Advertisement
ಸುದ್ದಿಗಳು

ವೀರಸಾವರ್ಕರ್ ಬಗ್ಗೆ ಅವಹೇಳನ : ಕ್ರಮಕ್ಕೆ ಆಗ್ರಹ

Share

ಪುತ್ತೂರು : ಭೋಪಾಲದಲ್ಲಿ ಕಾಂಗ್ರೆಸ್ಸಿನ ಸೇವಾದಳದ ತರಬೇತಿ ಶಿಬಿರದಲ್ಲಿ ‘ವೀರ ಸಾವರಕರ-ಕಿತನೆ ‘ವೀರ’ ?’ (ವೀರ ಸಾವರಕರ ಎಷ್ಟು ವೀರರು?)  ಎಂಬ ಹೆಸರಿನಲ್ಲಿ ವಿತರಿಸಿದ್ದ ಪುಸ್ತಕದಲ್ಲಿ ಕೀಳುಮಟ್ಟದ ಹಾಗೂ ಕಟ್ಟುಕತೆ ಬರೆದು ಅವಹೇಳನ ಮಾಡಲಾಗಿದೆ. ಹೀಗಾಗಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪುತ್ತೂರು ಸಹಾಯಕ ಕಮೀಶನರ್ ಮೂಲಕ ಸರ್ಕಾರವನ್ನು  ಒತ್ತಾಯಿಸಲಾಯಿತು.

Advertisement

ಕಾಂಗ್ರೆಸ್‌ನವರು ಸ್ವಾತಂತ್ರ್ಯವೀರರನ್ನು ಅವಮಾನಿಸಲು ಎಷ್ಟು ಕೀಳುಮಟ್ಟಕ್ಕೆ ಹೋಗಬಹುದು, ಎಂಬುದು ಇದರಿಂದ ಗಮನಕ್ಕೆ ಬರುತ್ತದೆ. ಸ್ವಾ. ಸಾವರಕರರಷ್ಟೇ ಅಲ್ಲದೇ ಯಾವುದೇ ರಾಷ್ಟ್ರಪುರುಷರ ಹಾಗೂ ಕ್ರಾಂತಿಕಾರರ ಅವಮಾನವು ಯಾರಿಂದಲೂ ಆಗದಿರಲಿ, ಅದಕ್ಕಾಗಿ ಕೇಂದ್ರ ಸರ್ಕಾರವು ಇದರ ಬಗ್ಗೆ ಕೂಡಲೇ ಕಾನೂನನ್ನು ರೂಪಿಸುವ ಆವಶ್ಯಕತೆ ಇದೆ. ಕಾಂಗ್ರೆಸ್‌  ವಿತರಿಸಿದ ಪುಸ್ತಕದಿಂದ ದೇಶದಲ್ಲಿ ಕೋಮು ಹಾಗೂ ಜಾತಿಯ ಒತ್ತಡವನ್ನು ನಿರ್ಮಿಸಿ ಸಮಾಜದಲ್ಲಿ ಅಶಾಂತಿಯನ್ನು ನಿರ್ಮಿಸುವ ಸಂಚಿರುವುದು ಗಮನಕ್ಕೆ ಬರುತ್ತದೆ.  ಇದು ಸಂಪೂರ್ಣ ಕ್ರಾಂತಿಕಾರಿ ಚಳುವಳಿಯ ದ್ವೇಷವಾಗಿದ್ದು ಈ ಆಕ್ಷೇಪಾರ್ಹ ಪುಸ್ತಕವನ್ನು ಕೂಡಲೇ ನಿಷೇಧಿಸಬೇಕು ಮತ್ತು ಕಾನೂನುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ತಾಲೂಕಿನ ಸಹಾಯಕ ಕಮೀಷನರ್ ಗಳಿಗೆ ಮತ್ತು ಪುತ್ತೂರು ನಗರ ಠಾಣಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

5 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

6 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

6 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

6 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago