ಮಡಿಕೇರಿ : ವೀರನಾಡು ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿಯ ನೂತನ ಖಾಸಗಿ ಬಸ್ ನಿಲ್ದಾಣದ ಬಳಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಗರಸಭಾ ಆಯುಕ್ತ ರಮೇಶ್ ಅವರು ಧ್ವಜಾರೋಹಣ ನೇರವೇರಿಸಿ ಮಾತನಾಡಿ ಕನ್ನಡ ಭಾಷೆ, ಸಂಸ್ಕೃತಿ, ನೆಲ, ಜಲದ ಬಗ್ಗೆ ಎಲ್ಲರಿಗೂ ಅಭಿಮಾನವಿರಬೇಕೆಂದರು. ವೇದಿಕೆ ಅಧ್ಯಕ್ಷ ಹರೀಶ್ ಜಿ. ಆಚಾರ್ಯ ಮಾತನಾಡಿ ಕರ್ನಾಟಕದ ಪರಂಪರೆಯನ್ನು ಉಳಿಸಿ ಬೆಳೆಸುವುದು ಎಲ್ಲರ ಹೊಣೆ ಎಂದರು.
ಅಲ್ಲಾರಂಡ ರಂಗಚಾವಡಿಯ ಸಂಚಾಲಕ ಅಲ್ಲಾರಂಡ ವಿಠಲ್ ನಂಜಪ್ಪ ಅವರು ಕನ್ನಡ ನಾಡು, ನುಡಿಯ ಬಗ್ಗೆ ಜಾಗೃತಿಯ ಮಾತುಗಳನ್ನಾಡಿದರು.
ವೇದಿಕೆಯ ನಗರಾಧ್ಯಕ್ಷ ಪ್ರದೀಪ್ ಕರ್ಕೆರ, ಪ್ರಮುಖರಾದ ಕೋಳಿಬೈಲು ಜಯರಾಂ, ನಗರಸಭೆಯ ಮಾಜಿ ಸದಸ್ಯ ಕೆ.ಟಿ.ಬೇಬಿ ಮ್ಯಾಥ್ಯು, ಮುಸ್ತಫ, ಗಣೇಶ್ ರೈ, ರಶ್ಮಿ, ವಾಸು, ನಾಗರಾಜು, ಉಮೇಶ್ ಗೌಡ, ಮೋಣು, ಉರೇರ ಮತ್ತಿತರರು ಹಾಜರಿದ್ದು ಸಿಹಿ ಹಂಚಿ ಸಂಭ್ರಮಿಸಿದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…