Advertisement
ಸುದ್ದಿಗಳು

ವೀರಸಾವರ್ಕರ್ ಬಗ್ಗೆ ಅವಹೇಳನ : ಕ್ರಮಕ್ಕೆ ಆಗ್ರಹ

Share

ಪುತ್ತೂರು : ಭೋಪಾಲದಲ್ಲಿ ಕಾಂಗ್ರೆಸ್ಸಿನ ಸೇವಾದಳದ ತರಬೇತಿ ಶಿಬಿರದಲ್ಲಿ ‘ವೀರ ಸಾವರಕರ-ಕಿತನೆ ‘ವೀರ’ ?’ (ವೀರ ಸಾವರಕರ ಎಷ್ಟು ವೀರರು?)  ಎಂಬ ಹೆಸರಿನಲ್ಲಿ ವಿತರಿಸಿದ್ದ ಪುಸ್ತಕದಲ್ಲಿ ಕೀಳುಮಟ್ಟದ ಹಾಗೂ ಕಟ್ಟುಕತೆ ಬರೆದು ಅವಹೇಳನ ಮಾಡಲಾಗಿದೆ. ಹೀಗಾಗಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪುತ್ತೂರು ಸಹಾಯಕ ಕಮೀಶನರ್ ಮೂಲಕ ಸರ್ಕಾರವನ್ನು  ಒತ್ತಾಯಿಸಲಾಯಿತು.

ಕಾಂಗ್ರೆಸ್‌ನವರು ಸ್ವಾತಂತ್ರ್ಯವೀರರನ್ನು ಅವಮಾನಿಸಲು ಎಷ್ಟು ಕೀಳುಮಟ್ಟಕ್ಕೆ ಹೋಗಬಹುದು, ಎಂಬುದು ಇದರಿಂದ ಗಮನಕ್ಕೆ ಬರುತ್ತದೆ. ಸ್ವಾ. ಸಾವರಕರರಷ್ಟೇ ಅಲ್ಲದೇ ಯಾವುದೇ ರಾಷ್ಟ್ರಪುರುಷರ ಹಾಗೂ ಕ್ರಾಂತಿಕಾರರ ಅವಮಾನವು ಯಾರಿಂದಲೂ ಆಗದಿರಲಿ, ಅದಕ್ಕಾಗಿ ಕೇಂದ್ರ ಸರ್ಕಾರವು ಇದರ ಬಗ್ಗೆ ಕೂಡಲೇ ಕಾನೂನನ್ನು ರೂಪಿಸುವ ಆವಶ್ಯಕತೆ ಇದೆ. ಕಾಂಗ್ರೆಸ್‌  ವಿತರಿಸಿದ ಪುಸ್ತಕದಿಂದ ದೇಶದಲ್ಲಿ ಕೋಮು ಹಾಗೂ ಜಾತಿಯ ಒತ್ತಡವನ್ನು ನಿರ್ಮಿಸಿ ಸಮಾಜದಲ್ಲಿ ಅಶಾಂತಿಯನ್ನು ನಿರ್ಮಿಸುವ ಸಂಚಿರುವುದು ಗಮನಕ್ಕೆ ಬರುತ್ತದೆ.  ಇದು ಸಂಪೂರ್ಣ ಕ್ರಾಂತಿಕಾರಿ ಚಳುವಳಿಯ ದ್ವೇಷವಾಗಿದ್ದು ಈ ಆಕ್ಷೇಪಾರ್ಹ ಪುಸ್ತಕವನ್ನು ಕೂಡಲೇ ನಿಷೇಧಿಸಬೇಕು ಮತ್ತು ಕಾನೂನುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ತಾಲೂಕಿನ ಸಹಾಯಕ ಕಮೀಷನರ್ ಗಳಿಗೆ ಮತ್ತು ಪುತ್ತೂರು ನಗರ ಠಾಣಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

8 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

8 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago