ಪುತ್ತೂರು : ಭೋಪಾಲದಲ್ಲಿ ಕಾಂಗ್ರೆಸ್ಸಿನ ಸೇವಾದಳದ ತರಬೇತಿ ಶಿಬಿರದಲ್ಲಿ ‘ವೀರ ಸಾವರಕರ-ಕಿತನೆ ‘ವೀರ’ ?’ (ವೀರ ಸಾವರಕರ ಎಷ್ಟು ವೀರರು?) ಎಂಬ ಹೆಸರಿನಲ್ಲಿ ವಿತರಿಸಿದ್ದ ಪುಸ್ತಕದಲ್ಲಿ ಕೀಳುಮಟ್ಟದ ಹಾಗೂ ಕಟ್ಟುಕತೆ ಬರೆದು ಅವಹೇಳನ ಮಾಡಲಾಗಿದೆ. ಹೀಗಾಗಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪುತ್ತೂರು ಸಹಾಯಕ ಕಮೀಶನರ್ ಮೂಲಕ ಸರ್ಕಾರವನ್ನು ಒತ್ತಾಯಿಸಲಾಯಿತು.
ಕಾಂಗ್ರೆಸ್ನವರು ಸ್ವಾತಂತ್ರ್ಯವೀರರನ್ನು ಅವಮಾನಿಸಲು ಎಷ್ಟು ಕೀಳುಮಟ್ಟಕ್ಕೆ ಹೋಗಬಹುದು, ಎಂಬುದು ಇದರಿಂದ ಗಮನಕ್ಕೆ ಬರುತ್ತದೆ. ಸ್ವಾ. ಸಾವರಕರರಷ್ಟೇ ಅಲ್ಲದೇ ಯಾವುದೇ ರಾಷ್ಟ್ರಪುರುಷರ ಹಾಗೂ ಕ್ರಾಂತಿಕಾರರ ಅವಮಾನವು ಯಾರಿಂದಲೂ ಆಗದಿರಲಿ, ಅದಕ್ಕಾಗಿ ಕೇಂದ್ರ ಸರ್ಕಾರವು ಇದರ ಬಗ್ಗೆ ಕೂಡಲೇ ಕಾನೂನನ್ನು ರೂಪಿಸುವ ಆವಶ್ಯಕತೆ ಇದೆ. ಕಾಂಗ್ರೆಸ್ ವಿತರಿಸಿದ ಪುಸ್ತಕದಿಂದ ದೇಶದಲ್ಲಿ ಕೋಮು ಹಾಗೂ ಜಾತಿಯ ಒತ್ತಡವನ್ನು ನಿರ್ಮಿಸಿ ಸಮಾಜದಲ್ಲಿ ಅಶಾಂತಿಯನ್ನು ನಿರ್ಮಿಸುವ ಸಂಚಿರುವುದು ಗಮನಕ್ಕೆ ಬರುತ್ತದೆ. ಇದು ಸಂಪೂರ್ಣ ಕ್ರಾಂತಿಕಾರಿ ಚಳುವಳಿಯ ದ್ವೇಷವಾಗಿದ್ದು ಈ ಆಕ್ಷೇಪಾರ್ಹ ಪುಸ್ತಕವನ್ನು ಕೂಡಲೇ ನಿಷೇಧಿಸಬೇಕು ಮತ್ತು ಕಾನೂನುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ತಾಲೂಕಿನ ಸಹಾಯಕ ಕಮೀಷನರ್ ಗಳಿಗೆ ಮತ್ತು ಪುತ್ತೂರು ನಗರ ಠಾಣಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…