ಸುಳ್ಯ: ಪಶ್ಚಿಮ ಬಂಗಾಳದಲ್ಲಿ ಕರ್ತವ್ಯ ನಿರತ ಕಿರಿಯ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ರಾಷ್ಟ್ರ ವ್ಯಾಪಿ ಪ್ರತಿಭಟನೆಗೆ ಸುಳ್ಯದಲ್ಲಿಯೂ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸುಳ್ಯದಲ್ಲಿ ಖಾಸಗೀ ಆಸ್ಪತ್ರೆಗಳು ಮತ್ತು ಕ್ಲಿನಿಕ್ಗಳಲ್ಲಿ ಹೊರ ರೋಗಿ ವಿಭಾಗ ಸ್ಥಗಿತಗೊಂಡಿತ್ತು. ತುರ್ತು ಚಿಕಿತ್ಸಾ ವಿಭಾಗ ಮಾತ್ರ ಕಾರ್ಯಾಚರಿಸಿದ್ದು ತುರ್ತು ಚಿಕಿತ್ಸೆಗಳನ್ನು ಮಾತ್ರ ವೈದ್ಯರುಗಳು ನೀಡಿದ್ದರು. ಖಾಸಗೀ ಆಸ್ಪತ್ರೆಗಳಲ್ಲಿ ಮತ್ತು ಕ್ಲಿನಿಕ್ಗಳಲ್ಲಿ ಹೊರ ರೋಗಿ ವಿಭಾಗ ಸ್ಥಗಿತವಾದ ಕಾರಣ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ರಶ್ ಕಂಡು ಬಂದಿತ್ತು. ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಪ್ರತಿ ದಿನಕ್ಕಿಂತ ಹೆಚ್ಚು ರೋಗಿಗಳು ಆಗಮಿಸಿದ್ದರು ಎಂದು ತಾಲೂಕು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…