ಸುಳ್ಯ: ದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅದಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕೂಡ ಕೈ ಜೋಡಿಸಬೇಕು. ಸುಳ್ಯದ ಸಂಘಟನೆ ಮತ್ತು ಕಾರ್ಯಕರ್ತರು ಪ್ಲಾಸ್ಟಿಕ್ ಮುಕ್ತ ಸುಳ್ಯವನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿ ಎಂದು ವಿ.ಹಿಂ.ಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಕರೆ ನೀಡಿದ್ದಾರೆ.
ಸುಳ್ಯ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.ನಾವು ಪ್ರಕೃತಿಯ ಆರಾಧಕರು, ಪ್ರಕೃತಿಯ ರಕ್ಷಕರು. ಆದರೆ ಇಂದು ನಾವು ಪ್ರಕೃತಿಯನ್ನು ನಾಶ ಮಾಡುತ್ತಿದ್ದೇವೆ. ಆದುದರಿಂದ ಪ್ರಕೃತಿಯೂ ಮುನಿಸಿಕೊಂಡಿದೆ. ಮಳೆ ಹಿಂದೆಯೂ ಬರುತ್ತಿತ್ತು. ಆದರೆ ಪ್ರಕೃತಿ ನಾಶದಿಂದ ಸಮತೋಲನ ತಪ್ಪಿದ ಕಾರಣ ಇಂದು ಮಳೆ ಬಂದರೆ ಪ್ರಳಯ, ಬೇಸಿಗೆಯಲ್ಲಿ ಬರ ಉಂಟಾಗುತಿದೆ. ಪ್ರಕೃತಿ ಉಳಿಯದಿದ್ದರೆ ಮಾನವ ಕುಲ ಉಳಿಯಲು ಸಾಧ್ಯವಿಲ್ಲ. ಆದುದರಿಂದ ಪ್ರಕೃತಿಯನ್ನು ಆರಾಧನೆ ಮಾಡಬೇಕು. ಗಿಡಗಳನ್ನು ಬೆಳೆಸಲು, ಜಲ ಸಂರಕ್ಷಣೆಯತ್ತ ನಾವು ಗಮನ ಹರಿಸಬೇಕಾಗಿದೆ ಎಂದು ಅವರು ಹೇಳಿದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…