Advertisement
ಸುದ್ದಿಗಳು

ವೆಂಕಟ್ರಮಣ ಸೊಸೈಟಿ: ಶೇ.18 ಡಿವಿಡೆಂಡ್ ಘೋಷಣೆ

Share

ಸುಳ್ಯ: ಒಂದು ಕೋಟಿ ರೂ. ನಿವ್ವಳ ಲಾಭ ಪಡೆದಿರುವ ಸುಳ್ಯದ ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಸದಸ್ಯರಿಗೆ ಶೆ.18 ಡಿವಿಡೆಂಟ್ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಕೆ. ಸಿ. ನಾರಾಯಣ ಗೌಡ ತಿಳಿಸಿದ್ದಾರೆ. ವಾರ್ಷಿಕ ಮಹಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಾರ್ಷಿಕ 288 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿದೆ.

ಮಾ.31ರ ವೇಳೆಗೆ 10,302 ಸದಸ್ಯರಿದ್ದು, ಇವರಿಂದ ರೂ. 2,46,95,050 ಪಾಲುಬಂಡವಾಳ ಸಂಗ್ರಹಿಸಿರುತ್ತೇವೆ. 65.05 ಕೋಟಿ ರಷ್ಟು ಠೇವಣಿಯನ್ನು ಸಂಗ್ರಹಿಸಿರುತ್ತೇವೆ. ಈ ಸಹಕಾರಿ ವರ್ಷದಲ್ಲಿ ಒಟ್ಟು ರೂ. 52.70 ಕೋಟಿ ಸಾಲವನ್ನು ವಿತರಿಸಿರುತ್ತೇವೆ.
ಸಂಘದಲ್ಲಿ ಒಟ್ಟು ರೂ. 4,12,38,499.40 ರಷ್ಟು ವಿವಿಧ ನಿಧಿಗಳಿದ್ದು, ಸಂಘದ ದುಡಿಯುವ ಬಂಡವಾಳವು ರೂ. 72,06,69,058.93 ರಷ್ಟಾಗಿರುತ್ತದೆ. 2018-19 ನೇ ಸಾಲಿನಲ್ಲಿ ಸಂಘದ ಉತ್ತಮ ಸಾಧನೆಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಸಾಧನಾಶ್ರೀ ಪ್ರಶಸ್ತಿಯನ್ನು ನೀಡಿ ಸಂಘವನ್ನು ಗೌರವಿಸಿದೆ. ಬೆಳ್ತಂಗಡಿಯಲ್ಲಿ ಪ್ರಕೃತಿ ವಿಕೋಪದಿಂಂದ ಹಾನಿಗೊಳಗಾದ ನೆರೆ ಸಂತ್ರಸ್ತರಿಗೆ ಸಂಘದ ವತಿಯಿಂದ ರೂ. 2 ಲಕ್ಷ ಪರಿಹಾರವನ್ನು ವಿತರಿಸಲು ತೀರ್ಮಾನಿಸಿರುತ್ತೇವೆ.

ಸಂಘವು ಪ್ರಸ್ತುತ 11ಶಾಖೆಗಳನ್ನು ಹೊಂದಿದೆ. ಮುಂದೆ ನಿಂತಿಕಲ್ಲು ಮತ್ತು ನೆಲ್ಯಾಡಿಯಲ್ಲು ಶಾಖೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ರೂ. 100 ಕೋಟಿ ಠೇವಣಿ ಸಂಗ್ರಹಿಸಿ ರೂ. 80 ಕೋಟಿಯಷ್ಟು ಸಾಲವನ್ನು ವಿತರಿಸಲು ಸಂಘದ ಆಡಳಿತ ಮಂಡಳಿಯು ಕಾರ್ಯಯೋಜನೆಯನ್ನು ಹಮ್ಮಿಕೊಂಡಿದೆ. ಸಂಘದ ೩ನೇ ಮಹಡಿಯಲ್ಲಿ ವಿಶಾಲವಾದ ಸಭಾಂಗಣವನ್ನು ನಿರ್ಮಿಸಲು ಕೂಡಾ ಚಿಂತನೆಯನ್ನು ನಡೆಸಿರುತ್ತೇವೆ ಎಂದರು.
ಉಪಾಧ್ಯಕ್ಷ ಪಿ.ಎಸ್.ಗಂಗಾಧರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್, ನಿರ್ದೇಶಕರುಗಳಾದ ಪಿ.ಸಿ.ಜಯರಾಮ್, ಜಾಕೆ ಸದಾನಂದ, ನಿತ್ಯಾನಂದ ಮುಂಡೋಡಿ, ಎ.ವಿ.ತೀರ್ಥರಾಮ, ಚಂದ್ರಾ ಕೋಲ್ಚಾರ್, ಕೆ.ಸಿ.ಸದಾನಂದ, ಲಕ್ಷ್ಮೀನಾರಾಯಣ ನಡ್ಕ, ದಾಮೋದರ ಎನ್.ಎಸ್., ದಿನೇಶ್ ಮಡಪ್ಪಾಡಿ, ಲತಾ ಎಸ್.ಮಾವಾಜಿ, ಜಯಲಲಿತಾ ಕೆ.ಎಸ್. ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

18 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

19 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

22 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago