ಕಡಬ: ಕೊಂಬಾರು ನಿವಾಸಿ, ವೃದ್ಧ ರಾಮಣ್ಣ ಗೌಡರ ಮೇಲೆ ಕಡಬ ಪೇಟೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಲಾಠಿಯಿಂದ ಹಲ್ಲೆ ನಡೆಸಿರುವ ಆರೋಪಿ ಪೊಲೀಸ್ ಸಿಬಂದಿಯನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟಗಾರ ಉಪ್ಪಿನಂಗಡಿಯ ಪ್ರಶಾಂತ್ ಡಿ’ ಕೋಸ್ತ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.
ಮುಖ್ಯವಾಗಿ ಪೊಲೀಸರು ಯಾರ ಮೇಲೆಯೂ ದೈಹಿಕ ಹಲ್ಲೆ ನಡೆಸುವಂತಿಲ್ಲ. ಆದರೆ ಈ ಪ್ರಕರಣದಲ್ಲಿ ಮಾನಸಿಕವಾಗಿ ನೊಂದಿರುವ ವಯೋವೃದ್ಧ ರಾಮಣ್ಣ ಗೌಡರ ಮೇಲೆ ಜಾತ್ರೆಯ ವೇಳೆ ಸಾರ್ವಜನಿಕರು ಓಡಾಡುತ್ತಿರುವ ರಸ್ತೆಯಲ್ಲಿ ಆರೋಪಿ ಪೊಲೀಸ್ ಸಿಬಂದಿ ಪಂಪಾಪತಿ ಲಾಠಿಯಲ್ಲಿ ಹೊಡೆದು ತೀವ್ರ ತರದ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೇ ಹಲ್ಲೆಗೊಳಗಾಗಿ ಕುಸಿದು ಬಿದ್ದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸದೆ ರಸ್ತೆಯಲ್ಲಿಯೇ ಬಿಟ್ಟು ಹೋಗುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾರೆ. ಶಾಂತಿ ಕಾಪಾಡಬೇಕಾಗಿದ್ದ ಪೊಲೀಸರೇ ಈ ರೀತಿ ವರ್ತಿಸಿರುವುದರಿಂದಾಗಿ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಆದುದರಿಂದ ಪ್ರಕರಣದ ಆರೋಪಿ ಪೊಲೀಸ್ ಸಿಬ್ಬಂದಿ ಪಂಪಾಪತಿಯನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.
ಡಾ|ರವೀಂದ್ರನಾಥ ಶಾನುಭಾಗ್ ನೇತೃತ್ವದ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ವೇದಿಕೆಗೂ ಪ್ರಕರಣ ಬಗ್ಗೆ ದೂರು ನೀಡಲಾಗಿದೆ ಎಂದು ಪ್ರಶಾಂತ್ ಡಿ’ ಕೋಸ್ತ ಅವರು ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…