Advertisement
ರಾಷ್ಟ್ರೀಯ

ವ್ಯಕ್ತಿಯ ಸಾಧನೆಗೆ ತಾಯಿಯ ಆಶೀರ್ವಾದದ ಬಲ ಬೇಕು :ಜಶೋದಾ ಬೆನ್ ಮೋದಿ

Share

ಹೊಸನಗರ : ಜಗತ್ತಿಗೆ ಜ್ಞಾನದ ಬೆಳಕು ನೀಡಿದ ಶಂಕರಾಚಾರ್ಯರಿಗೆ ತಾಯಿಯ ಆಶೀರ್ವದ ಬಲ ವಿಶೇಷವಾಗಿತ್ತು. ಪ್ರತಿಯೊಬ್ಬರು ಇದನ್ನು ಗಮನಿಸಿಬೇಕಿದೆ, ಎಲ್ಲಿ ಆಧ್ಮಾತ್ಮಿಕ ಒಲವು ಇದೆಯೋ ಅಲ್ಲಿ ದೈವೀ ಬಲ ಇರಲಿದೆ ಎಂದು ಜಶೋದಾ ಬೆನ್ ಮೋದಿ ಹೇಳಿದರು.

Advertisement
Advertisement

ರಾಮಚಂದ್ರಾಪುರಮಠದ ಮಹಾನಂದಿ ಗೋಲೋಕದ ಆವರಣದಲ್ಲಿರುವ ಗೋವರ್ಧನಗಿರಿಧಾರಿ ಗೋಪಾಲಕೃಷ್ಣ ದೇವಾಲಯದಲ್ಲಿ ಬುಧವಾರ ನಡೆದ ಕೋಟಿ ವಿಷ್ಣು ಸಹಸ್ರನಾಮ ಪಠಣ ಸಮರ್ಪಣೆ, ಸಹಸ್ರ ಛತ್ರ ಮೆರವಣಿಗೆ, ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಛತ್ರ ಸಮರ್ಪಣೆ, ಸೋಪಾನಮಾಲೆ ನಿರ್ಮಾಣಕ್ಕೆ ಶಿಲಾನ್ಯಾಸ, ಗೋ ಬಂಧಮುಕ್ತಿ, ಗೋಶಾಲೆ ಲೋಕಾರ್ಪಣೆ, ಗೋ ಆಸ್ಪತ್ರೆ ಉದ್ಘಾಟನೆ, ಗೋ ಮ್ಯೂಸಿಯಂ ಲೋಕಾರ್ಪಣೆಯ ಕೃಷ್ಣಾರ್ಪಣ್ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.

ಅಂದು ಶಂಕರಾಚಾರ್ಯರ ಸಾಧನೆಗಳನ್ನು ಮತ್ತೆ ನೆನಪಿಸುವ ರೀತಿಯಲ್ಲಿ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರ ಶ್ರೀಗಳು ಕಾರ್ಯ ಮಾಡುತ್ತಿರುವುದು ಸಂತೋಷದ ಸಂಗತಿ. ಅದೇ ಉದ್ದೇಶಕ್ಕೆ ದೂರದ ಗುಜರಾತಿನಿಂದ ಕರ್ನಾಟಕದ ಈ ತುದಿಯವರೆಗೆ ಪಯಣ ಬೆಳೆಸಿದ ನಾವು ಇಲ್ಲಿ ಗೋವರ್ಧನ ಗಿರಿಧಾರಿ ಶ್ರೀ ಕೃಷ್ಣನ ದೇವಾಲಯದ ಸುಂದರ ವಾತಾವರಣದಲ್ಲಿ ಮತ್ತೆ ಶಂಕರಾಚಾರ್ಯರಿಂದ ಆಶೀರ್ವಾದ ಪಡೆಯುತ್ತಿರುವುದು ನಮ್ಮ ಪುಣ್ಯ ವಿಶೇಷ, ನಿಜಕ್ಕೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸೇರಿದ ಭಕ್ತರ ನಡುವೆ ವೈಯಕ್ತಿಕವಾದ ಪ್ರಾರ್ಥನೆಯನ್ನು ದೇವರಲ್ಲಿ ಸಮರ್ಪಿಸುತ್ತಿರುವ ಈ ಕ್ಷಣ ನನ್ನ ಪಾಲಿಗೆ ಧನ್ಯತೆಯ ಕ್ಷಣ ಎಂದರು. ದೇಶ ಸುಭಿಕ್ಷೆ ಮತ್ತು ಸಮೃದ್ದಿಯಿಂದ ಇರಬೇಕಾದರೆ ಒಳ್ಳೆಯ ಮನಸ್ಸುಗಳಿಂದ ಇಲ್ಲಿರುವ ದೇವಶಕ್ತಿಗಳಲ್ಲಿ ಪ್ರಾರ್ಥಿಸಬೇಕು ಎಂದ ಅವರು ಸಮಷ್ಠಿಯ ಪ್ರಾರ್ಥನೆಯ ಫಲವಾಗಿ ಇಂದು ರಾಮಮಂದಿರವೂ ನಿರ್ಮಾಣವಾಗುತ್ತಿದೆ ಅದು ದೇಶ ಒಳ್ಳೆಯ ದಾರಿಯತ್ತ ಸಾಗುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.  ಇದೇ ವೇಳೆ ಇಲ್ಲಿಯ ಗೋವರ್ಧನ ಗಿರಿಧಾರಿ ಗೋಪಾಲಕೃಷ್ಣ ದೇವಾಲಯದಲ್ಲಿ ರಜತ ಛತ್ರ ಸಮರ್ಪಣೆ ಮೂಲಕ ತಮ್ಮ ವೈಯಕ್ತಿಕ ಹರಕೆಯನ್ನು ತೀರಿಸಿದರು.

ದಿವ್ಯಸಾನ್ನಿಧ್ಯ ವಹಿಸಿದ್ದ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿ, ತ್ಯಾಗದ ಜೀವನದಿಂದ ಮಾತ್ರ ದೇಶಕ್ಕೆ ಒಳಿತಿದೆ ಎನ್ನುವುದನ್ನು ಕಂಡುಕೊಂಡ ದೇಶ ನಮ್ಮ ಭಾರತ. ಅಂತಹ ಹಿರಿಮೆ ಇರುವ ನಮ್ಮ ದೇಶದಲ್ಲಿ ಪತಿಯ ಸಾಧನೆಯ ಹಿಂದೆ ಪತ್ನಿಯ ಪುಣ್ಯ ಇರುತ್ತದೆ ಎಂಬ ಸತ್ಯವನ್ನು ಯಾರೂ ಮರೆಯುವಂತ್ತಿಲ್ಲ ಎಂದರು. ಗೋವರ್ಧನಗಿರಿಧಾರಿ ಗೋಪಾಲಕೃಷ್ಣ ದೇವಾಲಯದ ಪರಿಸರ ಗೋಸಂರಕ್ಷಣೆಯ ಅಡಿಶಿಲೆ. ಗೋಸ್ವರ್ಗ ಎನ್ನುವುದು ಶಿಖರ. ಅಡಿಶಿಲೆ ಅತ್ಯಂತ ದೃಡವಾಗಿದ್ದಾಗ ಶಿಖರ ಶೋಭಿಸಲಿದೆ ಇದಕ್ಕೆ ಪೂರಕವಾಗಿ ಇಲ್ಲಿ ಜಗತ್ತು ಗುರುತಿಸುವ ರೀತಿಯಲ್ಲಿ 31 ಭಾರತೀಯ ದೇಶೀಯ ಗೋತಳಿಗಳು ಇದೆ . ಇಂದಿನಿಂದ ಈ ಪರಿಸರ ವಿಷ್ಣು ಸಹಸ್ರನಾಮ ಸುಕ್ಷೇತ್ರ ಎನಿಸಿಕೊಂಡಿದೆ. ಇದಕ್ಕೆ ಕಾರಣವಾಗಿರುವವರು ಕೃಷ್ಣನೂ ಹೌದು..ಪಾರ್ಥ ಸಾರಥಿಯೂ ಹೌದು ಎಂದರು.

ಇದೇ ವೇಳೆ ಗೋ ಮ್ಯೂಸಿಯಂಗೆ ಕಾರಣಕರ್ತರಾಗಿರುವ ಕೃಷ್ಣರಾಜ್ ಅರಸ್‍ರವರಿಗೆ ಕೃಷ್ಣಾನುಗ್ರಹ ಪ್ರದಾನ ಮಾಡಲಾಯಿತು. ವಿಷ್ಣು ಸಹಸ್ರನಾಮ ಪಠಣ ನೇತೃತ್ವವಹಿಸಿದ್ದ ಅರಳುಮಲ್ಲಿಗೆ ಪಾರ್ಥಸಾರಥಿ, ಪಟ್ಟಣಗೆರೆ ಶ್ರೀವಿಜಯದುರ್ಗ ಪರಮೇಶ್ವರಿ ಶ್ರೀ ಸನ್ನೀಧಾನದ ದಿನೇಶ್ ಗುರೂಜಿ, ಎಂಆರ್‍ಪಿಎಲ್ ಜನರಲ್ ಮ್ಯಾನೇಜರ್ ಜಯರಾಂ ಭಟ್, ಉದ್ಯಮಿಗಳಾದ ರಾಘವೇಂದ್ರ, ಜಿ.ಎಂ. ಹೆಗಡೆ, ಜಿ.ವಿ. ಹೆಗಡೆ, ಬಿ. ರವಿ,ಎನ್.ಎಚ್. ಇಲ್ಲೂರು, ಹವ್ಯಕ ಮಹಾಮಂಡಲದ ಅಧ್ಯಕ್ಷ ಆರ್.ಎಸ್. ಹೆಗಡೆ, ಮಹಾನಂದಿ ಗೋಲೋಕದ ಡಾ. ಸೀತಾರಾಮ ಪ್ರಸಾದ್, ಬರುವೆ ಸುಬ್ಬಣ್ಣ ಇದ್ದರು. ರಮೇಶ್ ಹೆಗಡೆ ಗುಂಡೂಮನೆ ನಿರೂಪಿಸಿದರು.

ಅರಳು ಮಲ್ಲಿಗೆ ಪಾರ್ಥಸಾರಥಿಯವರ ಹರಿದಾಸ ಹಾಡುಗಳ ಪುಸ್ತಕವನ್ನು ಇದೇ ವೇಳೆ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಲೋಕಾರ್ಪಣೆ ಮಾಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

9 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

9 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago