Advertisement
ಸುದ್ದಿಗಳು

ವೀರಸಾವರ್ಕರ್ ಬಗ್ಗೆ ಅವಹೇಳನ : ಕ್ರಮಕ್ಕೆ ಆಗ್ರಹ

Share

ಪುತ್ತೂರು : ಭೋಪಾಲದಲ್ಲಿ ಕಾಂಗ್ರೆಸ್ಸಿನ ಸೇವಾದಳದ ತರಬೇತಿ ಶಿಬಿರದಲ್ಲಿ ‘ವೀರ ಸಾವರಕರ-ಕಿತನೆ ‘ವೀರ’ ?’ (ವೀರ ಸಾವರಕರ ಎಷ್ಟು ವೀರರು?)  ಎಂಬ ಹೆಸರಿನಲ್ಲಿ ವಿತರಿಸಿದ್ದ ಪುಸ್ತಕದಲ್ಲಿ ಕೀಳುಮಟ್ಟದ ಹಾಗೂ ಕಟ್ಟುಕತೆ ಬರೆದು ಅವಹೇಳನ ಮಾಡಲಾಗಿದೆ. ಹೀಗಾಗಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪುತ್ತೂರು ಸಹಾಯಕ ಕಮೀಶನರ್ ಮೂಲಕ ಸರ್ಕಾರವನ್ನು  ಒತ್ತಾಯಿಸಲಾಯಿತು.

ಕಾಂಗ್ರೆಸ್‌ನವರು ಸ್ವಾತಂತ್ರ್ಯವೀರರನ್ನು ಅವಮಾನಿಸಲು ಎಷ್ಟು ಕೀಳುಮಟ್ಟಕ್ಕೆ ಹೋಗಬಹುದು, ಎಂಬುದು ಇದರಿಂದ ಗಮನಕ್ಕೆ ಬರುತ್ತದೆ. ಸ್ವಾ. ಸಾವರಕರರಷ್ಟೇ ಅಲ್ಲದೇ ಯಾವುದೇ ರಾಷ್ಟ್ರಪುರುಷರ ಹಾಗೂ ಕ್ರಾಂತಿಕಾರರ ಅವಮಾನವು ಯಾರಿಂದಲೂ ಆಗದಿರಲಿ, ಅದಕ್ಕಾಗಿ ಕೇಂದ್ರ ಸರ್ಕಾರವು ಇದರ ಬಗ್ಗೆ ಕೂಡಲೇ ಕಾನೂನನ್ನು ರೂಪಿಸುವ ಆವಶ್ಯಕತೆ ಇದೆ. ಕಾಂಗ್ರೆಸ್‌  ವಿತರಿಸಿದ ಪುಸ್ತಕದಿಂದ ದೇಶದಲ್ಲಿ ಕೋಮು ಹಾಗೂ ಜಾತಿಯ ಒತ್ತಡವನ್ನು ನಿರ್ಮಿಸಿ ಸಮಾಜದಲ್ಲಿ ಅಶಾಂತಿಯನ್ನು ನಿರ್ಮಿಸುವ ಸಂಚಿರುವುದು ಗಮನಕ್ಕೆ ಬರುತ್ತದೆ.  ಇದು ಸಂಪೂರ್ಣ ಕ್ರಾಂತಿಕಾರಿ ಚಳುವಳಿಯ ದ್ವೇಷವಾಗಿದ್ದು ಈ ಆಕ್ಷೇಪಾರ್ಹ ಪುಸ್ತಕವನ್ನು ಕೂಡಲೇ ನಿಷೇಧಿಸಬೇಕು ಮತ್ತು ಕಾನೂನುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ತಾಲೂಕಿನ ಸಹಾಯಕ ಕಮೀಷನರ್ ಗಳಿಗೆ ಮತ್ತು ಪುತ್ತೂರು ನಗರ ಠಾಣಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

6 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

24 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago