ಸುಳ್ಯ: ಪಶ್ಚಿಮ ಬಂಗಾಲದಲ್ಲಿ ಕರ್ತವ್ಯನಿರತ ಕಿರಿಯ ವೈದ್ಯರ ಮೇಲೆ ಹಲ್ಲೆ ಖಂಡಿಸಿ, ಭಾರತೀಯ ವೈದ್ಯಕೀಯ ಸಂಘ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸುಳ್ಯದಲ್ಲಿಯೂ ಖಾಸಗೀ ಆಸ್ಪತ್ರೆಗಳ ಸೇವೆಯಲ್ಲಿ ಅಡಚಣೆ ಉಂಟಾಗಲಿದೆ.
ಜೂನ್ 17ರಂದು ಬೆಳಗ್ಗೆ 6 ರಿಂದ ಜೂನ್ 18ರ ಬೆಳಗ್ಗೆ 6 ಗಂ ಖಾಸಗೀ ಆಸ್ಪತ್ರೆಗಳು ಮತ್ತು ಕ್ಲಿನಿಕ್ಗಳಲ್ಲಿ ಹೊರ ರೋಗಿ ವಿಭಾಗ ಸೇವೆ ಸ್ಥಗಿತಗೊಳಿಸಲಾಗುತ್ತಿದೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸಾ ವಿಭಾಗ ಎಂದಿನಂತೆ ಕಾರ್ಯನಿರ್ವಹಿಸಲಿದೆ. ತುರ್ತು ವಿಭಾಗ ಕಾರ್ಯನಿರ್ವಹಿಸುವುದರಿಂದ ಹೆಚ್ಚಿನ ಸಮಸ್ಯೆ ಉಂಟಾಗದು ಎಂದು ಹೇಳಲಾಗಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಅಡಚಣೆ ಆಗದು. ವೈದ್ಯರು, ಶುಶ್ರೂಷಕರು ಎಂದಿನಂತೆ ಕಾರ್ಯನಿರ್ವಹಿಸಲಿದ್ದು ಸರ್ಕಾರಿ ಆಸ್ಪತ್ರೆಗಳಲ್ಲಿ ಅಡಚಣೆಯಾಗದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ವೈದ್ಯರು, ಸಿಬ್ಬಂದಿ ಹಾಜರಾಗುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…