ಕಡಬ: ಕೊಂಬಾರು ನಿವಾಸಿ, ವೃದ್ಧ ರಾಮಣ್ಣ ಗೌಡರ ಮೇಲೆ ಕಡಬ ಪೇಟೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಲಾಠಿಯಿಂದ ಹಲ್ಲೆ ನಡೆಸಿರುವ ಆರೋಪಿ ಪೊಲೀಸ್ ಸಿಬಂದಿಯನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟಗಾರ ಉಪ್ಪಿನಂಗಡಿಯ ಪ್ರಶಾಂತ್ ಡಿ’ ಕೋಸ್ತ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.
ಮುಖ್ಯವಾಗಿ ಪೊಲೀಸರು ಯಾರ ಮೇಲೆಯೂ ದೈಹಿಕ ಹಲ್ಲೆ ನಡೆಸುವಂತಿಲ್ಲ. ಆದರೆ ಈ ಪ್ರಕರಣದಲ್ಲಿ ಮಾನಸಿಕವಾಗಿ ನೊಂದಿರುವ ವಯೋವೃದ್ಧ ರಾಮಣ್ಣ ಗೌಡರ ಮೇಲೆ ಜಾತ್ರೆಯ ವೇಳೆ ಸಾರ್ವಜನಿಕರು ಓಡಾಡುತ್ತಿರುವ ರಸ್ತೆಯಲ್ಲಿ ಆರೋಪಿ ಪೊಲೀಸ್ ಸಿಬಂದಿ ಪಂಪಾಪತಿ ಲಾಠಿಯಲ್ಲಿ ಹೊಡೆದು ತೀವ್ರ ತರದ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೇ ಹಲ್ಲೆಗೊಳಗಾಗಿ ಕುಸಿದು ಬಿದ್ದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸದೆ ರಸ್ತೆಯಲ್ಲಿಯೇ ಬಿಟ್ಟು ಹೋಗುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾರೆ. ಶಾಂತಿ ಕಾಪಾಡಬೇಕಾಗಿದ್ದ ಪೊಲೀಸರೇ ಈ ರೀತಿ ವರ್ತಿಸಿರುವುದರಿಂದಾಗಿ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಆದುದರಿಂದ ಪ್ರಕರಣದ ಆರೋಪಿ ಪೊಲೀಸ್ ಸಿಬ್ಬಂದಿ ಪಂಪಾಪತಿಯನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.
ಡಾ|ರವೀಂದ್ರನಾಥ ಶಾನುಭಾಗ್ ನೇತೃತ್ವದ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ವೇದಿಕೆಗೂ ಪ್ರಕರಣ ಬಗ್ಗೆ ದೂರು ನೀಡಲಾಗಿದೆ ಎಂದು ಪ್ರಶಾಂತ್ ಡಿ’ ಕೋಸ್ತ ಅವರು ತಿಳಿಸಿದ್ದಾರೆ.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…