ಸುಳ್ಯ: ತನ್ನ ಗುರಿ ಸಾಧಿಸಬೇಕಾದರೆ ವಿದ್ಯಾರ್ಥಿಯು ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ತನ್ನನ್ನು ಅಧೋಗತಿಗೆ ತಳ್ಳುವ ಹವ್ಯಾಸ, ಸಹವಾಸ ಮತ್ತು ಆಲೋಚನೆಗಳಿಂದ ಹೊರಬಂದು ಧನಾತ್ಮಕವಾಗಿ ಆಲೋಚನೆ ಮಾಡುತ್ತಾ ಆರೋಗ್ಯಕರ ಬೆಳವಣಿಗೆಯನ್ನು ಕಾಣುವಂತಾಗಬೇಕು ಎಂದು ನೆಹರು ಮೆಮೋರಿಯಲ್ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಮಾನವಿಕ ಸಂಘ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಕಾಲೇಜಿನ ಕಲಾ ವಿಭಾಗದ ಅಧ್ಯಾಪಕರು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel