ಸುದ್ದಿಗಳು

ವೆಂಕಟ್ರಮಣ ಸೊಸೈಟಿ: ಶೇ.18 ಡಿವಿಡೆಂಡ್ ಘೋಷಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಒಂದು ಕೋಟಿ ರೂ. ನಿವ್ವಳ ಲಾಭ ಪಡೆದಿರುವ ಸುಳ್ಯದ ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಸದಸ್ಯರಿಗೆ ಶೆ.18 ಡಿವಿಡೆಂಟ್ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಕೆ. ಸಿ. ನಾರಾಯಣ ಗೌಡ ತಿಳಿಸಿದ್ದಾರೆ. ವಾರ್ಷಿಕ ಮಹಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಾರ್ಷಿಕ 288 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿದೆ.

Advertisement
Advertisement

ಮಾ.31ರ ವೇಳೆಗೆ 10,302 ಸದಸ್ಯರಿದ್ದು, ಇವರಿಂದ ರೂ. 2,46,95,050 ಪಾಲುಬಂಡವಾಳ ಸಂಗ್ರಹಿಸಿರುತ್ತೇವೆ. 65.05 ಕೋಟಿ ರಷ್ಟು ಠೇವಣಿಯನ್ನು ಸಂಗ್ರಹಿಸಿರುತ್ತೇವೆ. ಈ ಸಹಕಾರಿ ವರ್ಷದಲ್ಲಿ ಒಟ್ಟು ರೂ. 52.70 ಕೋಟಿ ಸಾಲವನ್ನು ವಿತರಿಸಿರುತ್ತೇವೆ.
ಸಂಘದಲ್ಲಿ ಒಟ್ಟು ರೂ. 4,12,38,499.40 ರಷ್ಟು ವಿವಿಧ ನಿಧಿಗಳಿದ್ದು, ಸಂಘದ ದುಡಿಯುವ ಬಂಡವಾಳವು ರೂ. 72,06,69,058.93 ರಷ್ಟಾಗಿರುತ್ತದೆ. 2018-19 ನೇ ಸಾಲಿನಲ್ಲಿ ಸಂಘದ ಉತ್ತಮ ಸಾಧನೆಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಸಾಧನಾಶ್ರೀ ಪ್ರಶಸ್ತಿಯನ್ನು ನೀಡಿ ಸಂಘವನ್ನು ಗೌರವಿಸಿದೆ. ಬೆಳ್ತಂಗಡಿಯಲ್ಲಿ ಪ್ರಕೃತಿ ವಿಕೋಪದಿಂಂದ ಹಾನಿಗೊಳಗಾದ ನೆರೆ ಸಂತ್ರಸ್ತರಿಗೆ ಸಂಘದ ವತಿಯಿಂದ ರೂ. 2 ಲಕ್ಷ ಪರಿಹಾರವನ್ನು ವಿತರಿಸಲು ತೀರ್ಮಾನಿಸಿರುತ್ತೇವೆ.

ಸಂಘವು ಪ್ರಸ್ತುತ 11ಶಾಖೆಗಳನ್ನು ಹೊಂದಿದೆ. ಮುಂದೆ ನಿಂತಿಕಲ್ಲು ಮತ್ತು ನೆಲ್ಯಾಡಿಯಲ್ಲು ಶಾಖೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ರೂ. 100 ಕೋಟಿ ಠೇವಣಿ ಸಂಗ್ರಹಿಸಿ ರೂ. 80 ಕೋಟಿಯಷ್ಟು ಸಾಲವನ್ನು ವಿತರಿಸಲು ಸಂಘದ ಆಡಳಿತ ಮಂಡಳಿಯು ಕಾರ್ಯಯೋಜನೆಯನ್ನು ಹಮ್ಮಿಕೊಂಡಿದೆ. ಸಂಘದ ೩ನೇ ಮಹಡಿಯಲ್ಲಿ ವಿಶಾಲವಾದ ಸಭಾಂಗಣವನ್ನು ನಿರ್ಮಿಸಲು ಕೂಡಾ ಚಿಂತನೆಯನ್ನು ನಡೆಸಿರುತ್ತೇವೆ ಎಂದರು.
ಉಪಾಧ್ಯಕ್ಷ ಪಿ.ಎಸ್.ಗಂಗಾಧರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್, ನಿರ್ದೇಶಕರುಗಳಾದ ಪಿ.ಸಿ.ಜಯರಾಮ್, ಜಾಕೆ ಸದಾನಂದ, ನಿತ್ಯಾನಂದ ಮುಂಡೋಡಿ, ಎ.ವಿ.ತೀರ್ಥರಾಮ, ಚಂದ್ರಾ ಕೋಲ್ಚಾರ್, ಕೆ.ಸಿ.ಸದಾನಂದ, ಲಕ್ಷ್ಮೀನಾರಾಯಣ ನಡ್ಕ, ದಾಮೋದರ ಎನ್.ಎಸ್., ದಿನೇಶ್ ಮಡಪ್ಪಾಡಿ, ಲತಾ ಎಸ್.ಮಾವಾಜಿ, ಜಯಲಲಿತಾ ಕೆ.ಎಸ್. ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

5 hours ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

13 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

19 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

2 days ago