ಸುಳ್ಯ: ಬೆಂಗಳೂರಿನ ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ವೈದ್ಯರು ಆರೋಪಿಸಿದ್ದು, ಹಲ್ಲೆ ಮಾಡಿರುವ ಕಾರ್ಯಕರ್ತರು ಕ್ಷಮೆ ಕೇಳಬೇಕು ಹಾಗೂ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ ಬೆಂಬಲ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಸುಳ್ಯ ಶಾಖೆಯಲ್ಲಿ ನ.8 ಶುಕ್ರವಾರ ಬೆಳಗ್ಗೆ 6 ರಿಂದ ನ.9 ಶನಿವಾರ ಬೆಳಿಗ್ಗೆ 6 ಗಂಟೆಯವರೆಗೆ ತುರ್ತು ಚಿಕಿತ್ಸೆ ಹೊರತು ಪಡಿಸಿ ಹೊರರೋಗಿ ವಿಭಾಗದಲ್ಲಿ ತಪಾಸಣೆ ನಡೆಸಲಾಗುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘ ಸುಳ್ಯ ಶಾಖೆಯ ಅಧ್ಯಕ್ಷ ಡಾ.ಬಿ.ಎನ್. ಶ್ರೀಕೃಷ್ಣ ಅವರು ತಿಳಿಸಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…