Advertisement
ಸುದ್ದಿಗಳು

ವೈವಿಧ್ಯಮಯ ಬದುಕಿಗೆ ಸಾರ್ಥಕತೆ ತರಬೇಕು: ಅಣ್ಣಾ ವಿನಯಚಂದ್ರ

Share

ಬೆಳ್ಳಾರೆ: ಬದುಕು ವೈವಿಧ್ಯಮಯವಾಗಿದ್ದು, ಅದಕ್ಕೆ ಸಾರ್ಥಕತೆ ತರಬೇಕು. ಹುಟ್ಟು ಸಾವಿನ ಮಧ್ಯೆ ಇರುವುದೇ ಜೀವನವಾಗಿದೆ. ಬದುಕೆಂಬ ಸಮುದ್ರವನ್ನು ಈಜಿ ದಡ ಸೇರುವ ಸಾಮರ್ಥ್ಯವನ್ನು ನಾವು ಹೊಂದಲು ಪ್ರಯತ್ನಿಸಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಹೇಳಿದರು.

ಕಳಂಜ ಗ್ರಾಮ ಪಂಚಾಯತ್‍ನಲ್ಲಿ ಬಿಲ್‍ಕಲೆಕ್ಟರ್ ಆಗಿ ಕರ್ತವ್ಯದಲ್ಲಿದ್ದು, ಪದೋನ್ನತಗೊಂಡು ವರ್ಗಾವಣೆಯಾದ ಮೋನಪ್ಪ ಕೋಡಿಯಡ್ಕ ಅವರಿಗೆ ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದ ಅವರು ವೈಯಕ್ತಿಕ ಬದುಕಿನೊಂದಿಗೆ ಸಮಾಜದ ಏಳಿಗೆಗೂ ಶ್ರಮಿಸಬೇಕು. ನಾಲ್ಕು ಜನರ ಆಶಿರ್ವಾದ ನಮ್ಮ ಯಶಸ್ಸಿಗೆ ಬುನಾದಿ ಎಂದರು.

ಬಿಲ್‍ಕಲೆಕ್ಟರ್ ಆಗಿ ಸೇವೆ ಸಲ್ಲಿಸಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾಗಿ ಭಡ್ತಿಯೊಂದಿಗೆ ಮಂಗಳೂರು ತಾಲೂಕು ಪಂಚಾಯತ್‍ಗೆ ವರ್ಗಾವಣೆಯಾದ ಮೋನಪ್ಪ ಕೋಡಿಯಡ್ಕ ಅವರನ್ನು ಅಣ್ಣಾ ವಿನಯಚಂದ್ರ ಕಳಂಜ ಗ್ರಾಮ ಪಂಚಾಯತ್ ಪರವಾಗಿ ಸನ್ಮಾನಿಸಿ ಗೌರವಿಸಿದರು. ಸನ್ಮಾನಿತರಿಂದ ಕಳಂಜ ಗ್ರಾಮ ಪಂಚಾಯತ್‍ಗೆ ನೆನಪಿನ ಕೊಡುಗೆಯನ್ನು ನೀಡಲಾಯಿತು. ಸಾರ್ವಜನಿಕರು ಸನ್ಮಾನಿತರ ಕುರಿತು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಯಶೋದಾ ಎಂ. ವಹಿಸಿ ಸ್ವಾಗತಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಸೌಮ್ಯ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಕೆ.ಆರ್ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸದಸ್ಯ ಲಕ್ಷ್ಮೀಶ ಕಜೆಮೂಲೆ ಪ್ರಸ್ತಾವಿಸಿ ವಂದಿಸಿದರು. ಸಿಬ್ಬಂದಿ ಗಿರಿಧರ ಕಳಂಜ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

7 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

24 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago