ಮಂಗಳೂರು: ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಆತಂಕ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ವೆನ್ಲಾಕೆ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.
ದೆಹಲಿಯಿಂದ ಆಗಮಿಸಿದ ನಳಿನ್ ಕುಮಾರ್ ಕಟೀಲು ಅವರು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆಯ ಅಧೀಕ್ಷಕಿ ಸಹಿತ ವಿವಿಧ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು.
ಸಂಸದರಿಗೆ ಸೂಕ್ತ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಕೊರೊನಾ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದರು. ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕರೋನಾ ಪಾಸಿಟಿವ್ ಪತ್ತೆಯಾಗಿದ್ದು ಮತ್ತು ಇನ್ನೊಬ್ಬ ಕೊರೊನಾ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಸುಮಾರು 200 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆ ಇದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…