Advertisement
ಸುದ್ದಿಗಳು

ವೈರಸ್ ಹರಡುವುದು ತಡೆಗೆ ಶಾಂತಿ ಹವನ | ಆಯುರ್ವೇದ ಗಿಡಮೂಲಿಕೆಗಳೇ ಇಲ್ಲಿ ಹವಿಸ್ಸು | ಹೇಗೆ ವರ್ಕ್ಔಟ್ ಆಗುತ್ತದೆ ?

Share

ಸುಳ್ಯ: ದೇಶದಾದ್ಯಂತ ಕೊರೊನಾ ವೈರಸ್ ಹರಡುವುದು ತಡೆಗೆ ವಿವಿಧ ಪ್ರಯತ್ನ ಮಾಡಲಾಗುತ್ತಿದೆ. ಲಾಕ್ಡೌನ್ ಮೂಲಕ ಜನರು ಮನೆಯಿಂದ ಹೊರಬರದಂತೆ ಎಚ್ಚರಿಕೆ ವಹಿಸುವುದು  ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು  ನಡೆಯುತ್ತಿದೆ. ಇದರ ಜೊತೆಗೆ ಆಯುರ್ವೇದ ಗಿಡಮೂಲಿಕೆಗಳ ಹವಿಸ್ಸಿನಿಂದ ಶಾಂತಿ ಹವನ ಮಾಡುವ ಮೂಲಕ ವೈರಸ್ ಪ್ರಭಾವ ತಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಲೋಕಹಿತಕ್ಕಾಗಿ ಈ ಕಾರ್ಯದಲ್ಲಿ ಸಾಮಾಜಿಕ ಕಾಳಜಿಯೂ ಇದೆ.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆಯ ಹಿರಿಯ ವೈದಿಕ ವಿದ್ವಾಂಸರೂ, ಮಾರ್ಗದರ್ಶಕರೂ ಆಗಿರುವ ವೇದಗುರು ಕರುವಜೆ ಕೇಶವ ಜೋಯಿಸರ ನೇತೃತ್ವದಲ್ಲಿ ಈ ಹವನ ನಡೆಯುತ್ತಿದೆ. ಮಾ.20 ರಿಂದ ಆರಂಭವಾಗಿರುವ ಈ ಹವನ ಕಿಲೋ ಮೀಟರ್ ಗೆ ಒಂದು ಮನೆಯಂತೆ ನಿರಂತರವಾಗಿ ನಡೆಯುತ್ತಿದೆ. ಯಾವುದೇ ಫಲಾಪೇಕ್ಷೆ ಇಲ್ಲದೆ ಸ್ವಆಸಕ್ತಿಯಿಂದ ಈ ಕಾರ್ಯ ನಡೆಸುತ್ತಿರುವ ಕರುವಜೆ ಕೇಶವ ಜೋಯಿಸರು ಲೋಕವು ಸಂಕಷ್ಟದಲ್ಲಿ ಇರುವ ಸಂದರ್ಭ ಯಜ್ಞದ ಮೂಲಕ ಜನರಿಗೆ ಮಾನಸಿಕ ಧೈರ್ಯ ತುಂಬುವ ಕಾರ್ಯ ನಡೆಸುತ್ತಿದ್ದಾರೆ. ಜೊತೆಗೆ ಆಯುರ್ವೇದದ ಸಾರವನ್ನೂ ತಿಳಿಸುತ್ತಿದ್ದಾರೆ.

 

 

ಆಯುರ್ವೇದಲ್ಲಿ  ವಿವಿಧ ಗಿಡ ಮೂಲಿಕೆಗಳು ಕಷಾಯಗಳು , ಲೇಹಗಳು, ಆಸವಗಳು, ಅರಿಷ್ಟಗಳು  ದೇಹಕ್ಕೆ ರಕ್ಷಣೆ ನೀಡುತ್ತದೆ, ಅದರಿಂದ ದೇಹದ ಆರೋಗ್ಯ ಕಾಪಾಡುತ್ತದೆ.  ವ್ಯಾಧಿಗಳು ನಿವಾರಣೆಯಾಗುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈಗ ಅಂತಹದ್ದೇ ವನಸ್ಪತಿಗಳನ್ನು ಯಜ್ಞಕ್ಕೆ ಹವಿಸ್ಸಿನ ರೂಪದಲ್ಲಿ  ಅರ್ಪಿಸಿ ಆ ಧೂಮವು ಪರಿಸರಕ್ಕೆ ಹರಡಿದರೆ ವೈರಾಣುಗಳ ಪ್ರಭಾವ ತಗ್ಗಿಸಬಹುದು  ಎಂಬುದು ಗ್ರಂಥಗಳಲ್ಲಿ ಹೇಳಲಾಗಿದೆ. ಈಗ ಅದೇ ಮಾದರಿಯಲ್ಲಿ  ಪ್ರಯತ್ನ ಮಾಡಲಾಗುತ್ತಿದೆ. ಹಾಗೆಂದು  ಈ ಯಜ್ಞ ಮಾಡಿದ ತಕ್ಷಣವೇ ವೈರಾಣುಗಳು ಸುಳಿಯುವುದಿಲ್ಲ ಎಂಬುದಲ್ಲ , ಪರಿಸರವು ಯಜ್ಞದ ಧೂಮದ ಮೂಲಕ ಸ್ವಚ್ಛವಾಗಿ ವೈರಾಣುಗಳಿದ್ದರೆ ಅವುಗಳ ಪ್ರಭಾವ ತಗ್ಗಬಹುದು  ಎಂದು ಹೇಳುತ್ತಾರೆ ಕೇಶವ ಜೋಯಿಸರು.

ಇಲ್ಲಿ ಯಜ್ಞಕ್ಕೆ ಅಮೃತಬಳ್ಳಿ, ಕಿರಾತಕಡ್ಡಿ, ನೆಕ್ಕಿ , ಹಿಪ್ಪಲಿ, ಎಕ್ಕೆ , ಅಶೋಕ, ಉತ್ತರಣೆ, ಅತ್ತಿ, ಅರಸಿನ, ಗೋಳಿ, ಗರಿಕೆ, ಲವಂಗ, ನೆಲ್ಲಿ  ಹೀಗೆ ವಿವಿಧ ಬಗೆಯ ಆಯುರ್ವೇದ ಗುಣವುಳ್ಳ ವಸ್ತುಗಳನ್ನು ಹವಿಸ್ಸಾಗಿ ಅರ್ಪಣೆ ಮಾಡಲಾಗುತ್ತದೆ.

ಪ್ರತೀ ಮನೆಯಲ್ಲಿ  ಕೂಡಾ ಪ್ರತಿಯೊಬ್ಬರು ಆಯುರ್ವೇದ ಗುಣವುಳ್ಳ ವಸ್ತುಗಳನ್ನು ಹವಿಸ್ಸಾಗಿ ಪ್ರತೀ ದಿನವೂ ಮನೆಯವರೇ ಮಾಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದಲ್ಲದೆ ಆ ವಾತಾವರಣ ಶುದ್ಧವಾಗಬಹುದು  ಎಂದು ಕೇಶವ ಜೋಯಿಸರು ಹೇಳುತ್ತಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

10 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

14 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

14 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

14 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

14 hours ago

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

1 day ago