ಸುಳ್ಯ: ದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅದಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕೂಡ ಕೈ ಜೋಡಿಸಬೇಕು. ಸುಳ್ಯದ ಸಂಘಟನೆ ಮತ್ತು ಕಾರ್ಯಕರ್ತರು ಪ್ಲಾಸ್ಟಿಕ್ ಮುಕ್ತ ಸುಳ್ಯವನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿ ಎಂದು ವಿ.ಹಿಂ.ಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಕರೆ ನೀಡಿದ್ದಾರೆ.
ಸುಳ್ಯ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.ನಾವು ಪ್ರಕೃತಿಯ ಆರಾಧಕರು, ಪ್ರಕೃತಿಯ ರಕ್ಷಕರು. ಆದರೆ ಇಂದು ನಾವು ಪ್ರಕೃತಿಯನ್ನು ನಾಶ ಮಾಡುತ್ತಿದ್ದೇವೆ. ಆದುದರಿಂದ ಪ್ರಕೃತಿಯೂ ಮುನಿಸಿಕೊಂಡಿದೆ. ಮಳೆ ಹಿಂದೆಯೂ ಬರುತ್ತಿತ್ತು. ಆದರೆ ಪ್ರಕೃತಿ ನಾಶದಿಂದ ಸಮತೋಲನ ತಪ್ಪಿದ ಕಾರಣ ಇಂದು ಮಳೆ ಬಂದರೆ ಪ್ರಳಯ, ಬೇಸಿಗೆಯಲ್ಲಿ ಬರ ಉಂಟಾಗುತಿದೆ. ಪ್ರಕೃತಿ ಉಳಿಯದಿದ್ದರೆ ಮಾನವ ಕುಲ ಉಳಿಯಲು ಸಾಧ್ಯವಿಲ್ಲ. ಆದುದರಿಂದ ಪ್ರಕೃತಿಯನ್ನು ಆರಾಧನೆ ಮಾಡಬೇಕು. ಗಿಡಗಳನ್ನು ಬೆಳೆಸಲು, ಜಲ ಸಂರಕ್ಷಣೆಯತ್ತ ನಾವು ಗಮನ ಹರಿಸಬೇಕಾಗಿದೆ ಎಂದು ಅವರು ಹೇಳಿದರು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…