ಮಂಗಳೂರು: ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಆತಂಕ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ವೆನ್ಲಾಕೆ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.
ದೆಹಲಿಯಿಂದ ಆಗಮಿಸಿದ ನಳಿನ್ ಕುಮಾರ್ ಕಟೀಲು ಅವರು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆಯ ಅಧೀಕ್ಷಕಿ ಸಹಿತ ವಿವಿಧ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು.
ಸಂಸದರಿಗೆ ಸೂಕ್ತ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಕೊರೊನಾ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದರು. ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕರೋನಾ ಪಾಸಿಟಿವ್ ಪತ್ತೆಯಾಗಿದ್ದು ಮತ್ತು ಇನ್ನೊಬ್ಬ ಕೊರೊನಾ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಸುಮಾರು 200 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆ ಇದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಿದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…