Advertisement
ರಾಷ್ಟ್ರೀಯ

ವೆಸ್ಟ್​ಇಂಡೀಸ್​ ವಿರುದ್ಧ ಭಾರತಕ್ಕೆ 125 ರನ್​ಗಳ ಭರ್ಜರಿ ಗೆಲುವು

Share

ಮ್ಯಾಂಚೆಸ್ಟರ್​: ವಿಶ್ವಕಪ್​ನಲ್ಲಿ ಸ್ಥಿರ ನಿರ್ವಹಣೆಯೊಂದಿಗೆ ಅಜೇಯವಾಗಿ ಉಳಿದಿರುವ ಟೀಂ ಇಂಡಿಯಾ ತನ್ನ ಜಯದ ಓಟವನ್ನು ಮುಂದುವರಿಸಿದ್ದು, ವೆಸ್ಟ್​ ಇಂಡೀಸ್​ ವಿರುದ್ಧ 125 ರನ್​ಗಳ ಭರ್ಜರಿ ಜಯ ದಾಖಲಿಸಿದೆ.

ಭಾರತ ನೀಡಿದ 269 ರನ್​ ಗುರಿ ಬೆನ್ನತ್ತಿದ ವೆಸ್ಟ್​ ಇಂಡೀಸ್​ ತಂಡ 34.2 ಓವರ್​ಗಳಲ್ಲಿ 143 ರನ್​ಗಳಿಗೆ ಆಲೌಟಾಯಿತು. ಈ ಮೂಲಕ ಸತತ 3 ನೇ ಸೋಲು ಕಂಡಿತು.

ಭಾರತ ನೀಡಿದ್ದ ಗುರಿಯನ್ನು ಬೆನ್ನತ್ತಿದ ವೆಸ್ಟ್​ ಇಂಡೀಸ್​ ತಂಡ 16 ರನ್​ ಗಳಿಸುವಷ್ಟರಲ್ಲಿ ಕ್ರಿಸ್​ ಗೇಲ್​ (6) ಮತ್ತು ಶಾಯ್​ ಹೋಪ್​ (5) ವಿಕೆಟ್​ ಕಳೆದುಕೊಂಡಿತು. ನಂತರ ಜತೆಯಾದ ಆಂಬ್ರಿಸ್​ (31) ಮತ್ತು ಪೋರನ್​ (28) ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಲು ಯತ್ನಿಸಿದರು. ಆದರೆ ಇವರಿಬ್ಬರು ಔಟಾದ ನಂತರ ವೆಸ್ಟ್​ ಇಂಡೀಸ್​ನ ಮಧ್ಯಮ ಕ್ರಮಾಂಕ ಮತ್ತು ಕೆಳ ಕ್ರಮಾಂಕದ ಆಟಗಾರರು ಬೇಗ ಔಟಾಗುವ ಮೂಲಕ ವೆಸ್ಟ್​ ಇಂಡೀಸ್​ ತಂಡ ಹೀನಾಯ ಸೋಲನುಭವಿಸಿತು.

ಭಾರತದ ಪರ ಮೊಹಮದ್​ ಶಮಿ 4, ಬುಮ್ರಾ, ಚಾಹಲ್​ ತಲಾ 2 ವಿಕೆಟ್​ ಮತ್ತು ಪಾಂಡ್ಯ, ಕುಲದೀಪ್​ ಯಾದವ್​ ತಲಾ 1 ವಿಕೆಟ್​ ಪಡೆದರು.

ಇದಕ್ಕೂ ಮುನ್ನ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ ಭಾರತ ತಂಡ ವಿರಾಟ್​ ಕೊಹ್ಲಿ (72) ಮತ್ತು ಎಂ.ಎಸ್​. ಧೋನಿ (56*) ಗಳಿಸಿದ ಅರ್ಧಶತಕಗಳ ನೆರವಿನಿಂದ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್​ ನಷ್ಟಕ್ಕೆ 268 ರನ್​ ಗಳಿಸಿತು.

ಟೀಂ ಇಂಡಿಯಾ ಪರ ಆರಂಭಿಕ ಆಟಗಾರ ರೋಹಿತ್​ ಶರ್ಮ (18) ರನ್​ ಗಳಿಸಿ ಔಟಾದರು. ನಂತರ ಕೆ.ಎಲ್​. ರಾಹುಲ್​ ಜತೆಯಾದ ಕೊಹ್ಲಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಲು ಯತ್ನಿಸಿದರು. ಆದರೆ ಅರ್ಧಶತಕ ವಂಚಿತರಾದ ರಾಹುಲ್​ 48 ರನ್​ ಗಳಿಸಿ ಔಟಾದರು. ರಾಹುಲ್​ ಔಟಾದ ಬಳಿಕ ಬಂದ ವಿಜಯ್​ ಶಂಕರ್​ (14) ಮತ್ತು ಕೇದಾರ್​ ಜಾಧವ್​ (7) ರನ್​ ಗಳಿಸಿ ಔಟಾದರು. ಈ ಹಂತದಲ್ಲಿ ಜತೆಯಾದ ಧೋನಿ ಮತ್ತು ಹಾರ್ದಿಕ್​ ಪಾಂಡ್ಯ (46) ಉತ್ತಮ ಜತೆಯಾಟವಾಡಿ ತಂಡದ ಮೊತ್ತವನ್ನು 250ರ ಗಡಿ ದಾಟಿಸಿದರು.

ವೆಸ್ಟ್​ ಇಂಡೀಸ್​ ಪರ ಕೇಮರ್​ ರೋಚ್​ 3, ಕಾಟ್ರೆಲ್ ಮತ್ತು ಹೋಲ್ಡರ್​ ತಲಾ​ 2 ವಿಕೆಟ್​ ಪಡೆದರು.  ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

17 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

20 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

20 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

24 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

1 day ago