ವೆಸ್ಟ್​ಇಂಡೀಸ್​ ವಿರುದ್ಧ ಭಾರತಕ್ಕೆ 125 ರನ್​ಗಳ ಭರ್ಜರಿ ಗೆಲುವು

June 28, 2019
9:15 AM

ಮ್ಯಾಂಚೆಸ್ಟರ್​: ವಿಶ್ವಕಪ್​ನಲ್ಲಿ ಸ್ಥಿರ ನಿರ್ವಹಣೆಯೊಂದಿಗೆ ಅಜೇಯವಾಗಿ ಉಳಿದಿರುವ ಟೀಂ ಇಂಡಿಯಾ ತನ್ನ ಜಯದ ಓಟವನ್ನು ಮುಂದುವರಿಸಿದ್ದು, ವೆಸ್ಟ್​ ಇಂಡೀಸ್​ ವಿರುದ್ಧ 125 ರನ್​ಗಳ ಭರ್ಜರಿ ಜಯ ದಾಖಲಿಸಿದೆ.

Advertisement
Advertisement

ಭಾರತ ನೀಡಿದ 269 ರನ್​ ಗುರಿ ಬೆನ್ನತ್ತಿದ ವೆಸ್ಟ್​ ಇಂಡೀಸ್​ ತಂಡ 34.2 ಓವರ್​ಗಳಲ್ಲಿ 143 ರನ್​ಗಳಿಗೆ ಆಲೌಟಾಯಿತು. ಈ ಮೂಲಕ ಸತತ 3 ನೇ ಸೋಲು ಕಂಡಿತು.

Advertisement

ಭಾರತ ನೀಡಿದ್ದ ಗುರಿಯನ್ನು ಬೆನ್ನತ್ತಿದ ವೆಸ್ಟ್​ ಇಂಡೀಸ್​ ತಂಡ 16 ರನ್​ ಗಳಿಸುವಷ್ಟರಲ್ಲಿ ಕ್ರಿಸ್​ ಗೇಲ್​ (6) ಮತ್ತು ಶಾಯ್​ ಹೋಪ್​ (5) ವಿಕೆಟ್​ ಕಳೆದುಕೊಂಡಿತು. ನಂತರ ಜತೆಯಾದ ಆಂಬ್ರಿಸ್​ (31) ಮತ್ತು ಪೋರನ್​ (28) ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಲು ಯತ್ನಿಸಿದರು. ಆದರೆ ಇವರಿಬ್ಬರು ಔಟಾದ ನಂತರ ವೆಸ್ಟ್​ ಇಂಡೀಸ್​ನ ಮಧ್ಯಮ ಕ್ರಮಾಂಕ ಮತ್ತು ಕೆಳ ಕ್ರಮಾಂಕದ ಆಟಗಾರರು ಬೇಗ ಔಟಾಗುವ ಮೂಲಕ ವೆಸ್ಟ್​ ಇಂಡೀಸ್​ ತಂಡ ಹೀನಾಯ ಸೋಲನುಭವಿಸಿತು.

ಭಾರತದ ಪರ ಮೊಹಮದ್​ ಶಮಿ 4, ಬುಮ್ರಾ, ಚಾಹಲ್​ ತಲಾ 2 ವಿಕೆಟ್​ ಮತ್ತು ಪಾಂಡ್ಯ, ಕುಲದೀಪ್​ ಯಾದವ್​ ತಲಾ 1 ವಿಕೆಟ್​ ಪಡೆದರು.

Advertisement

ಇದಕ್ಕೂ ಮುನ್ನ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ ಭಾರತ ತಂಡ ವಿರಾಟ್​ ಕೊಹ್ಲಿ (72) ಮತ್ತು ಎಂ.ಎಸ್​. ಧೋನಿ (56*) ಗಳಿಸಿದ ಅರ್ಧಶತಕಗಳ ನೆರವಿನಿಂದ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್​ ನಷ್ಟಕ್ಕೆ 268 ರನ್​ ಗಳಿಸಿತು.

ಟೀಂ ಇಂಡಿಯಾ ಪರ ಆರಂಭಿಕ ಆಟಗಾರ ರೋಹಿತ್​ ಶರ್ಮ (18) ರನ್​ ಗಳಿಸಿ ಔಟಾದರು. ನಂತರ ಕೆ.ಎಲ್​. ರಾಹುಲ್​ ಜತೆಯಾದ ಕೊಹ್ಲಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಲು ಯತ್ನಿಸಿದರು. ಆದರೆ ಅರ್ಧಶತಕ ವಂಚಿತರಾದ ರಾಹುಲ್​ 48 ರನ್​ ಗಳಿಸಿ ಔಟಾದರು. ರಾಹುಲ್​ ಔಟಾದ ಬಳಿಕ ಬಂದ ವಿಜಯ್​ ಶಂಕರ್​ (14) ಮತ್ತು ಕೇದಾರ್​ ಜಾಧವ್​ (7) ರನ್​ ಗಳಿಸಿ ಔಟಾದರು. ಈ ಹಂತದಲ್ಲಿ ಜತೆಯಾದ ಧೋನಿ ಮತ್ತು ಹಾರ್ದಿಕ್​ ಪಾಂಡ್ಯ (46) ಉತ್ತಮ ಜತೆಯಾಟವಾಡಿ ತಂಡದ ಮೊತ್ತವನ್ನು 250ರ ಗಡಿ ದಾಟಿಸಿದರು.

Advertisement

ವೆಸ್ಟ್​ ಇಂಡೀಸ್​ ಪರ ಕೇಮರ್​ ರೋಚ್​ 3, ಕಾಟ್ರೆಲ್ ಮತ್ತು ಹೋಲ್ಡರ್​ ತಲಾ​ 2 ವಿಕೆಟ್​ ಪಡೆದರು.  ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!
May 1, 2024
4:10 PM
by: The Rural Mirror ಸುದ್ದಿಜಾಲ
Rain Alert | ದೇಶದಲ್ಲಿ ಹೆಚ್ಚುತ್ತಿದೆ ಹವಾಮಾನದಲ್ಲಿ ವೈಪರೀತ್ಯ | ಚಂಡಮಾರುತ, ಬಲವಾದ ಗಾಳಿಯೊಂದಿಗೆ ಮಳೆ ಸಾಧ್ಯತೆ | ದಕ್ಷಿಣದಲ್ಲಿ ಬಿಸಿ ಶಾಖ ಮುಂದುವರಿಕೆ |
April 30, 2024
8:48 AM
by: The Rural Mirror ಸುದ್ದಿಜಾಲ
20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |
April 27, 2024
9:05 PM
by: ದ ರೂರಲ್ ಮಿರರ್.ಕಾಂ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror