ಸುಳ್ಯ: ಪಶ್ಚಿಮ ಬಂಗಾಲದಲ್ಲಿ ಕರ್ತವ್ಯನಿರತ ಕಿರಿಯ ವೈದ್ಯರ ಮೇಲೆ ಹಲ್ಲೆ ಖಂಡಿಸಿ, ಭಾರತೀಯ ವೈದ್ಯಕೀಯ ಸಂಘ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸುಳ್ಯದಲ್ಲಿಯೂ ಖಾಸಗೀ ಆಸ್ಪತ್ರೆಗಳ ಸೇವೆಯಲ್ಲಿ ಅಡಚಣೆ ಉಂಟಾಗಲಿದೆ.
ಜೂನ್ 17ರಂದು ಬೆಳಗ್ಗೆ 6 ರಿಂದ ಜೂನ್ 18ರ ಬೆಳಗ್ಗೆ 6 ಗಂ ಖಾಸಗೀ ಆಸ್ಪತ್ರೆಗಳು ಮತ್ತು ಕ್ಲಿನಿಕ್ಗಳಲ್ಲಿ ಹೊರ ರೋಗಿ ವಿಭಾಗ ಸೇವೆ ಸ್ಥಗಿತಗೊಳಿಸಲಾಗುತ್ತಿದೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸಾ ವಿಭಾಗ ಎಂದಿನಂತೆ ಕಾರ್ಯನಿರ್ವಹಿಸಲಿದೆ. ತುರ್ತು ವಿಭಾಗ ಕಾರ್ಯನಿರ್ವಹಿಸುವುದರಿಂದ ಹೆಚ್ಚಿನ ಸಮಸ್ಯೆ ಉಂಟಾಗದು ಎಂದು ಹೇಳಲಾಗಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಅಡಚಣೆ ಆಗದು. ವೈದ್ಯರು, ಶುಶ್ರೂಷಕರು ಎಂದಿನಂತೆ ಕಾರ್ಯನಿರ್ವಹಿಸಲಿದ್ದು ಸರ್ಕಾರಿ ಆಸ್ಪತ್ರೆಗಳಲ್ಲಿ ಅಡಚಣೆಯಾಗದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ವೈದ್ಯರು, ಸಿಬ್ಬಂದಿ ಹಾಜರಾಗುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…