ಕಡಬ: ಕೊಂಬಾರು ನಿವಾಸಿ, ವೃದ್ಧ ರಾಮಣ್ಣ ಗೌಡರ ಮೇಲೆ ಕಡಬ ಪೇಟೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಲಾಠಿಯಿಂದ ಹಲ್ಲೆ ನಡೆಸಿರುವ ಆರೋಪಿ ಪೊಲೀಸ್ ಸಿಬಂದಿಯನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟಗಾರ ಉಪ್ಪಿನಂಗಡಿಯ ಪ್ರಶಾಂತ್ ಡಿ’ ಕೋಸ್ತ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.
ಮುಖ್ಯವಾಗಿ ಪೊಲೀಸರು ಯಾರ ಮೇಲೆಯೂ ದೈಹಿಕ ಹಲ್ಲೆ ನಡೆಸುವಂತಿಲ್ಲ. ಆದರೆ ಈ ಪ್ರಕರಣದಲ್ಲಿ ಮಾನಸಿಕವಾಗಿ ನೊಂದಿರುವ ವಯೋವೃದ್ಧ ರಾಮಣ್ಣ ಗೌಡರ ಮೇಲೆ ಜಾತ್ರೆಯ ವೇಳೆ ಸಾರ್ವಜನಿಕರು ಓಡಾಡುತ್ತಿರುವ ರಸ್ತೆಯಲ್ಲಿ ಆರೋಪಿ ಪೊಲೀಸ್ ಸಿಬಂದಿ ಪಂಪಾಪತಿ ಲಾಠಿಯಲ್ಲಿ ಹೊಡೆದು ತೀವ್ರ ತರದ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೇ ಹಲ್ಲೆಗೊಳಗಾಗಿ ಕುಸಿದು ಬಿದ್ದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸದೆ ರಸ್ತೆಯಲ್ಲಿಯೇ ಬಿಟ್ಟು ಹೋಗುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾರೆ. ಶಾಂತಿ ಕಾಪಾಡಬೇಕಾಗಿದ್ದ ಪೊಲೀಸರೇ ಈ ರೀತಿ ವರ್ತಿಸಿರುವುದರಿಂದಾಗಿ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಆದುದರಿಂದ ಪ್ರಕರಣದ ಆರೋಪಿ ಪೊಲೀಸ್ ಸಿಬ್ಬಂದಿ ಪಂಪಾಪತಿಯನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.
ಡಾ|ರವೀಂದ್ರನಾಥ ಶಾನುಭಾಗ್ ನೇತೃತ್ವದ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ವೇದಿಕೆಗೂ ಪ್ರಕರಣ ಬಗ್ಗೆ ದೂರು ನೀಡಲಾಗಿದೆ ಎಂದು ಪ್ರಶಾಂತ್ ಡಿ’ ಕೋಸ್ತ ಅವರು ತಿಳಿಸಿದ್ದಾರೆ.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…