ಕಡಬ: ಕೊಂಬಾರು ನಿವಾಸಿ, ವೃದ್ಧ ರಾಮಣ್ಣ ಗೌಡರ ಮೇಲೆ ಕಡಬ ಪೇಟೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಲಾಠಿಯಿಂದ ಹಲ್ಲೆ ನಡೆಸಿರುವ ಆರೋಪಿ ಪೊಲೀಸ್ ಸಿಬಂದಿಯನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟಗಾರ ಉಪ್ಪಿನಂಗಡಿಯ ಪ್ರಶಾಂತ್ ಡಿ’ ಕೋಸ್ತ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.
ಮುಖ್ಯವಾಗಿ ಪೊಲೀಸರು ಯಾರ ಮೇಲೆಯೂ ದೈಹಿಕ ಹಲ್ಲೆ ನಡೆಸುವಂತಿಲ್ಲ. ಆದರೆ ಈ ಪ್ರಕರಣದಲ್ಲಿ ಮಾನಸಿಕವಾಗಿ ನೊಂದಿರುವ ವಯೋವೃದ್ಧ ರಾಮಣ್ಣ ಗೌಡರ ಮೇಲೆ ಜಾತ್ರೆಯ ವೇಳೆ ಸಾರ್ವಜನಿಕರು ಓಡಾಡುತ್ತಿರುವ ರಸ್ತೆಯಲ್ಲಿ ಆರೋಪಿ ಪೊಲೀಸ್ ಸಿಬಂದಿ ಪಂಪಾಪತಿ ಲಾಠಿಯಲ್ಲಿ ಹೊಡೆದು ತೀವ್ರ ತರದ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೇ ಹಲ್ಲೆಗೊಳಗಾಗಿ ಕುಸಿದು ಬಿದ್ದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸದೆ ರಸ್ತೆಯಲ್ಲಿಯೇ ಬಿಟ್ಟು ಹೋಗುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾರೆ. ಶಾಂತಿ ಕಾಪಾಡಬೇಕಾಗಿದ್ದ ಪೊಲೀಸರೇ ಈ ರೀತಿ ವರ್ತಿಸಿರುವುದರಿಂದಾಗಿ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಆದುದರಿಂದ ಪ್ರಕರಣದ ಆರೋಪಿ ಪೊಲೀಸ್ ಸಿಬ್ಬಂದಿ ಪಂಪಾಪತಿಯನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.
ಡಾ|ರವೀಂದ್ರನಾಥ ಶಾನುಭಾಗ್ ನೇತೃತ್ವದ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ವೇದಿಕೆಗೂ ಪ್ರಕರಣ ಬಗ್ಗೆ ದೂರು ನೀಡಲಾಗಿದೆ ಎಂದು ಪ್ರಶಾಂತ್ ಡಿ’ ಕೋಸ್ತ ಅವರು ತಿಳಿಸಿದ್ದಾರೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…