ಸುಳ್ಯ: ಪಶ್ಚಿಮ ಬಂಗಾಳದಲ್ಲಿ ಕರ್ತವ್ಯ ನಿರತ ಕಿರಿಯ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ರಾಷ್ಟ್ರ ವ್ಯಾಪಿ ಪ್ರತಿಭಟನೆಗೆ ಸುಳ್ಯದಲ್ಲಿಯೂ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸುಳ್ಯದಲ್ಲಿ ಖಾಸಗೀ ಆಸ್ಪತ್ರೆಗಳು ಮತ್ತು ಕ್ಲಿನಿಕ್ಗಳಲ್ಲಿ ಹೊರ ರೋಗಿ ವಿಭಾಗ ಸ್ಥಗಿತಗೊಂಡಿತ್ತು. ತುರ್ತು ಚಿಕಿತ್ಸಾ ವಿಭಾಗ ಮಾತ್ರ ಕಾರ್ಯಾಚರಿಸಿದ್ದು ತುರ್ತು ಚಿಕಿತ್ಸೆಗಳನ್ನು ಮಾತ್ರ ವೈದ್ಯರುಗಳು ನೀಡಿದ್ದರು. ಖಾಸಗೀ ಆಸ್ಪತ್ರೆಗಳಲ್ಲಿ ಮತ್ತು ಕ್ಲಿನಿಕ್ಗಳಲ್ಲಿ ಹೊರ ರೋಗಿ ವಿಭಾಗ ಸ್ಥಗಿತವಾದ ಕಾರಣ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ರಶ್ ಕಂಡು ಬಂದಿತ್ತು. ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಪ್ರತಿ ದಿನಕ್ಕಿಂತ ಹೆಚ್ಚು ರೋಗಿಗಳು ಆಗಮಿಸಿದ್ದರು ಎಂದು ತಾಲೂಕು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…