Advertisement
ಸುದ್ದಿಗಳು

ವೆಂಕಟ್ರಮಣ ಸೊಸೈಟಿ: ಶೇ.18 ಡಿವಿಡೆಂಡ್ ಘೋಷಣೆ

Share

ಸುಳ್ಯ: ಒಂದು ಕೋಟಿ ರೂ. ನಿವ್ವಳ ಲಾಭ ಪಡೆದಿರುವ ಸುಳ್ಯದ ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಸದಸ್ಯರಿಗೆ ಶೆ.18 ಡಿವಿಡೆಂಟ್ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಕೆ. ಸಿ. ನಾರಾಯಣ ಗೌಡ ತಿಳಿಸಿದ್ದಾರೆ. ವಾರ್ಷಿಕ ಮಹಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಾರ್ಷಿಕ 288 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿದೆ.

ಮಾ.31ರ ವೇಳೆಗೆ 10,302 ಸದಸ್ಯರಿದ್ದು, ಇವರಿಂದ ರೂ. 2,46,95,050 ಪಾಲುಬಂಡವಾಳ ಸಂಗ್ರಹಿಸಿರುತ್ತೇವೆ. 65.05 ಕೋಟಿ ರಷ್ಟು ಠೇವಣಿಯನ್ನು ಸಂಗ್ರಹಿಸಿರುತ್ತೇವೆ. ಈ ಸಹಕಾರಿ ವರ್ಷದಲ್ಲಿ ಒಟ್ಟು ರೂ. 52.70 ಕೋಟಿ ಸಾಲವನ್ನು ವಿತರಿಸಿರುತ್ತೇವೆ.
ಸಂಘದಲ್ಲಿ ಒಟ್ಟು ರೂ. 4,12,38,499.40 ರಷ್ಟು ವಿವಿಧ ನಿಧಿಗಳಿದ್ದು, ಸಂಘದ ದುಡಿಯುವ ಬಂಡವಾಳವು ರೂ. 72,06,69,058.93 ರಷ್ಟಾಗಿರುತ್ತದೆ. 2018-19 ನೇ ಸಾಲಿನಲ್ಲಿ ಸಂಘದ ಉತ್ತಮ ಸಾಧನೆಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಸಾಧನಾಶ್ರೀ ಪ್ರಶಸ್ತಿಯನ್ನು ನೀಡಿ ಸಂಘವನ್ನು ಗೌರವಿಸಿದೆ. ಬೆಳ್ತಂಗಡಿಯಲ್ಲಿ ಪ್ರಕೃತಿ ವಿಕೋಪದಿಂಂದ ಹಾನಿಗೊಳಗಾದ ನೆರೆ ಸಂತ್ರಸ್ತರಿಗೆ ಸಂಘದ ವತಿಯಿಂದ ರೂ. 2 ಲಕ್ಷ ಪರಿಹಾರವನ್ನು ವಿತರಿಸಲು ತೀರ್ಮಾನಿಸಿರುತ್ತೇವೆ.

ಸಂಘವು ಪ್ರಸ್ತುತ 11ಶಾಖೆಗಳನ್ನು ಹೊಂದಿದೆ. ಮುಂದೆ ನಿಂತಿಕಲ್ಲು ಮತ್ತು ನೆಲ್ಯಾಡಿಯಲ್ಲು ಶಾಖೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ರೂ. 100 ಕೋಟಿ ಠೇವಣಿ ಸಂಗ್ರಹಿಸಿ ರೂ. 80 ಕೋಟಿಯಷ್ಟು ಸಾಲವನ್ನು ವಿತರಿಸಲು ಸಂಘದ ಆಡಳಿತ ಮಂಡಳಿಯು ಕಾರ್ಯಯೋಜನೆಯನ್ನು ಹಮ್ಮಿಕೊಂಡಿದೆ. ಸಂಘದ ೩ನೇ ಮಹಡಿಯಲ್ಲಿ ವಿಶಾಲವಾದ ಸಭಾಂಗಣವನ್ನು ನಿರ್ಮಿಸಲು ಕೂಡಾ ಚಿಂತನೆಯನ್ನು ನಡೆಸಿರುತ್ತೇವೆ ಎಂದರು.
ಉಪಾಧ್ಯಕ್ಷ ಪಿ.ಎಸ್.ಗಂಗಾಧರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್, ನಿರ್ದೇಶಕರುಗಳಾದ ಪಿ.ಸಿ.ಜಯರಾಮ್, ಜಾಕೆ ಸದಾನಂದ, ನಿತ್ಯಾನಂದ ಮುಂಡೋಡಿ, ಎ.ವಿ.ತೀರ್ಥರಾಮ, ಚಂದ್ರಾ ಕೋಲ್ಚಾರ್, ಕೆ.ಸಿ.ಸದಾನಂದ, ಲಕ್ಷ್ಮೀನಾರಾಯಣ ನಡ್ಕ, ದಾಮೋದರ ಎನ್.ಎಸ್., ದಿನೇಶ್ ಮಡಪ್ಪಾಡಿ, ಲತಾ ಎಸ್.ಮಾವಾಜಿ, ಜಯಲಲಿತಾ ಕೆ.ಎಸ್. ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

5 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

6 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

7 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

7 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

7 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

8 hours ago