ್ನು ಪೂರೈಸುವತ್ತ ಗಮನಹರಿಸಬೇಕು ಎಂದು.

ನಿವೃತ್ತ ಜಿಲ್ಲಾ ನ್ಯಾಯಮೂರ್ತಿ ಮನಮೋಹನ ಬನಾರಿ ಅಧ್ಯಕ್ಷತೆ ವಹಿಸಿದರು. ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯ ಸ್ಥಾಪಕ ಸಂಚಾಲಕ ಚಂದ್ರಶೇಖರ ದಾಮ್ಲೆ, ಈಶ್ವರಮಂಗಲ ಪ್ರಾಂತ ಹವ್ಯಕ ಮಹಾಸಭಾದ ಅಧ್ಯಕ್ಷ ಶಿವಪ್ರಸಾದ್ ಪಟ್ಟೆ ಉಪಸ್ಥಿತರಿದ್ದರು.

ಬಾಳಿಲ ಪರಮೇಶ್ವರ ಭಟ್ಟ ಸ್ಮಾರಕ ಪ್ರಶಸ್ತಿಯನ್ನು ಹಿರಿಯ ಸಾಹಿತಿ ವಿ.ಬಿ. ಅರ್ತಿಕಜೆಯವರಿಗೆ ಪ್ರದಾನ ಮಾಡಲಾಯಿತು. ಕುಮಾರಸ್ವಾಮಿ ತೆಕ್ಕುಂಜ ಬರೆದ ಲಲಿತ ಪ್ರಬಂಧಗಳ ಸಂಕಲನ `ಪಾರುಪತಿಯ ಪಾರುಪತ್ಯ’, ರಘುರಾಮಮುಳಿಯ ಅವರು ಭಾಮಿನಿ ಷಟ್ಪದಿಯಲ್ಲಿ ಬರೆದ `ಪೆರ್ಲಲ್ಲೊಂದುಪಿಕ್ಲಾಟ’ ಮತ್ತು ಶೀಲಾ ಲಕ್ಷ್ಮಿ ವರ್ಮುಡಿ ರಚಿಸಿದ`ಅಬ್ಬೇ! ಎನಗೆಅರುಂಧತಿಯಕಂಡಿದಿಲ್ಲೆ!!’ಹವ್ಯಕ ಕಾದಂಬರಿಯನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆಗೊಳಿಸಲಾಯಿತು.

ಪ್ರತಿಷ್ಠಾನದ ವತಿಯಿಂದ ನೀಡಲಾಗುವ`ವೇದ ವಿದ್ಯಾನಿಧಿ’ಯನ್ನು ಚೂಂತಾರು ದಿ| ಕೃಷ್ಣ ಭಟ್ ಪ್ರತಿಷ್ಠಾನ (ರಿ) ಇವರಿಗೆ ನೀಡಲಾಯಿತು. ಈ ಕಾರ್ಯಕ್ರಮವನ್ನು ಒಪ್ಪಣ್ಣ ಪ್ರತಿಷ್ಠಾನದ ವೇದ ವಿದ್ಯಾ ವಿಭಾಗದ ಸಂಚಾಲಕ ಗಣೇಶ ಮಾಡಾವು ನಿರ್ವಹಿಸಿದರು.

ಶಿಕ್ಷಣ ವಿಭಾಗದಲ್ಲಿ ಶ್ರೇಷ್ಠ ಸೇವೆ ಸಲ್ಲಿಸಿದ ಪೆರ್ನಾಜೆ ಕೆ. ಶಾಮಣ್ಣ, ಯಕ್ಷಗಾನ ಕಲಾವಿದ ರಾಮ ಜೋಯಿಸ ಬೆಳ್ಳಾರೆ, ಪಾಕಶಾಸ್ತ್ರ ಪರಿಣಿತರಾದ ಮರಿಮನೆ ಎಚ್.ನಾರಾಯಣ ಭಟ್ ಮಳಿ ,ದ್ವಿತೀಯ ಪಿಯುಸಿ ಯಲ್ಲಿ ಪ್ರಥಮ ಬಂದಿರುವ ಶ್ರೀಕೃಷ್ಣ ಶರ್ಮ ಕಡಪ್ಪು, ಸ್ವಸ್ತಿಕ್ ಮಾಡಾವು, ಸಾತ್ವಿಕಾ ಮಾಡಾವು, ಎಸ್ಸೆಸ್ಸೆಲ್ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಿಂಚನಲಕ್ಷ್ಮಿಬಂಗಾರಡ್ಕ ಇವರನ್ನು ಗೌರವಿಸಲಾಯಿತು.

ಒಪ್ಪಣ್ಣನೆರೆಕರೆ ಪ್ರತಿಷ್ಠಾನದ ಗೌರವಾಧ್ಯಕ್ಷ ಈಶ್ವರ ಭಟ್ಎಳ್ಯಡ್ಕ ಪ್ರಾಸ್ತಾವಿಕ ಭಾಷಣ ಮಾಡಿದರು. ಪ್ರತಿಷ್ಠಾನದ ಅಧ್ಯಕ್ಷ ಶ್ರೀಕೃಷ್ಣ ಶರ್ಮ ಸ್ವಾಗತಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ಮಹೇಶ ಎಳ್ಯಡ್ಕ ಧನ್ಯವಾದ ಸಮರ್ಪಿಸಿದರು. ಪ್ರತಿಷ್ಠಾನದ ಕೋಶಾಧಿಕಾರಿ ಸುಬ್ರಹ್ಮಣ್ಯ ಭಟ್ ಗಬ್ಬಲಡ್ಕ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮಕ್ಕೆ ಮುನ್ನ ಯಕ್ಷಗಾನಾಮೃತ ಕಾರ್ಯಕ್ರಮದಲ್ಲಿ ದುರ್ಗಾಪರಮೇಶ್ವರೀ ಕುಕ್ಕಿಲ ಮತ್ತು ಶ್ರೀಕೃಷ್ಣ ಭಟ್ ಸುಣ್ಣಂಗುಳಿ ಭಾಗವಹಿಸಿದರು. ಹಿಮ್ಮೇಳದಲ್ಲಿ ಶಿವಶಂಕರಭಟ್ ಅಂಬೆಮೂಲೆ ಮತ್ತು ವರ್ಷಿತ ಅಜೆಕ್ಕಾರು ಸಹಕರಿಸಿದರು. ಸಭಾ ಕಾರ್ಯಕ್ರಮದ ನಂತರ `ರಾಜಾದಿಲೀಪ’ ಯಕ್ಷಗಾನ ಬಯಲಾಟ ಜರಗಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

13 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago