Advertisement
ಸುದ್ದಿಗಳು

ವೀರಸಾವರ್ಕರ್ ಬಗ್ಗೆ ಅವಹೇಳನ : ಕ್ರಮಕ್ಕೆ ಆಗ್ರಹ

Share

ಪುತ್ತೂರು : ಭೋಪಾಲದಲ್ಲಿ ಕಾಂಗ್ರೆಸ್ಸಿನ ಸೇವಾದಳದ ತರಬೇತಿ ಶಿಬಿರದಲ್ಲಿ ‘ವೀರ ಸಾವರಕರ-ಕಿತನೆ ‘ವೀರ’ ?’ (ವೀರ ಸಾವರಕರ ಎಷ್ಟು ವೀರರು?)  ಎಂಬ ಹೆಸರಿನಲ್ಲಿ ವಿತರಿಸಿದ್ದ ಪುಸ್ತಕದಲ್ಲಿ ಕೀಳುಮಟ್ಟದ ಹಾಗೂ ಕಟ್ಟುಕತೆ ಬರೆದು ಅವಹೇಳನ ಮಾಡಲಾಗಿದೆ. ಹೀಗಾಗಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪುತ್ತೂರು ಸಹಾಯಕ ಕಮೀಶನರ್ ಮೂಲಕ ಸರ್ಕಾರವನ್ನು  ಒತ್ತಾಯಿಸಲಾಯಿತು.

ಕಾಂಗ್ರೆಸ್‌ನವರು ಸ್ವಾತಂತ್ರ್ಯವೀರರನ್ನು ಅವಮಾನಿಸಲು ಎಷ್ಟು ಕೀಳುಮಟ್ಟಕ್ಕೆ ಹೋಗಬಹುದು, ಎಂಬುದು ಇದರಿಂದ ಗಮನಕ್ಕೆ ಬರುತ್ತದೆ. ಸ್ವಾ. ಸಾವರಕರರಷ್ಟೇ ಅಲ್ಲದೇ ಯಾವುದೇ ರಾಷ್ಟ್ರಪುರುಷರ ಹಾಗೂ ಕ್ರಾಂತಿಕಾರರ ಅವಮಾನವು ಯಾರಿಂದಲೂ ಆಗದಿರಲಿ, ಅದಕ್ಕಾಗಿ ಕೇಂದ್ರ ಸರ್ಕಾರವು ಇದರ ಬಗ್ಗೆ ಕೂಡಲೇ ಕಾನೂನನ್ನು ರೂಪಿಸುವ ಆವಶ್ಯಕತೆ ಇದೆ. ಕಾಂಗ್ರೆಸ್‌  ವಿತರಿಸಿದ ಪುಸ್ತಕದಿಂದ ದೇಶದಲ್ಲಿ ಕೋಮು ಹಾಗೂ ಜಾತಿಯ ಒತ್ತಡವನ್ನು ನಿರ್ಮಿಸಿ ಸಮಾಜದಲ್ಲಿ ಅಶಾಂತಿಯನ್ನು ನಿರ್ಮಿಸುವ ಸಂಚಿರುವುದು ಗಮನಕ್ಕೆ ಬರುತ್ತದೆ.  ಇದು ಸಂಪೂರ್ಣ ಕ್ರಾಂತಿಕಾರಿ ಚಳುವಳಿಯ ದ್ವೇಷವಾಗಿದ್ದು ಈ ಆಕ್ಷೇಪಾರ್ಹ ಪುಸ್ತಕವನ್ನು ಕೂಡಲೇ ನಿಷೇಧಿಸಬೇಕು ಮತ್ತು ಕಾನೂನುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ತಾಲೂಕಿನ ಸಹಾಯಕ ಕಮೀಷನರ್ ಗಳಿಗೆ ಮತ್ತು ಪುತ್ತೂರು ನಗರ ಠಾಣಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 hour ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

4 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

5 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

6 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

18 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

21 hours ago